ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ ‘ಧರ್ಮಭಾರತಿ’ ಹಮ್ಮಿಕೊಂಡಿದೆ.
ಪರಮಪೂಜ್ಯರ 30ನೇ ಚಾತುರ್ಮಾಸ್ಯದ ಅಂಗವಾಗಿ, ಮಹರ್ಷಿ ವಾಲ್ಮೀಕಿ ಬರೆದ ಮೂಲ ರಾಮಾಯಣದ ಪುನರವತರಣ ಇದಾಗಿರುತ್ತದೆ. ಮೊದಲಿಗೆ ಕನ್ನಡದಲ್ಲಿ ಹಾಗೂ ನಂತರ ವಿವಿಧ ಭಾಷೆಗಳಲ್ಲಿ ಇದನ್ನು ಪ್ರಕಟಿಸಲಾಗುವುದು ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಹೇಳಿದ್ದಾರೆ.
ಸಮಗ್ರ ರಾಮಾಯಣ ಮುಗಿಯುವವವರೆಗೆ ಧರ್ಮಭಾರತಿ ಮಾಸಿಕದ ಪ್ರತಿ ಸಂಚಿಕೆಯ ಪ್ರತಿ ಪುಟವೂ ರಾಮಾಯಣ ಮಯವಾಗಿರುತ್ತದೆ. ವಿಶೇಷವೆಂದರೆ ಧರ್ಮಭಾರತೀ ಇದನ್ನು ಉಚಿತವಾಗಿ ವಿತರಿಸುತ್ತದೆ. ಮೊದಲ ಹಂತದಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚು ಮನೆಗಳಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ.
Also read: ಕರಾವಳಿಯಲ್ಲಿ ಉಗ್ರ ಕೃತ್ಯ ಹಿನ್ನೆಲೆ ಪ್ರತಿಯೊಬ್ಬರೂ ಸದಾ ಜಾಗೃತರಾಗಿರಿ: ಪೇಜಾವರ ಶ್ರೀ ಎಚ್ಚರಿಕೆ
ಹತ್ತಾರು ಲಕ್ಷ ಜನರು ಮೂಲ ರಾಮಾಯಣವನ್ನು ಓದುವಂತೆ ಮಾಡುವ ಪ್ರಯತ್ನ ಇದಾಗಿದ್ದು, ಲಕ್ಷ ಲಕ್ಷ ಮನೆಗಳಲ್ಲಿ ನೂರಾರು ವರ್ಷ ರಾಮಾಯಣ ಪುಸ್ತಕ ಇರುವಂತೆ ಮಾಡುವ ಮಹದುದ್ದೇಶದ ಯೋಜನೆ ಇದಾಗಿದೆ. ಹಲವು ತಲೆಮಾರುಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post