Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಂಗೀತಾಸಕ್ತ ರಸಿಕ ಮನಸುಗಳ ಬಾಲ್ಯ, ಯೌವನದ ಮಧುರ ಕ್ಷಣಗಳ ನೆನಪಿಸಿದ ಸಂಗೀತ ಸುಧೆ

February 12, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  | ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  |

ಅಭಿರುಚಿಯ ರುಚಿಯೇ ಹಾಗೆ…. ವಿಭಿನ್ನವಾದ ಸಂಗತಿಗಳು, ಸಾಹಿತ್ಯ ಲೋಕದ ಅದ್ಭುತವಾದ ವಿಚಾರಗಳಲ್ಲಿ ಒಂದಾದ ಶ್ರೀ ಶ್ರೀಧರ ಭಗವಾನರ ದತ್ತರಾಜಸ್ತವವನ್ನು ನಮ್ಮೆದುರಿಗೆ ಮಹಾಮಹೋಪಾಧ್ಯಾಯ ಡಾ.ಎಸ್. ರಂಗನಾಥ್ ಅವರ ವಿದ್ವತ್ ಪೂರ್ಣ ನುಡಿಗಳಲ್ಲಿ ಕಳೆದ ಒಂದು ವಾರದಿಂದ ಕೇಳುವಂತೆ ಮಾಡಿದ್ದು ಒಂದೆಡೆಯಾದರೆ…ಮತ್ತೊಂದೆಡೆ ಸಂಗೀತ ಸುಧೆ ಹರಿಸಿ ಮನತಣಿಯುವಂತೆ ಮಾಡಿದುದು.

ನಿಜ…. ಮನಕ್ಕೆ ಮುದ ನೀಡುವ ವಿಷಯಗಳಲ್ಲಿ ಸಂಗೀತಕ್ಕೆ ಮೊದಲನೆಯ ಸ್ಥಾನ. ಅವು ಭಕ್ತಿ, ಭಾವ, ಚಿತ್ರ ಯಾವ ಗೀತೆಯಾದರೂ ಸರಿ ಎಲ್ಲವೂ ಅಮೃತದ ಸುಧೆ ಹರಿಸಿದಂತೆಯೇ…. ಇಷ್ಟೆಲ್ಲಾ ಬರೆಯಲು ಕಾರಣ ಏನೆಂದರೆ ಯಾವಾಗಲೂ ಕಾರ್ಯಕ್ರಮ ನೋಡಿದ ತಕ್ಷಣ ಕಲಾವಿದರನ್ನು ಮಾತಾಡಿಸಿ ಮನದ ಸಂತೋಷವನ್ನು ಅವರಲ್ಲಿಯೂ ವ್ಯಕ್ತಪಡಿಸಿ ಬರುತ್ತಿದ್ದ ನಾನು ಕಾರ್ಯದೊತ್ತಡದಿಂದ ನಿನ್ನೆ ರಂಗಮಂದಿರದಿಂದ ಹಾಗೇ ಬಂದುಬಿಟ್ಟೆ… ಆದರೆ ಮನಸು ಮಾತ್ರ ಕಾರ್ಯಕ್ರಮದ ಹಾಡುಗಳೇ ಗುನುಗುವಂತೆ ಮಾಡಿದ್ದವು. ನಿಜಕ್ಕೂ ಮನಸೊಂದು ಭಾವನಾ ಲೋಕದಲ್ಲಿ ವಿಹರಿಸುವಂತೆ ಮಾಡಿತ್ತು.Also Read>> Karnataka Energy Department Secures ₹3.43 Lakh Crore Investment in Renewable Energy Sector

ಕಾರ್ಯಕ್ರಮಕ್ಕೆ ಕಳೆಗಟ್ಟುವಂತೆ ಮಾಡಿದ್ದು ನಿಜಕ್ಕೂ ಆಯೋಜಕರೇ. ಏಕೆಂದರೆ ಯಾವುದೇ ಸಭಾಕಾರ್ಯಕ್ರಮಗಳಿಲ್ಲದೇ ನೇರವಾಗಿ ಸಂಗೀತ ಸುಧೆ ಹರಿಯುವಂತೆ ಮಾಡಿದ್ದು ಒಂದು ಕಾರಣವಾದರೆ ಮತ್ತೊಂದು ಅವರು ಆಯ್ಕೆ ಮಾಡಿಕೊಂಡ ವಿಷಯ “ಬೆಳ್ಳಿಮೋಡದ ಬಂಗಾರದ ಹಾಡು”.
ಅವುಗಳೆಂದರೆ ಕಾದಂಬರಿ ಆಧಾರಿತ ಹಾಗೂ ಮಹಿಳಾ ಪ್ರಧಾನ ಚಿತ್ರಗಳನ್ನು ಮಾಡಿ ಚಿತ್ರಬ್ರಹ್ಮನೆಂದೇ ಖ್ಯಾತಿಯಾದ ಪುಟ್ಟಣ್ಣ ಕಣಗಾಲ್ ಹಿಟ್ಸ್. ಇದಕ್ಕೆ ಸಾರಥ್ಯ ಖ್ಯಾತ ಸಂಗೀತ ಕಲಾವಿದ ಹಾಗೂ ಶಿವಮೊಗ್ಗದ ಹೆಮ್ಮೆಯ ಪ್ರತಿಭೆ ಶ್ರೀ ದೀಪಕ್ ಜಯಶೀಲನ್ ಅವರದಾಗಿತ್ತು. ಇನ್ನೂ ಹಾಡುಗಾರರಂತೂ ಶ್ರೀಮತಿ ಸುರೇಖಾ ಹೆಗಡೆ, ಶ್ರೀಮತಿ ಶ್ರುತಿ ರಾಘವೇಂದ್ರನ್, ಶ್ರೀ ಮನೋಜವಂ ಆತ್ರೇಯ ಹಾಗೂ ಶ್ರೀ ಪಾರ್ಥ ಚಿರಂತನ್ ನಮಗೆಲ್ಲಾ ಜೇನಸುಧೆ ಹರಿಸಿದವರೇ ಆದರು. ಇವರೆಲ್ಲರ ಹಾಡಿಗೆ ನವಿರಾದಂತಹ ನಿರೂಪಣೆ ಮಾಡಿ ಆ ಹಾಡಿನ ಒಟ್ಟು ಜೀವಾಳವನ್ನು ಪರಿಚಯಿಸುವಂತೆ ಮಾಡಿದ್ದು ನಮ್ಮ ವಿನಯಣ್ಣ. ನಿರ್ದೇಶಕರ ಪರಿಚಯ ಮಾಡಿಸುತ್ತಲೇ, ಹಾಡಿನ ಸೂಕ್ಷ್ಮತೆ, ಗಮನಿಸಬೇಕಾದ ಅಂಶಗಳು, ಆಗಿನ ಹೆಮ್ಮೆ, ಯಾವ ಕಾರಣಕ್ಕಾಗಿ ಆ ಹಾಡು ಶ್ರೇಷ್ಠ, ಅದರ ಅಂತರಂಗ ಎಲ್ಲವನ್ನೂ ಸವಿಸ್ತಾರವಾಗಿ ತಮ್ಮ ಪ್ರೌಢ ಚಿಂತನೆಯ ಸಾಹಿತ್ಯದ ಪರಿಭಾಷೆಯಲ್ಲಿ ಹೆಚ್ಚು ಅಲ್ಲದ ಕಡಿಮೆಯೂ ಎನಿಸದ ರೀತಿಯಲ್ಲಿ ಹಾಡಿನ ಜೀವಾಳವನ್ನು ಅದ್ಭುತವಾಗಿ ನಮಗೆ ಕಟ್ಟಿಕೊಟ್ಟಿದ್ದು ವಿನಯಣ್ಣನ ಹೆಚ್ಚುಗಾರಿಕೆಯೇ ಸರಿ. ವಿನಯ್ ಶಿವಮೊಗ್ಗ, ನಿಜಕ್ಕೂ ಮನೋಜವಂ ಹೇಳಿದಂತೆ ಅವರು ದಾರದಂತೆ ಕೆಲಸ ಮಾಡಿದ್ದಾರೆ. ಹೂ ಪೋಣಿಸಿದ ದಾರ ಮೇಲ್ನೋಟಕ್ಕೆ ಕಾಣಿಸದೇ ಹೋದರೂ ಹಾರಕ್ಕೆ ದಾರವೆಂಬಂತೆ ಸರಿಯಾದ ಸೂತ್ರಧಾರರಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.ಹಾಡುಗಳಿಗೆ ಸರಿಯಾಗಿ ಸಾಥ್ ನೀಡಿದವರು ಒಂದೆಡೆಯಾದರೆ ಅದರ ಇಂಪನ್ನು ಸರಿಯಾಗಿ ಜನರಿಗೆ ಮುಟ್ಟಿಸುವಲ್ಲಿ ಸೌಂಡ್ ಸಿಸ್ಟಮ್ ಎಫೆಕ್ಟ್ ಬಹುಮುಖ್ಯ. ಆ ತಂತ್ರಜ್ಞಾನ ಚೆನ್ನಾಗಿ ಅರಿತು ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಚಿನ್ನು ಸೌಂಡ್ ಸಿಸ್ಟಮ್ ನ ದರ್ಶನ್. ಏಕೆಂದರೆ ಇಂಪಾಗಿ ಹಾಡಿದ್ದನ್ನು ಆ ಸ್ವರಗಳ ಏರಿಳಿತ ಎಲ್ಲವೂ ಅಷ್ಟೇ ನಿಖರವಾಗಿ ಕೇಳುಗರ ಕಿವಿ ತಲುಪಿತು. ಇಲ್ಲಿ ಇನ್ನೊಂದು ಮಾತು ಹೇಳಲೇಬೇಕು. ಹಾಡು ಹೇಳುವಾಗ ಹಾಡಿನ ಕೊಂಚ ತುಣುಕು ತೋರಿಸಿ ಉಳಿದಂತೆ ಸಾಹಿತ್ಯ ರಚನಕಾರರು, ಸಂಗೀತ ನಿರ್ದೇಶಕರು, ಹಾಡಿದ ಹಿನ್ನಲೆ ಗಾಯಕರ ಫೋಟೋಗಳನ್ನ LED ವಾಲ್ ನಲ್ಲಿ ತೋರಿಸಿ ಅನೇಕರಿಗೆ ಕಣಗಾಲ್ ಪ್ರಭಾಕರ್ ಶಾಸ್ತ್ರಿಯಂತವರ ದರ್ಶನ ಮಾಡಿಸುವಲ್ಲಿ ಯಶಸ್ವಿಯಾದರು.ಬರೆಯಲೇ ಬೇಕಾದ ಪ್ರಮುಖ ವಿಷಯವೆಂದರೆ ಆಯ್ಕೆ ಮಾಡಿಕೊಂಡ ಹಾಡುಗಳು. ನನ್ನ ಆಲ್ ಟೈಮ್ ಫೇವರಿಟ್ ಹಾಡಾದ ಗೆಳತೀ ಓ ಗೆಳತೀ.., ಕವಿ ಕಂಡ ಕಾವ್ಯಗಳಂತೆ ಇರುವ ವರಕವಿಯ ಮೂಡಲ ಮನೆಯ ಮುತ್ತಿನ ನೀರಿನ… ಗಗನವು ಎಲ್ಲೋ ಭೂಮಿಯು ಎಲ್ಲೋ, ಹದಿನಾಲ್ಕು ವರ್ಷ ವನವಾಸದಿಂದ…. ನಾಗರಹಾವಿನ ಹಾವಿನ ದ್ವೇಷ ಹನ್ನೆರಡು ವರುಷ, ಈ ಸಂಭಾಷಣೆ ನಮ್ಮ ಈ ಪ್ರೇಮ ಸಂಭಾಷಣೆ, ನೀನೇ ಸಾಕಿದಾ ಗಿಣಿ, ವಿರಹಿಗಳ ಧ್ಯೇಯಗೀತೆಯಾದ ಅಥವಾ ಮನದಾಳದ ಮಾತಿನಂತಾದ ವಿರಹ ನೋವು ನೂರು ತರಹ…. ಮನಸಿನ ಅಭಿರುಚಿಯನ್ನು ಉದ್ದೀಪನಗೊಳಿಸಿ ಪ್ರೇರೇಪಣೆ ಕೊಡುವ ಹಾಡಾದ ಪಂಚಮ ವೇದ ಪ್ರೇಮದ ನಾದವೇ ಮೊದಲಾದ ಹಾಡುಗಳು ಒಂದಾದ ಮೇಲೊಂದು ಸಂಗೀತ ರಸಿಕರನ್ನು ತಮ್ಮ ಕಳೆದ ಬಾಲ್ಯ, ಯೌವನದ ದಿನಗಳಿಗೆ ಕೊಂಡೋಯ್ದದ್ದಂತೂ ನಿಜ. ಈ ಸಂಗೀತ ಸುಧೆ ಹರಿಸಲು ಕಾರಣೀಭೂತರಾದ ಆಯೋಜಕ, ಪ್ರಾಯೋಜಕರೆಲ್ಲರಿಗೂ ಎಲ್ಲ ಸಂಗೀತಾಸಕ್ತ ರಸಿಕ ಮನಸುಗಳ ಪರವಾಗಿ ಅನಂತಾನಂತ ಧನ್ಯವಾದಗಳು.
ಚಿತ್ರಕೃಪೆ : ಆದಿತ್ಯಪ್ರಸಾದ್ ಎಂ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಅಭಿರುಚಿದತ್ತರಾಜಬೆಳ್ಳಿಮೋಡಮೈತ್ರೇಯಿ ಆದಿತ್ಯಪ್ರಸಾದ್ಶಿವಮೊಗ್ಗಶ್ರೀಧರ ಭಗವಾನಸಂಗೀತಸಾಹಿತ್ಯ ಲೋಕ
Previous Post

ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಸದಾ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ: ಸಿಎಂ

Next Post

ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ | ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ | ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!