No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 5, 2025
in Special Articles
0
ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  |

ಯಕ್ಷಗಾನವು ನಮ್ಮ ಸಂಸ್ಕೃತಿಯ ಪ್ರತೀಕ. ಅದು ತನ್ನ ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದೆ. ಎಲ್ಲ ಪ್ರಕಾರಗಳಿಗೂ ಇರುವಂತೆ ಇದಕ್ಕೊಂದು ಸಾಂಪ್ರದಾಯಿಕ ಚೌಕಟ್ಟಿದೆ. ಕಲೆಗೆ ಸಹೃದಯನ ಮನಸ್ಸು ಗೆಲ್ಲುವ ತಾಕತ್ತಿದೆ ರಸಾಸ್ವಾದಕ್ಕೆ ಅದು ಸ್ಪಂದಿಸುತ್ತದೆ. ಹೊಸತನಕ್ಕೆ ತೆರೆದುಕೊಳ್ಳುವ ಭರದಲ್ಲಿ ಒಮ್ಮೊಮ್ಮೆ ಮೂಲ ಸಾಂಪ್ರದಾಯಿಕತೆಯನ್ನು ಬಿಟ್ಟು ಹೋಗುವ ಅಪಾಯಕ್ಕೆ ಸಿಲುಕಿರುವ ಕಲೆಗಳಲ್ಲಿ ಯಕ್ಷಗಾನವೂ ಒಂದು. ಆದರೆ ಇಡಗುಂಜಿಯ ಶ್ರೀಮಹಾಗಣಪತಿ ಯಕ್ಷಗಾನ #Yakshagana ಮಂಡಳಿ ತನ್ನೆಲ್ಲ ಸಾಂಪ್ರದಾಯಿಕತೆಯನ್ನು ಉಳಿಸಿಕೊಳ್ಳುತ್ತಲೇ ಹೊಸ ಹೊಳಹುಗಳಿಗೆ ತೆರೆದುಕೊಳ್ಳುತ್ತಾ ಅದು UNESCO ದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

Also Read>> ರಾಜ್ಯದ 5 ಮಹಾನಗರ ಪಾಲಿಕೆಗಳಿಗೆ ಚುನಾವಣೆ | ಈಗಿರುವ ಮೀಸಲಾತಿಯೇ ಮುಂದುವರೆಯಲಿದೆಯೇ?

ಭಾರತದಲ್ಲಿ ಅನೇಕ ಕಲಾ ಪ್ರಕಾರಗಳಿದ್ದರೂ ಸಹ ಸಧ್ಯಕ್ಕೆ ಮಾನ್ಯತೆ ದೊರೆತಿರುವುದು ಕೇವಲ 8 ಕಲಾ ಪ್ರಕಾರಗಳಿಗೆ ಮಾತ್ರ. ಅದರಲ್ಲಿ ನಮ್ಮ ಕರ್ನಾಟಕದ ಗಂಡುಮಟ್ಟಿದ ಕಲೆ ಎಂದೇ ಖ್ಯಾತಿಯಾಗಿರುವ ( ಇದೀಗ ಸ್ತ್ರೀಯರು ಪಾಲ್ಗೊಳ್ಳುತ್ತಿರುವ ) ಯಕ್ಷಗಾನವು ಒಂದೆಂಬ ಹೆಮ್ಮೆ ನಮ್ಮನ್ನು ಮತ್ತಷ್ಟು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತದೆ. ಕರಾವಳಿ #Coastal ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಪ್ರಸಿದ್ಧವಾದ ಈ ಕಲೆ ಪ್ರಸ್ತುತ ಎಲ್ಲೆಡೆ ಹರಡುತ್ತಿದೆ.ಇತ್ತೀಚಿನ ಎಷ್ಟೋ ಯಕ್ಷಗಾನ ಮೇಳಗಳು ಪ್ರೇಕ್ಷಕ ಪ್ರಭುಗಳನ್ನು ತನ್ನತ್ತ ಸೆಳೆಯಲು ಮಾಡುವ ಏನೇನೋ ಗಿಮಿಕ್ಕುಗಳು ಯಕ್ಷಗಾನದ ಸಾಂಪ್ರದಾಯಿಕ ಚೌಕಟ್ಟನ್ನು ಮೀರಿಬಿಡುತ್ತಿದೆ. ಹಳೆ ಬೇರಿನೊಂದಿಗೆ ಹೊಸ ಚಿಗುರಿದ್ದರೆ ಮರ ಸೊಗಸೆನಿಸುವಂತೆ ಆಗಬೇಕೆ ಹೊರತು ಪೂರ್ಣ ಹೊಸತನಕ್ಕೆ ತೆರೆದುಕೊಳ್ಳುವುದಲ್ಲ. ಆ ರೀತಿಯಲ್ಲಿ 90ರ ವಸಂತದಲ್ಲಿ ತುಂಬು ಶ್ರೀಮಂತವಾಗಿ ತನ್ನ ಘನತೆ ಗಾಂಭೀರ್ಯವನ್ನು ಹಾಗೆ ಉಳಿಸಿಕೊಂಡು ಬಂದಿರುವ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಶಿವಾನಂದ ಹೆಗಡೆಯವರ ಸಾರಥ್ಯದಲ್ಲಿ ಮುನ್ನಡೆಯುತ್ತಿದೆ.ಸಾಂಪ್ರದಾಯಿಕತೆಗೆ ಈ ಮೇಳ ಎಷ್ಟು ಒಗ್ಗಿಕೊಂಡಿದೆ ಎಂದರೆ, ಎಷ್ಟೋ ಮನೆಗಳಲ್ಲಿ ತಂದೆ ಕೃಷಿ ಜಮೀನನ್ನು ಮಾಡುತ್ತಿದ್ದರೆ ಅದು ತುಂಬಾ ಕಷ್ಟದ ಕೆಲಸ ನೀನು ಬೇರೆ ಯಾವುದಾದರೂ ಹೆಚ್ಚು ಸಂಬಳ ತರುವ ಉದ್ಯೋಗ ಮಾಡು ಮಗನೇ. ಈ ಕಷ್ಟಗಳು ನಮಗೆ ಕೊನೆಯಾಗಲಿ ಎಂದು ಹೇಳಿ ಕಳುಹಿಸುವ ತಂದೆ ತಾಯಿಯರೇ ಹೆಚ್ಚಿರುವ ಈ ಕಾಲಘಟ್ಟದಲ್ಲಿ ಹಳ್ಳಿಗಳು ಬರಿದಾಗುತ್ತಿವೆ ಕೇವಲ ವೃದ್ಧಾಶ್ರಮಗಳಂತೆ ಆಗುತ್ತಿದೆ. ಹಾಗಾದಾಗ ಮೂಲ ಸ್ರೋತವನ್ನೇ ಮರೆಯುವ ಸ್ಥಿತಿ ಬಂದಿದೆ. ಅದೇ ರೀತಿಯಲ್ಲಿ ನಮ್ಮ ಶಿವಾನಂದಣ್ಣ ಯೋಚನೆ ಮಾಡಿದರೆ ಮುಂದಿನ ತಲೆಮಾರು ರಂಗದ ಮೇಲೆ ಬರದೆ ಅಲ್ಲಿಗೆ ಕೊನೆಯಾಗುವಂತಾಗುತ್ತಿತ್ತು ಈ ಮೇಳ. ಆದರೆ ಬಹು ಸಮರ್ಥವಾಗಿ ತಮ್ಮ ಹೆಗಲಿನ ನೊಗವನ್ನು ಮುಂದೆ ತನ್ನ ಮಗನ ಹೆಗಲಿಗೆ ದಾಟಿಸಿದಂತೆ ಭಾಸವಾಗುತ್ತಿದೆ. ಅಷ್ಟು ಸಾಂಪ್ರದಾಯಿಕತೆಯನ್ನು #Orthodoxy ರಕ್ತಗತ ಮಾಡಿಕೊಂಡು ಬಂದಿದ್ದಾರೆಂದರೆ ಅತಿಶಯೋಕ್ತಿ ಅಲ್ಲ.
ಇಷ್ಟೆಲ್ಲಾ ಬರೆಯಲು ಕಾರಣವೇನೆಂದರೆ ಇತ್ತೀಚಿಗೆ ಅಭ್ಯುದಯ ಹಾಗೂ ಶ್ರೀಮಯ ಶಿವಮೊಗ್ಗ ಇವರುಗಳು ಸೇರಿ ಆಯೋಜಿಸಿದ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ಇಡಗುಂಜಿ ಮೇಳದ ಕೆರೆಮನೆ ಶಿವಾನಂದ ಹೆಗಡೆಯವರಿಗೆ ಸನ್ಮಾನ ಹಾಗೂ ಅದೇ ಮೇಳದ ‘ಸೀತಾಪಹರಣ’ ಎಂಬ ಪ್ರಸಂಗ ನೋಡಿ ಬಂದದ್ದರಿಂದ. ನಿಜಕ್ಕೂ ಅದ್ಭುತವಾಗಿ ಮೂಡಿ ಬಂದ ಪ್ರಸಂಗ. ಸೀತಾಪಹರಣ ಎಂಬುದು ತುಂಬಾ ಸಣ್ಣ ಕಥಾ ಹಂದರ ಅದನ್ನು ಪ್ರಸ್ತುತಪಡಿಸಿದ ರೀತಿ ಹೃನ್ಮನಗಳಿಗೆ ರಸದೌತಣ ಮಾಡಿಸಿದಂತೆ ಇತ್ತು. ಕಣ್ಣಿಗೆ ಹಬ್ಬ, ಮನಕ್ಕೆ ಆನಂದ ತಂದಿತು.ದಂಡಕಾರಣ್ಯದಲ್ಲಿ ರಾಮ ಸೀತೆ ಲಕ್ಷ್ಮಣರಿರುವಾಗಲೇ ಶೂರ್ಪನಖಿಗೆ ಆದ ಅವಮಾನ. ಅದನ್ನು ಅಣ್ಣ ರಾವಣನಿಗೆ ಹೇಳಿ ತನಗಾದ ನೋವು ಅವಮಾನ ಅದು ರಾಜನಾದ ನಿನಗೂ ಲಂಕೆಗೂ ಅವಮಾನ ಎಂದು ಬಿಂಬಿಸುವುದು. ನಂತರ ರಾವಣ ಮಾರೀಚನ ಬಳಿ ತೆರಳಿ ಸೀತೆ ಅಪಹರಿಸಲು ಸಹಾಯ ಬೇಡಿದಾಗ ರಾಮನ ತಂಟೆಗೆ ಹೋಗಲು ಮೊದಲು ಒಪ್ಪದ ಮಾರೀಚ ರಾಮಬಾಣಕ್ಕೆ ಜೀವ ಅಥವಾ ಜೀವನದ ಗತಿ ಬದಲಿಸುವ ಶಕ್ತಿ ಇದೆ ಎಂದು ಹೇಳಿ ಪರಿಪರಿಯಾಗಿ ರಾಮನ ತಂಟೆಗೆ ಹೋಗುವುದು ಬೇಡ ಎಂದಾಗ ಒಪ್ಪದ ರಾವಣನು ಮಾರೀಚನನ್ನು ಸಾಯಿಸಲು ಮುಂದಾಗುತ್ತಾನೆ. ಆಗ ಮಾರೀಚ ತನಗೆ ಹೇಗೂ ಶಿಕ್ಷೆ ಆಗುವುದಾದರೆ ಅದು ಯಾರಿಂದ ಆಗುತ್ತದೆ ಎಂಬುದು ಸಹ ಮುಖ್ಯ. ಹಾಗಾಗಿ ಹೇಗೂ ಪ್ರಾಣ ಬಿಡುವುದೇ ಆದರೆ ನಾನು ರಾಮನ ಬಾಣಕ್ಕೆ ತುತ್ತಾಗುತ್ತೇನೆ ಎಂದೆನ್ನುವ ಸುಂದರ ಸನ್ನಿವೇಶ, ಇವುಗಳು ಕಟ್ಟಿಕೊಡುತ್ತಿದ್ದ ಮೌಲ್ಯಗಳೆಷ್ಟು ಸೊಗಸು ಎಂದು ಅಂದುಕೊಂಡೆ. ಏಕೆಂದರೆ ಇದೇ ಸನ್ನಿವೇಶ ಇಟ್ಟುಕೊಂಡೆ ಮಕ್ಕಳಿಗೆ ತರಗತಿಯಲ್ಲಿ ಶಿಕ್ಷಕರ ಬಳಿ ಶಿಕ್ಷೆಗೊಳಗಾಗದೆ ಆರಕ್ಷಕರ ಬಳಿ ಶಿಕ್ಷ ಪಡೆಯುವಂತಾಗಿದೆ ಎಂದು ಹೇಳುತ್ತಿರುತ್ತೇನೆ. ಎಷ್ಟು ನಿಜ ಅಲ್ವಾ.ಈ ಎಲ್ಲವನ್ನು ಅದ್ಭುತವಾಗಿ ನಿರೂಪಿಸುತ್ತಲೇ ಮಾಯಾಜಿಂಕೆಯಾಗಿ ಮಾರೀಚ ಬಂದಾಗ ಮತ್ತಷ್ಟು ಯಕ್ಷಗಾನ ಕಳೆಗಟ್ಟಿತ್ತು. ನಂತರ ಬಂದ ಸನ್ಯಾಸಿಯ ವೇಷದ ರಾವಣ, ಆನಂತರ ತನ್ನ ನಿಜ ರೂಪ ತೋರಿಸುವ ಬಗೆ, ಸೀತೆಯನ್ನು ಕೊಂಡೊಯ್ಯುವ ಸನ್ನಿವೇಶ, ಸಂಪಾತಿಯ ಆಗಮನ ಇವೆಲ್ಲವೂ ರೋಚಕತೆಯಿಂದ ಕೂಡಿ ಕಣ್ಮನಗಳಿಗೆ ಸಂತೋಷ ನೀಡಿ ಅದು ಪ್ರದರ್ಶನವಾಗದೆ ದರ್ಶನದ ಅನುಭವ ತಂದೊಡ್ಡಿತು.

ಎಲ್ಲರೂ ಅದ್ಭುತವಾಗಿ ನಟಿಸಿದವರೇ. ಅಲ್ಲಿ ಬಳಸುವ ಸ್ವಚ್ಛ ಕನ್ನಡದ ಭಾಷೆ ನೋಡಿದರೆ ಕಲಾ ಮಾಧ್ಯಮಗಳಲ್ಲಿ ಯಕ್ಷಗಾನದಲ್ಲಿ ಮಾತ್ರ ಸ್ವಚ್ಛ ಕನ್ನಡ ಭಾಷೆ ಜೀವಂತವಾಗಿರುವುದು. ಹಾಗಾಗಿ ಒಟ್ಟಾರೆ ಹೇಳುವುದಾದರೆ ಬಹಳ ದಿನಗಳ ನಂತರ ಶಾಸ್ತ್ರೀಯ ಸಾಂಪ್ರದಾಯಿಕ ಶೈಲಿಯ ಯಕ್ಷಗಾನ ನೋಡಲು ಅವಕಾಶ ಮಾಡಿಕೊಟ್ಟ ಸಹೃದಯರೆಲ್ಲರಿಗೂ ಅನಂತಾನಂತ ಧನ್ಯವಾದಗಳು. ಪ್ರಸಂಗ ಒಂದು ಚೆನ್ನಾಗಿ ಜನ ವೀಕ್ಷಿಸುವಂತಾಗಲು ಸಿನಿಮಾ ಹಾಡು ಬೇಕು ಗಿಮಿಕ್ಸ್ ಬೇಕು ಪ್ರೇಕ್ಷಕರು ಕೇಳ್ತಾರೆ ಅದನ್ನು ಅಂತೆಲ್ಲ ಅಭಿಮಾನದಿಂದ ಹೇಳುವವರು ಇಡಗುಂಜಿ ಮೇಳದ ಆಟವನ್ನು ಒಮ್ಮೆ ನೋಡಬೇಕು. ಜನ ಮೆಚ್ಚಿ ಕುತೂಹಲದಿಂದ ವೀಕ್ಷಿಸುವಂತೆ ಮಾಡಿದ 90ರ ಸಂಭ್ರಮದಲ್ಲಿರುವ ಮೇಳಕ್ಕೂ ಅಭಿನಂದನೆಗಳು.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: KannadaKannada News WebsiteLatest News KannadaMayajinkeMythreyi PrasadNorth KarnatakaOrthodoxyUNESCOYakshaganaಉತ್ತರ ಕರ್ನಾಟಕಕನ್ನಡಕರಾವಳಿಕಲಾ ಮಾಧ್ಯಮಭಾರತಮಾಯಾಜಿಂಕೆಯಕ್ಷಗಾನಸಾಂಪ್ರದಾಯಿಕತೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ 5 ಮಹಾನಗರ ಪಾಲಿಕೆಗಳಿಗೆ ಚುನಾವಣೆ? ಈಗಿರುವ ಮೀಸಲಾತಿಯೇ ಮುಂದುವರೆಯಲಿದೆಯೇ?

Next Post

ಬೆಂಗಳೂರು | ಶ್ರೀ ಸುಜಯೀoದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಶ್ರೀ ಸುಜಯೀoದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ಸಂಪನ್ನ

ಬೆಂಗಳೂರು | ಶ್ರೀ ಸುಜಯೀoದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

June 24, 2026
ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

June 24, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL