ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಾನಸಿಕ ಕಿರುಕುಳ ತಾಳಲಾರದೆ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜನ್ನಾಪುರದಲ್ಲಿ ನಡೆದಿದೆ.
ಸ್ಮಿತಾ (36) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದು, ಶಿವಮೊಗ್ಗ ವಿನೋಬನಗರ ಕಲ್ಲಹಳ್ಳಿಯ ಸ್ಮಿತಾ ಅವರನ್ನು ೨೦೧೦ರಲ್ಲಿ ಭದ್ರಾವತಿಯ ಜನ್ನಾಪುರದ ನಾಗೇಂದ್ರ ಅವರೊಂದಿಗೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಈ ಸಂಬಂಧ ಸ್ಮಿತಾ ತಾಯಿ ದೂರು ದಾಖಲಿಸಿದ್ದು, ಸ್ಮಿತಾ ಅನಾರೋಗ್ಯದಿಂದ ಬಳಲುತ್ತಿದ್ದರೂ ಚಿಕಿತ್ಸೆ ಕೊಡಿಸದೆ ಆಕೆ ಮೇಲೆ ಹಲ್ಲೆ ನಡೆಸುತ್ತಿದ್ದರು. ಕಿರುಕುಳ ಸಹಿಸಲಾಗದೆ ವಿವಾಹ ವಿಚ್ಚೇದನ ಕೇಳಿದಕ್ಕೆ ನಿನ್ನ ಕುಟುಂಬದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.
Also read: ನ.26, 27ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಸ್ಮಿತಾ ಪತಿ ನಾಗೇಂದ್ರ, ಅತ್ತೆ, ಮಾವ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಸ್ಮಿತಾ ತಾಯಿ ಮಂಜುಳಾ ದೂರಿನಲ್ಲಿ ದಾಖಲಿಸಿದ್ದಾರೆ.
ಪ್ರಕರಣ ಕುರಿತಂತೆ ನ್ಯೂಟೌನ್ ಠಾಣೆಯಲ್ಲಿ ಎಫ್`ಐಆರ್ ದಾಖಲಾಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post