ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಂಗಳೂರು, ಕಂಕನಾಡಿ ಸಮೀಪ, ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ, ಕೇಂದ್ರ ಗೃಹ ಇಲಾಖೆಯು ರಾಜ್ಯದ ಶಿಫಾರಸನ್ನು ಮಾನ್ಯ ಮಾಡಿ ಮುಂದಿನ ತನಿಖೆಯನ್ನು ಎನ್ಐಎಗೆ NIA ವರ್ಗಾಯಿಸಿ ಆದೇಶ ಹೊರಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Jnanendra ಹೇಳಿದ್ದಾರೆ.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು ಎನ್ಐಎಗೆ ವಹಿಸಲು ಶಿಫಾರಸು ಮಾಡಲಾಗಿತ್ತು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















