ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಹುನಿರೀಕ್ಷಿತ ಗೌರವ್ ಕಾಶಿ ದರ್ಶನ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದು, ಈ ಮೂಲಕ ರಾಜ್ಯದ ಯಾತ್ರಾರ್ಥಿಗಳಿಗೆ ಕೊಡುಗೆಯನ್ನು ನೀಡಿದ್ದಾರೆ.
ಕೆಎಸ್’ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಈ ವಿಶೇಷ ರೈಲಿಗೆ ಚಾಲನೆ ನೀಡಿದ ಪ್ರಧಾನಿಯವರು, ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದಿದ್ದಾರೆ.
ರಾಜ್ಯ ಧಾರ್ಮಿಕ ಮತ್ತು ದತ್ತಿ ಇಲಾಖೆ ವತಿಯಿಂದ ಈ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಈ ರೈಲು ಕಾಶಿ ಯಾತ್ರಿಗರಿಗೆ ಹೇಗೆ ಸಹಕಾರಿ?
- ಯಾತ್ರಿಗಳನ್ನು ಕಾಶಿ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ಯಾತ್ರಾ ಸ್ಥಳಗಳಿಗೆ ತೆರಳಬಹುದು
- ಈ ರೈಲು ಒಟ್ಟು ಒಂದು ವಾರದಲ್ಲಿ ಬೆಂಗಳೂರಿಗೆ ಮರಳಿಲಿದೆ
- ರೈಲಿಗೆ 20 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ
- ರಾಜ್ಯ ಸರ್ಕಾರವು 5 ಸಾವಿರ ಸಹಾಯನಧನ ಒದಗಿಸುತ್ತಿದೆ
- ಯಾತ್ರಿಕರು 15 ಸಾವಿರ ರೂ. ಹಣ ಪಾವತಿಸಬೇಕು
- ಈ ಶುಲ್ಕವು ಊಟೋಪಚಾರಗಳನ್ನು ಒಳಗೊಂಡಿದೆ
- ಯಾತ್ರಾ ಸ್ಥಳಗಳಲ್ಲಿ ತಂಗಲು ವ್ಯವಸ್ಥೆ
- 3 ಟಯರ್ ಎಸಿ ಸೇರಿ 14 ಬೋಗಿಗಳು ಈ ರೈಲಿನಲ್ಲಿವೆ
- ಎಲ್ಲ ಬೋಗಿಗಳಲ್ಲಿ ರಾಜ್ಯ ದೇವಾಲಯಗಳ ಚಿತ್ರಗಳಿವೆ
- ತುರ್ತು ವೈದ್ಯಕೀಯ ಸೇವಾ ವ್ಯವಸ್ಥೆಯಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post