ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಬೀದಿನಾಯಿಗಳ ದಾಳಿಗೆ ಸುಮಾರು 4 ವರ್ಷದ ಬಾಲಕ ಸಾವನ್ನಪ್ಪಿರುವ ಧಾರುಣ ಘಟನೆ ಬುಧವಾರ ಸಂಜೆ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಸೈಯದ್ ನಸ್ರುಲ್ಲಾ ಮತ್ತು ಶೇರ್ಬಾನು ದಂಪತಿ ಪುತ್ರ ಸೈಯದ್ ಅರ್ಷದ್ ಮದನಿ ಸಾವನ್ನಪ್ಪಿದ್ದು, ತಂದೆ ನಸ್ರುಲ್ಲಾ ಜೊತೆ ಬಾಲಕ ಮನೆ ಸಮೀಪದಲ್ಲಿರುವ ಗದ್ದೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸುಮಾರು 7-8 ಬೀದಿನಾಯಿಗಳು ದಾಳಿ ನಡೆಸಿದ್ದು, ತೀವ್ರ ಗಾಯಗೊಂಡ ಮದನಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದೆ.
ಬೀದಿನಾಯಿಗಳ ನಿಯಂತ್ರಣದಲ್ಲಿ ನಿರ್ಲಕ್ಷ್ಯವಹಿಸಿರುವ ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗ್ರಾಮದಲ್ಲಿ ಮಕ್ಕಳು ಒಬ್ಬಂಟಿಯಾಗಿ ಸಂಚರಿಸದಂತಹ ಭಯದ ವಾತಾವರಣ ನಿರ್ಮಾಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post