Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಮಾಧ್ವ ಸಾರಸ್ವತ ಲೋಕದಲ್ಲಿ ಮಡುಗಟ್ಟಿದ ಶೋಕ | ನಿಬ್ಬೆರಗಾಗಿಸುವ ಆಚಾರ್ಯರ ಸಾಧನೆ

November 21, 2022
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಧಾರವಾಡ |

ರಾಜ್ಯದ ಪ್ರಸಿದ್ಧ ವಿದ್ವಾಂಸರಾಗಿದ್ದ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ(73) ಅವರು ಹರಿಪಾದ ಸೇರಿದ್ದು, ನಿನ್ನೆ ಸಂಜೆ ಆಚಾರ್ಯರ ಅಂತ್ಯಸAಸ್ಕಾರ ನೆರವೇರಿತು.

ಮಾಧ್ವ ಪ್ರಪಂಚದ ಖ್ಯಾತ ಪಂಡಿತ ಶ್ರೇಷ್ಠರು, ವಾಗ್ರಿಗಳು, ಲೇಖಕರು ಶ್ರೀಸತ್ಯಪ್ರಮೋದ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ವಿಶೇಷ ಅನುಗ್ರಹಕ್ಕೆ ಪಾತ್ರರಾದ ಧ್ಯಾನಪ್ರಮೋದ ಪುರಸ್ಕೃತರು. ಶ್ರೀ ಹರಿಗೆ ಇಷ್ಟವಾದ ದಿನದಂದೇ ಹರಿಪಾದ ಸೇರಿರುವುದು ವಿಶೇಷ.
ಆಚಾರ್ಯರ ಕಿರು ಪರಿಚಯ
ಪಂಡಿತ ಮಳಗಿ ಜಯತೀರ್ಥಾಚಾರ್ಯರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಧಾರವಾಡದ ವೇದವ್ಯಾಸ ವಿದ್ಯಾಪೀಠದ ಸ್ಥಾಪಕ ಅಧ್ಯಕ್ಷರಾಗಿ, ಅನೇಕ ಗ್ರಂಥಗಳ ಕರ್ತೃವಾಗಿ, ಧಾರ್ಮಿಕ ಪತ್ರಿಕೆಗಳ ಸಂಪಾದಕರಾಗಿ, ಪ್ರವಚನಕಾರರಾಗಿ ಮಾಧ್ವವಾಙ್ಮಯಕ್ಕೆ ವಿಶೇಷವಾಗಿ ಸೇವೆ ಸಲ್ಲಿಸಿದ ವಿದ್ವಾಂಸರು.

ಪಂಡಿತ ಮಳಗಿ ಜಯತೀರ್ಥಾಚಾರ್ಯರು. ಧಾರವಾಡನಗರವನ್ನು ಮಾಧ್ವಸಿದ್ಧಾಂತದ ಮಹಾಕೇಂದ್ರವನ್ನಾಗಿ ರೂಪಿಸಿದ ಮಹನೀಯರಲ್ಲಿ ಪ್ರಮುಖರಾದ ಶ್ರೀಮಳಗಿ ಜಯತೀರ್ಥಾಚಾರ್ಯರು ಜನಿಸಿದ್ದು 1949ರ ಜೂನ್ 5ರಂದು. ಜವಾಹರಲಾಲ್ ಸಂಸ್ಕೃತವಿದ್ಯಾಲಯದಿಂದ ಸಾಹಿತ್ಯ ಶಿರೋಮಣಿ, ಭಾರತೀಯ ವಿದ್ಯಾಭವನ, ಮುಂಬಯಿಯಿಂದ ಸಂಸ್ಕೃತಕೋವಿದ, ವಾರಣಾಸಿಯ ಸಂಪೂರ್ಣಾನಂದ ಸಂಸ್ಕೃತವಿಶ್ವವಿದ್ಯಾನಿಲಯದಿಂದ ವೇದಾಂತ ಶಾಸ್ತ್ರಿ, ಧರ್ಮಶಾಸ್ತ್ರಾಚಾರ್ಯ, ಅಲಹಾಬಾದ್ ಹಿಂದಿ ವಿಶ್ವವಿದ್ಯಾಲಯದಿಂದ ದರ್ಶನವಿಶಾರದ, ಹಿಂದಿ ವಿಶಾರದ, ಹಿಂದಿ ಸಾಹಿತ್ಯರತ್ನ, ಭಾರತೀಯ ವಿದ್ಯಾಭವನದಿಂದ ವೇದಾಂತ ವಾಚಸ್ಪತಿ, ಮುಂಬಯಿ ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪಡವಿ, ಪೂನಾ ವಿಶ್ವವಿದ್ಯಾನಿಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಶ್ರೀಮಳಗಿ ಜಯತೀರ್ಥಾಚಾರ್ಯರು ಮುಂಬಯಿಯ ಶ್ರೀಸತ್ಯಧ್ಯಾನ ವಿದ್ಯಾಪೀಠದಲ್ಲಿ ವೇದಾಂತ, ನ್ಯಾಯ, ಮೀಮಾಂಸಾ, ಸಾಹಿತ್ಯ,ವ್ಯಾಕರಣ ಮೊದಲಾದ ಶಾಸ್ತ್ರಗಳ ಆಳವಾದ ಅಧ್ಯಯನವನ್ನು ನಡೆಸಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಸಂಸ್ಕೃತವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಮಾಧ್ವ ವಾಙ್ಮಯಕ್ಕೆ ಹಾಗೂ ಸಂಸ್ಕೃತ ಸಾಹಿತ್ಯಕ್ಕೆ ಸಂಬಂಧಿಸಿದ ಅಸಂಖ್ಯ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವ ಶ್ರೀಮಳಗಿ ಜಯತೀರ್ಥಾಚಾರ್ಯರು ರಚಿಸಿರುವ ಗ್ರಂಥಗಳು 43ಕ್ಕೂ ಹೆಚ್ಚು ಎಂಬುದನ್ನು ಗಮನಿಸಿದಾಗ, ಶ್ರೀಆಚಾರ್ಯರ ಸಾರಸ್ವತ ಸೇವೆಯ ಕಿಂಚಿತ್ತು ಪರಿಚಯ ನಮಗಾಗುತ್ತದೆ. ಶ್ರೀಸತ್ಯಧ್ಯಾನರು, ಶ್ರೀಸತ್ಯಧ್ಯಾನರ ನುಡಿಮುತ್ತುಗಳು, ಕುಲಪತಿ, ಕ್ಷೇಮೇಂದ್ರನ ಸುಭಾಷಿತಗಳು, ಲೇಖನ ತರಂಗಿಣಿ, ಷಟ್ ಪ್ರಶ್ನೋಪನಿಷತ್ತು, ಪ್ರಮೋದ ತರಂಗಿಣೀ, ಸತ್ಯಧ್ಯಾನ ಜೀವನ ರಶ್ಮಿ,ಸತ್ಯಧ್ಯಾನ ಚರಿತಾಮೃತ, ಶ್ರೀಮಧ್ವರು ನಿರೂಪಿಸಿದ ರಾಮ, ಮಧ್ವರು ನಿರೂಪಿಸಿದ ಶ್ರೀಸೀತಾ, ಮಾಧವತೀರ್ಥರು, ಉತ್ತರಾದಿ ಮಠದ ಇತಿಹಾಸ, ಹರಿದಾಸಸಾಹಿತ್ಯದ ಇತಿಹಾಸ, ಶ್ರೀಸತ್ಯಬೋಧತೀರ್ಥರು, ಶ್ರೀಸತ್ಯವೀರತೀರ್ಥರು, ಶ್ರೀಸತ್ಯಧ್ಯಾನತೀರ್ಥರು(ಇಂಗ್ಲೀಷ್), ಶ್ರೀಸತ್ಯಸಂಧರು, ಪ್ರಮೋದ ತರಂಗಿಣೀ(ಇಂಗ್ಲಿಷ್), ಹರಿದಾಸರ ಮುಂಡಿಗೆಗಳು, ಹರಿದಾಸರ ಮುಂಡಿಗೆಗಳು ಭಾಗ 2, ಶ್ರೀಜಯತೀರ್ಥವಿಜಯ, ಶ್ರೀಸತ್ಯಧ್ಯಾನ ವಾಣಿ, ಶ್ರೀವ್ಯಾಸ ಮಧ್ವರ ಭೀಮ, ಶ್ರೀಸತ್ಯಧ್ಯಾನ ಲೇಖನತರಂಗಿಣಿ (ಎರಡು ಭಾಗಗಳಲ್ಲಿ), ಶ್ರೀರಾಘವೇಂದ್ರ ವಿದ್ಯಾವೈಭವ, ಕನಕನ ಮುಂಡಿಗೆಗಳು, ಶ್ರೀಪದ್ಮನಾಭತೀರ್ಥರು, ದೇವಲಸ್ಮೃತಿ ಒಂದು ಅಧ್ಯಯನ, ತೊರವಿ ರಾಮಾಯಣ ಪ್ರಶಸ್ತಿ, ಗೋಪಾಲದಾಸರು ಕಂಡ ಗುರುರಾಜರು, ಶ್ರೀಸತ್ಯಜ್ಞಾನತೀರ್ಥರು, ಶ್ರೀಕೃಷ್ಣಾವತಾರ, ವಾಸ್ತುಶಾಸ್ತ್ರದ ಮಹತ್ತ್ವ, ಶ್ರೀಹನುಮಂತದೇವರು, ಶ್ರೀಕೃಷ್ಣ, ಶ್ರೀಜಯತೀರ್ಥರು, ಪೊಡವಿಗೊಡೆಯ ಕಡಗೋಲಶ್ರೀಕೃಷ್ಣ, ಬೆಳಕಿನ ಬರಹಗಳು-ಹೀಗೆ ತಮ್ಮ ವಿದ್ವತ್ಪೂರ್ಣಗ್ರಂಥಗಳಿಂದ ಮಾಧ್ವವಾಙ್ಮಯವನ್ನು ಶ್ರೀಮಂತಗೊಳಿಸಿರುವ ಶ್ರೀಜಯತೀರ್ಥಾಚಾರ್ಯರು ಉತ್ತರಾದಿಮಠದಿಂದ ಪ್ರಕಟವಾಗುತ್ತಿರುವ ಶ್ರೀಸುಧಾ ಮಾಸಿಕದ ಮುಖ್ಯ ಸಂಪಾದಕರಾಗಿ ಮೂವತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಇದರೊಂದಿಗೆ ಧಾರವಾಡದ ಸತ್ಯಧ್ಯಾನ ಗ್ರಂಥಮಾಲೆ, ಟಿ.ಟಿ.ಡಿಯ ದಾಸಸಾಹಿತ್ಯ ಪ್ರಾಜೆಕ್ಟ್ ನ ಗ್ರಂಥಗಳ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸುಗುಣಮಾಲಾ, ಹರಿದಾಸವಾಹಿನಿ, ಹರಿದಾಸ ಅಧ್ಯಾತ್ಮ ಪೀಠ, ಸತ್ಯಧ್ಯಾನವಿದ್ಯಾಪೀಠ, ವಿಶ್ವಮಾಧ್ವ ಮಹಾಪರಿಷತ್ತಿನ ಗ್ರಂಥಗಳ ಸಂಪಾದಕ ಮಂಡಳಿಯ ಸದಸ್ಯರಾಗಿಯೂ ವಾಙ್ಮಯಸೇವೆಯನ್ನು ಸಲ್ಲಿಸಿದ ಶ್ರೀಜಯತೀರ್ಥಾಚಾರ್ಯರಿಗೆ ವಿವಿಧ ಮಾಧ್ವ ಮಠಾಧೀಶರು ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿ, ಅನುಗ್ರಹಿಸಿದ್ದಾರೆ.

Also read: ಮಂಗಳೂರು ರಿಕ್ಷಾ ಬ್ಲಾಸ್ಟ್’ಗೆ ತೀರ್ಥಹಳ್ಳಿ ಲಿಂಕ್! ಉಗ್ರ ಶಾರಿಕ್ ಮನೆಯಲ್ಲಿ ತಪಾಸಣೆ, ಕುಟುಂಬಸ್ಥರ ವಿಚಾರಣೆ
ಶ್ರೀಪಲಿಮಾರು ಶ್ರೀಗಳಿಂದ ‘ಪಂಡಿತರತ್ನಂ’, ಪ್ರಶಸ್ತಿ, ಸಚ್ಛಾಸ್ತ್ರವಿಚಕ್ಷಣರತ್ನಂ, ಶ್ರೀವಿದ್ಯಾಮಾನ್ಯ ಪ್ರಶಸ್ತಿ,ವಿದ್ಯಾನಿಧಿ ಪ್ರಶಸ್ತಿ, ಶ್ರೀಪೇಜಾವರ ಮಠಾಧೀಶರಿಂದ ‘ವಿಜಯಧ್ವಜ ಪ್ರಶಸ್ತಿ’, ಶ್ರೀ ಭಂಡಾರಕೇರಿ ಶ್ರೀಗಳಿಂದ ‘ವಾಗ್ವೈಖರಿಮಾನ್ಯ’ಪ್ರಶಸ್ತಿ ಹಾಗೂ ಶ್ರೀಉತ್ತರಾದಿಮಠಾಧೀಶರಿಂದ ‘ಧ್ಯಾನಪ್ರಮೋದ’ಪ್ರಶಸ್ತಿಗಳು ಇವುಗಳಲ್ಲಿ ಪ್ರಮುಖವಾದವು. ಇದರೊಂದಿಗೆ ತಿರುಚಾನೂರಿನ SMSO ಸಭಾದಿಂದ ‘ಪ್ರಧಾನ ಧರ್ಮಾಧಿಕಾರಿ’ ಗೌರವ, ವಿದ್ಯಾವರ್ಧಕ ಸಂಘದಿಂದ ‘ಪ್ರವಚನ ಸಿಂಹ’ ಗೌರವಗಳಿಗೂ ಭಾಜನರಾಗಿರುವ ಶ್ರೀಮಳಗಿ ಜಯತೀರ್ಥಾಚಾರ್ಯರು ಅನೇಕ ನಿಯತಕಾಲಿಕಗಳಲ್ಲಿ, ವೃತ್ತಪತ್ರಿಕೆಗಳಲ್ಲಿ ಶ್ರೀಮಧ್ವಸಿದ್ಧಾಂತವನ್ನು ಕುರಿತ ಲೇಖನಗಳನ್ನು ಬರೆಯುವುದರೊಂದಿಗೆ ಅನೇಕ ರಾಷ್ಟ್ರಮಟ್ಟದ ವಿಚಾರಸಂಕಿರಣಗಳಲ್ಲಿ ಪ್ರಬಂಧಗಳನ್ನೂ ಸಹಾ ಮಂಡಿಸಿದ್ದಾರೆ. ಸಂಸ್ಕೃತಸಾಹಿತ್ಯ ಕುರಿತ ಅನೇಕ ರಾಷ್ಟ್ರೀಯ ವಿಚಾರಸಂಕಿರಣಗಳ ಆಯೋಜನೆಯನ್ನೂ ಮಾಡಿರುವ ಶ್ರೀಮಳಗಿ ಜಯತೀರ್ಥಾಚಾರ್ಯರ ಪ್ರವಚನಗಳೆಂದರೆ ಕಂಚಿನ ಕಂಠದ, ಸ್ಪಷ್ಟವಾದ ವಿಚಾರಮಂಡನೆಯ ವಿದ್ವತ್ಸಮಾರಾಧನೆಯೇ ಸರಿ. ಶ್ರೀಮಾಧವ,ಮಧ್ವರ ಸೇವೆಯನ್ನು ಅಪೂರ್ವವಾಗಿ ಮಾಡಿದ ಮಹಾ ಚೇತನ ಅವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಮಂಗಳೂರು ರಿಕ್ಷಾ ಬ್ಲಾಸ್ಟ್’ಗೆ ತೀರ್ಥಹಳ್ಳಿ ಲಿಂಕ್! ಉಗ್ರ ಶಾರಿಕ್ ಮನೆಯಲ್ಲಿ ತಪಾಸಣೆ, ಕುಟುಂಬಸ್ಥರ ವಿಚಾರಣೆ

Next Post

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!