ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಕಮರೂರು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗದ ಕುಟುಂಬದವರಿಗೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಮಹೇಶ ಶಕುನವಳ್ಳಿ ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಸೋಮವಾರ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಚಂದ್ರಗುತ್ತಿ ಹೋಬಳಿಯ ಬೆನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮರೂರು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ಆಗ್ರಹಿಸಿ ಹಮ್ಮಿಕೊಂಡ ಧರಣಿಯ ನೇತೃತ್ವವಹಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮದಲ್ಲಿ ಸ್ಮಾಶನ ಭೂಮಿ ಮಂಜೂರು ಮಾಡುವಂತೆ ಸರ್ಕಾರದ ಆದೇಶವಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಅಲೆಮಾರಿಗಳು ಬದುಕು ಕಟ್ಟಿಕೊಳ್ಳಲು ಹೈರಾಣಾಗಿದ್ದು, ಮತ್ತೆ ಸಾವಿನಲ್ಲೂ ಮುಕ್ತಿ ಕಾಣಲು ಸ್ಮಶಾನವಿಲ್ಲದೆ ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಮಶಾನ ಭೂಮಿ ಮಂಜೂರಾತಿ ಮಾಡಲು ಮುಂದಾಗದಿದ್ದರೆ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಮತ್ತೊಂದಡೆ ಜನವಸತಿ ಮತ್ತು ಶಾಲೆಗಳು ಇಲ್ಲದಿರುವ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಬೇಕು ಎಂದು ಆದೇಶವಿದ್ದರೂ, ಅಲೆಮಾರಿಗಳ ವಾಸ ಸ್ಥಳ ಮತ್ತು ಶಾಲೆಯ ಸಮೀಪದಲ್ಲಿಯೇ ಘಟಕ ಸ್ಥಾಪನೆ ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post