ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಸಂವಿಧಾನಬದ್ಧ ಕಾನೂನು ಕಟ್ಟಳೆಗಳಿಗಿಂತ ಇಂದು ಧರ್ಮ ನಮ್ಮನ್ನು ನಿಯಂತ್ರಿಸುತ್ತಿದೆ. ಧರ್ಮಕೇಂದ್ರಿತ ಅಧಿಕಾರಶಾಹಿಯ ಹಿಡಿತದಲ್ಲಿ ವ್ಯಕ್ತಿಸ್ವಾತಂತ್ರö್ಯವನ್ನು ಕಳೆದುಕೊಳ್ಳುತ್ತಿರುವ ಸಮಕಾಲೀನ ಸಂದರ್ಭದಲ್ಲಿ ದಲಿತರು, ಬುಡಕಟ್ಟು ಜನಾಂಗಗಳು, ಅಲೆಮಾರಿಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಅಸಹಾಯಕರಾಗಿದ್ದಾರೆ. ಹೀಗಾಗಿ ಸಂವಿಧಾನಬದ್ಧ ಆಡಳಿತ ಅತ್ಯಗತ್ಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ ವೀರಭದ್ರಪ್ಪ ಕಳವಳ ವ್ಯಕ್ತಪಡಿಸಿದರು.
ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಸಹಾಯಕರಿಗೆ ನೆರವು ನೀಡುವುದು, ಬಹುಸಂಸ್ಕೃತಿಯನ್ನು ಉಳಿಸುವುದು, ಸಮಾನತೆಯನ್ನು ಕಾಯ್ದುಕೊಳ್ಳುವುದು, ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗೌರವಿಸುವುದು ಸಂವಿಧಾನದ ಆಶಯ. ಧಾರ್ಮಿಕ ಅಸಹಿಷ್ಣುತೆ, ಜಾತಿ ವೈಮನಸ್ಸು, ಮತ್ತು ಪ್ರಜಾತಂತ್ರ ವ್ಯವಸ್ಥೆಯ ಪ್ರಮುಖ ಅಂಗಗಳಲ್ಲಿ ಅಧಿಕಾರ ಕೇಂದ್ರಿತ ರಾಜಕೀಯ ಹಸ್ತಕ್ಷೇಪ ಒಟ್ಟಾರೆ ಸಂವಿಧಾನದ ಮೂಲ ಆಶಯಗಳಿಗೆ ಪೆಟ್ಟು ನೀಡುತ್ತಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಸವ, ಅಂಬೇಡ್ಕರರ ತತ್ವಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಆಶಿಸಿದರು.
ಶಿವಮೊಗ್ಗದ ರಾಷ್ಟ್ರೀಯ ಕಾನೂನು ಶಾಲೆಯ ಪ್ರಾಂಶುಪಾಲ ಡಾ. ಜಗದೀಶ್ ಬಿ. ಆರ್. ಮಾತನಾಡಿ, ಸಂವಿಧಾನ ರಚನೆಯ ಹಿಂದೆ ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಯ ಜೊತೆಗೆ ಒಟ್ಟಾರೆ ಸ್ವಾತಂತ್ರತ್ರ್ಯ ಹೋರಾಟಗಾರರ ಆಲೋಚನೆಗಳು ಮತ್ತು ಒಟ್ಟಾರೆ ಬಹುಸಂಸ್ಕೃತಿಯ ಸಮಗ್ರ ಆಶಯ ಕೆಲಸ ಮಾಡಿದೆ. ಆದ್ದರಿಂದ ಸಮಾನತೆ, ಭ್ರಾತೃತ್ವ, ಧರ್ಮನಿರಪೇಕ್ಷತೆ, ಮತ್ತು ಬಹುಸಂಸ್ಕೃತಿಗಳೆಡೆಗೆ ಸಹಿಷ್ಣುತೆಯನ್ನು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದರು.
ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ. ಮಂಜಣ್ಣ ಮಾತನಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಬಿ. ಎಚ್. ಆಂಜನಪ್ಪ, ಡಾ. ಅಣ್ಣಯ್ಯ, ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳು, ಬೋಧಕೇತರ ಸಿಬ್ಬಂದಿ, ವಿವಿ ವಿದ್ಯಾರ್ಥಿಗಳ ಜೊತೆಗೆ ಶ್ರೀಮದ್ ರಂಭಾಪುರಿ ಮತ್ತು ಎನ್ಇಎಸ್ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post