ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನವರಾತ್ರಿ/ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಒತ್ತಡ ನಿರ್ವಹಿಸುವ ಸಲುವಾಗಿ ಯಶವಂತಪುರ – ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚರಿಸಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ಟ್ರಿಪ್ ವಿಶೇಷ ರೈಲುನ್ನು ಓಡಿಸಲಾಗುತ್ತದೆ ಎಂದು ತಿಳಿಸಿದೆ.
ಯಾವತ್ತು ವಿಶೇಷ ರೈಲು?
06257 ಸಂಖ್ಯೆಯ ರೈಲು ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್’ಪ್ರೆಸ್ ರೈಲು ಸೆ.30ರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06258 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಅ.1 ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್’ನಿಂದ ಹೊರಟು, ಅದೇ ದಿನ ರಾತ್ರಿ 11:30 ಕ್ಕೆ ಯಶವಂತಪುರ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ಎಕ್ಸ್’ಪ್ರೆಸ್ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಎಷ್ಟು ಬೋಗಿ ಇರಲಿದೆ?
ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.
ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಐಆರ್’ಟಿಟಿಸಿ ವೆಬ್’ಸೈಟ್/ಆಪ್ ಅಥವಾ ರೈಲ್ ಒನ್ ಆಪ್ ವಿಸಿಟ್ ಮಾಡಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post