ಚಳ್ಳಕೆರೆ: ತಾಲೂಕಿನ ಹೊಟ್ಟೆಪ್ಪನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿದ್ದು, ಲಕ್ಷ್ಮೀಪುರದ ಅಜಿತ್(23) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಕ್ಷ್ಮಿ ಪುರದಿಂದ ಗೊಪನಹಳ್ಳಿ ಕಡೆ ಹೋಗುತ್ತಿದ್ದಾಗ ಹಿರಿಯೂರು ಕಡೆಯಿಂದ ಬಂದ ಕ್ರೂಸರ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕ್ರೂಷರ್’ನಲ್ಲಿ ಇದ್ದವರು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಕೆ. ಸತೀಸ್ ನಾಯ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಕೇಸ್ ದಾಖಲಿಸಿಕೊಂಡಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Discussion about this post