No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪೇಜಾವರ ಮಠದಿಂದ ಅರ್ಥಪೂರ್ಣ ಧಾರ್ಮಿಕ ಬೇಸಿಗೆ ಶಿಬಿರ: ನಿಮ್ಮ ಮಕ್ಕಳನ್ನು ಸೇರಿಸಲು ಮರೆಯದಿರಿ

kalpa News by kalpa News
March 18, 2019
in ಬೆಂಗಳೂರು ನಗರ
0
ಪೇಜಾವರ ಮಠದಿಂದ ಅರ್ಥಪೂರ್ಣ ಧಾರ್ಮಿಕ ಬೇಸಿಗೆ ಶಿಬಿರ: ನಿಮ್ಮ ಮಕ್ಕಳನ್ನು ಸೇರಿಸಲು ಮರೆಯದಿರಿ
Share on FacebookShare on TwitterShare on WhatsApp

ಬೆಂಗಳೂರು: ದೇಶದಾದ್ಯಂತ ಬೇಸಿಗೆ ರಜೆಯಲ್ಲಿ ಮಕ್ಕಳಿಗಾಗಿ ವಿವಿಧ ರೀತಿಯ ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ವಿವಿಧ ರೀತಿಯ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತದೆ. ಆದರೆ, ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳನ್ನು ಉಳಿಸಿಕೊಂಡು ಹೋಗುವಂತಹ ಸಂಸ್ಕಾರ ಕೊಡುವ ಬೇಸಿಗೆ ಶಿಬಿರ ಎಲ್ಲೂ ನಡೆಯುತ್ತಿಲ್ಲ.

ಆದರೆ, ಇಂತಹ ಒಂದು ಅದ್ಬುತ ಕಾರ್ಯವನ್ನು ಸಾಕಾರ ಮಾಡುತ್ತಿದೆ ಪೇಜಾವರ ಅಧೋಕ್ಷಜ ಮಠ.

ಹೌದು… ಪೇಜಾವರ ಅಧೋಕ್ಷಜ ಮಠ ಮತ್ತು ಅಖಿಲ ಭಾರತ ಮಾಧ್ವ ಮಹಾಮಂಡಲದ ಆಶ್ರಯದಲ್ಲಿ ಧಾರ್ಮಿಕ ಶಿಕ್ಷಣ ಶಿಬಿರವನ್ನು ಆಯೋಜಿಸಿದ್ದು, ಇದು ಸಂಪೂರ್ಣ ಉಚಿತವಾಗಿದೆ.

ಈ ಕುರಿತಂತೆ ಕಲ್ಪ ನ್ಯೂಸ್’ಗೆ ಮಾಹಿತಿ ನೀಡಿರುವ ಶ್ರೀಮಠದ ಕೃಷ್ಣರಾಜ ಕುತ್ಪಾಡಿ ಅವರು, ಉಡುಪಿ ಪೇಜಾವರ ಮಠದ ಶ್ರೀ ಶ್ರೀವಿಶ್ವೇಶತೀರ್ಥಶ್ರೀಪಾದರ ಹಲವು ಮುಖದ ಸಾಮಾಜಿಕ ಚಟುವಟಿಕೆಗಳಲ್ಲಿ ಬೇಸಿಗೆಯಲ್ಲಿ ನಡೆಯುವ ಉಚಿತ ಧಾರ್ಮಿಕ ಶಿಕ್ಷಣ ಶಿಬಿರವೂ ಒಂದು. ಪ್ರತಿವರ್ಷ ಹೊರರಾಜ್ಯಗಳೂ ಸೇರಿದಂತೆ ಸುಮಾರು 50 ಕಡೆಗಳಲ್ಲಿ ಶಿಬಿರಗಳು ನಡೆಯುತ್ತಿವೆ. ಈ ಬಾರಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಈ ಶಿಬಿರನ್ನು ಏಕಕಾಲದಲ್ಲಿ ನಡೆಸುವಂತೆ ಆದೇಶಿಸಿದ್ದಾರೆ. ಅದರಂತೆ ಈ ಕೆಳಗಿನ ಸ್ಥಳಗಳಲ್ಲಿ ಶಿಬಿರಗಳನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ.

ಶಿಬಿರದ ಕುರಿತಾಗಿನ ಮಾಹಿತಿ ಇಂತಿದೆ:

ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ: ದಿನಾಂಕ 07-04-2019ರಿಂದ 13-04-2019ರ ವರೆಗೆ ಸಮಯ: ಮಧ್ಯಾಹ್ನ 02:30 ರಿಂದ ಸಂಜೆ 06:00ರವರೆಗೆ

01. ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ತರಿಗುಪ್ಪ ಮುಖ್ಯ ರಸ್ತೆ, ಮೊ: 8971960621,
02. ಶ್ರೀರಾಘವೇಂದ್ರಸ್ವಾಮಿಗಳ ಮಠ, ರಾಜರಾಜೇಶ್ವರಿ ನಗರ, ಮೊ: 9538349079
03. ಶ್ರೀ ಮಾಧ್ವ ಸಂಘ ಮಲ್ಲೇಶ್ವರಂ ಮೊ: 9900578368
04. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ತುರಹಳ್ಳಿ, ಮೊ: 9845620199
05. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಅಮರಜ್ಯೋತಿ ನಗರ, ಮೊ: 988065510
06. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಚಿಕ್ಕಲಸಂದ್ರ, ಮೊ: 9108580484 07. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಕುಮಾರಸ್ವಾಮಿ ಲೇಔಟ್, ಮೊ:        8050767630
08. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಇಟ್ಟಮಡು, ಮೊ: 9480449559 09. ಶ್ರೀ ಮಾಧ್ವ ಸಂಘ ರಾಜಾಜಿನಗರ ಮೊ: 8356852160
10. ಶ್ರೀ ಮಾಧ್ವ ಸಂಘ ಚಾಮರಾಜಪೇಟೆ ಮೊ: 9480236152
11. ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಕೋಣನಕುಂಟೆ ಮೊ: 9632747846 12. ಶ್ರೀ ರಾಘವೇಂದ್ರಸ್ವಾಮಿಮಠ, ಟಿ’ ಬ್ಲಾಕ್, ಜಯನಗರ, ದೂ.ವಾ.:        080-41169934
13. ದೊಡ್ಡನೆಕ್ಕುಂದಿ ಶ್ರೀಪೇಜಾವರ ಮಠ, ಮೊ: 9845435521
14. ಶ್ರೀಸುಬ್ರಹ್ಮಣ್ಯ ಮಠ. ಎಚ್. ಎಸ್. ಆರ್. ಲೇಔಟ್, ಮೊ: 9686813444 15. ಶ್ರೀಸುಬ್ರಹ್ಮಣ್ಯ ಮಠ, ಅಕ್ಷಯನಗರ, ಮೊ: 9008050122
16. ಶ್ರೀರಾಘವೇಂದ್ರಸ್ವಾಮಿಗಳ ಮಠ, ದೇವರ ಚಿಕ್ಕನಹಳ್ಳಿ ಮೊ: 9741337416
17. ಶ್ರೀರಾಘವೇಂದ್ರಸ್ವಾಮಿಗಳ ಮಠ, ಹೊಸಕೆರೆಹಳ್ಳಿ ಮೊ: 9448107190 18. ಶ್ರೀ ರಾಘವೇಂದ್ರಸ್ವಾಮಿಗಳ ಸನ್ನಿಧಿ, ದೇವಗಿರಿ ಮೊ:                          08026712816 19. ಶ್ರೀ ರಾಘವೇಂದ್ರ ಮಠ, ಎನ್. ಆರ್. ಕಾಲೋನಿ ದೂ.ವಾ. 26625658/59

ಶಿಬಿರದಲ್ಲಿ ಏನೆಲ್ಲಾ ಕಲಿಸಲಾಗುತ್ತದೆ?
ಭಾರತೀಯತೆಯ ಚಿಂತನೆಯ ತಳಹದಿಯನ್ನು ಕಳೆದುಕೊಳ್ಳುತ್ತಿರುವ ಇಂದಿನ ಲೌಕಿಕಶಿಕ್ಷಣವು ಮಕ್ಕಳಲ್ಲಿ ಒತ್ತಡವನ್ನು ಉಂಟು ಮಾಡುತ್ತಿದೆ. ಈ ಶಿಬಿರದಲ್ಲಿ ಸಂಧ್ಯಾವಂದನೆ, ದೇವರಪೂಜೆ, ನಿತ್ಯಸ್ತೋತ್ರಗಳು, ವಿಷ್ಣುಸಹಸ್ರನಾಮ, ಭಗವದ್ಗೀತೆ, ಇತಿಹಾಸ-ಪುರಾಣದ ಕಥೆಗಳು, ಭಜನೆ ಇತ್ಯಾದಿಗಳನ್ನು ಹೇಳಿಕೊಡಲಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಧಾರ್ಮಿಕ ಶಿಕ್ಷಣ ಶಿಬಿರಗಳು ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರಗಳನ್ನು ಬೆಳೆಸಿ ಜವಾಬ್ದಾರಿಯುತ ನಾಗರಿಕರನ್ನಾಗಿಸುತ್ತದೆ. ಭಾರತೀಯ ಶ್ರೇಷ್ಠಚಿಂತನೆಗಳು ಎಲ್ಲ ಭಾಷೆಗಳ ತಾಯಿಯಾದ ಸಂಸ್ಕೃತದಲ್ಲಿ ಮಾತ್ರ ಶುದ್ಧವಾಗಿ ಸಿಗುತ್ತದೆ. ಇದರ ಕಲಿಕೆ ನಮ್ಮ ಪ್ರಾಚೀನ ಇತಿಹಾಸದ ಅನೇಕ ಸತ್ಯಗಳನ್ನು ಹೊರಗೆಡಹುತ್ತದೆ.

ನಮ್ಮ ಭಾರತದ ಬಗ್ಗೆ ಹೆಮ್ಮೆ ಎನಿಸುತ್ತದೆ. ಮಕ್ಕಳಲ್ಲಿ ಸಂಸ್ಕೃತದ ಕಲಿಕೆಯ ಅಭಿರುಚಿಯನ್ನು ಹುಟ್ಟಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಈ ಶಿಬಿರ ಸಹಕಾರಿಯಾಗುತ್ತದೆ. ಸ್ವಧರ್ಮದ ಅರಿವನ್ನು ಪಡೆಯಬೇಕಾದ್ದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಆದ್ದರಿಂದ ಎಲ್ಲ ಪೋಷಕರು ಮುಂದಿನ ಪೀಳಿಗೆಯನ್ನು ಸರಿದಾರಿಯತ್ತ ಕೊಂಡೊಯ್ಯುವ ಇಂತಹ ಶಿಬಿರಗಳಲ್ಲಿ ಮಕ್ಕಳೊಂದಿಗೆ ಭಾಗವಹಿಸುವುದು ಅತ್ಯಂತ ಅವಶ್ಯವಾಗಿದೆ. ಉಪನೀತರು, ಅನುಪನೀತರು, ಹೆಣ್ಣುಮಕ್ಕಳು, ಹೆಂಗಸರು, ಗಂಡಸರು ಎಲ್ಲರೂ ಈ ಶಿಬಿರಢದ ಉಪಯೋಗ ಪಡೆದುಕೊಳ್ಳಬಹುದು.

ಹಿರಿಯರಿಗೆ ಸಂಜೆ 4:00ರಿಂದ 6:00ರವರೆಗೆ ಪಾಠದ ವ್ಯವಸ್ಥೆ ಇರುತ್ತದೆ. ಹೆಣ್ಣುಮಕ್ಕಳಿಗೆ ಹರಿಭಕ್ತಿಸಾರ, ಲಕ್ಷ್ಮೀಶೋಭಾನೆ ಹರಿಕಥಾಮೃತಸಾರ, ದೇವರನಾಮಗಳನ್ನು ಕೂಡ ಕಲಿಸಿಕೊಡಲಾಗುವುದು. ಕಲಿಯುವ ಆಸಕ್ತಿಯೊಂದೇ ಈ ಶಿಬಿರದಲ್ಲಿ ಸೇರಲುಬೇಕಾದ ಅರ್ಹತೆ. ವಯಸ್ಸಿನ ಮಿತಿ ಇರುವುದಿಲ್ಲ. ಅವರವರಿಗೆ ಯೋಗ್ಯವಾದ ಪಾಠಗಳನ್ನು ಸಮರ್ಥವಾದ ಅಧ್ಯಾಪಕರು ಮಾಡುತ್ತಾರೆ. ಸಜ್ಜನ ಸಮಾಜವು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇವೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ಮೊಬೈಲ್: 8971960621, 9481773622

Tags: Kannada NewsPejawara MuttSummer Campಕೃಷ್ಣರಾಜ ಕುತ್ಪಾಡಿಧಾರ್ಮಿಕ ಬೇಸಿಗೆ ಶಿಬಿರಪೇಜಾವರ ಮಠಭಾರತೀಯತೆಯ ಚಿಂತನೆಶ್ರೀವಿಶ್ವೇಶತೀರ್ಥಶ್ರೀಪಾದರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದು ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ, ಗೋವಾದಲ್ಲಿ ಮಡುಗಟ್ಟಿದ ಶೋಕ

Next Post

ಪ್ರಾಣಿಗಳಿಂದ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಜಾಗ್ರತೆ ವಹಿಸಿ: ಡಿಎಚ್‌ಒ ಸಲಹೆ

kalpa News

kalpa News

Next Post
ಪ್ರಾಣಿಗಳಿಂದ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಜಾಗ್ರತೆ ವಹಿಸಿ: ಡಿಎಚ್‌ಒ ಸಲಹೆ

ಪ್ರಾಣಿಗಳಿಂದ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಜಾಗ್ರತೆ ವಹಿಸಿ: ಡಿಎಚ್‌ಒ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL