ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರದ ಬನಶಂಕರಿ 6 ಸ್ಟೇಜ್ನಲ್ಲಿ ಚಿರತೆ ಕಾಣಿಸಿಕೊಂಡ ಪರಿಣಾಮ ಸಿಲಿಕಾನ್ ಸಿಟಿ ಜನತೆಗೆ ಈಗ ಚಿರತೆಯ ಭಯ ಎದುರಾಗಿದೆ.
ಈ ಬಗ್ಗೆ ವೆಲ್ ಫೇರ್ ಅಸೋಸಿಯೇಷನ್ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದು, ಒಬ್ಬೊಬ್ಬರೇ ಓಡಾಡಬೇಡಿ, ಅದರಲ್ಲೂ ರಾತ್ರಿಯಾದರೆ ಮನೆಯಿಂದ ಹೊರಬರಬೇಡಿ ಎಂದು ಎಚ್ಚರಿಕೆ ನೀಡಿದೆ.
ತುರಹಳ್ಳಿ ಅರಣ್ಯ ಪ್ರದೇಶಕ್ಕೆ ಹತ್ತಿರವಿರುವ ಬನಶಂಕರಿ ಆರನೇ ಹಂತದಲ್ಲಿ ಚಿರತೆ ಕರುವೊಂದನ್ನು ತಿಂದು ಹಾಕಿದೆ. ಕಳೆದೊಂದು ವಾರದಿಂದ ಚಿರತೆ ಭೀತಿಯಲ್ಲಿ ಜನರಿದ್ದು, ಈಗಾಗಲೇ ಚಿರತೆ ಹಿಡಿಯಲು ಬೋನಿನ ವ್ಯವಸ್ಥೆ ಮಾಡಲಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also read: ಬಾಕಿಯಿರುವ ಫಲಾನುಭವಿಗಳ ಅರ್ಜಿ ಪ್ರಸ್ತಾವನೆಗಳನ್ನು ತಕ್ಷಣವೇ ವಿಲೇವಾರಿ ಮಾಡಿ: ಡಿಸಿ ಗುರುದತ್ತ ಹೆಗಡೆ
ಅರಣ್ಯ ಪ್ರದೇಶಕ್ಕೆ ಈ ಸ್ಥಳ ಹತ್ತಿರವಾಗಿರುವುದರಿಂದ ಓಡಾಟ ಇದೆ. ಹಾಗೂ ಇದು ಚಿರತೆಗಳ ಸಂತಾನೋತ್ಪತಿ ಸಮಯವಾಗಿರುವುದರಿಂದ ಅಲ್ಲಲ್ಲಿ ಕಾಣುತ್ತಿರುತ್ತದೆ. ಸದ್ಯ ಇಲ್ಲಿ ಬೋನಿನ ವ್ಯವಸ್ಥೆ ಮಾಡಲಾಗಿದೆ. ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post