ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಅತಿಥಿ ಉಪನ್ಯಾಸಕರ ವೇತನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದು, ಇದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪ್ರಯತ್ನಕ್ಕೆ ದೊರೆತ ಫಲವಾಗಿದೆ.
ಅತಿಥಿ ಉಪನ್ಯಾಸಕರಿಗೆ 5 ತಿಂಗಳ ವೇತನ ಬಾಕಿಯಿದ್ದು, ಇದನ್ನು ಬಿಡುಗಡೆ ಮಾಡುವಂತೆ ಮಂಜುನಾಥ್ ಅವರು ಸೆ.9ರಂದು ಸದನದಲ್ಲಿ ಧರಣಿ ನಡೆಸಿದ್ದಾರೆ. ಮಾತ್ರವಲ್ಲ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರನ್ನು ಭೇಟಿಯಾಗಿ ಮನವಿಯನ್ನೂ ಸಹ ಸಲ್ಲಿಸಿ, ನಿರಂತರ ಪ್ರಯತ್ನ ನಡೆಸಿದ್ದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಬಾಕಿ ವೇತನವನ್ನು ಬಿಡುಗಡೆ ಮಾಡಿದ್ದಾರೆ.
ಈ ಕುರಿತಂತೆ ತಮ್ಮ ಪರವಾಗಿ ನಿರಂತರ ಪ್ರಯತ್ನ ನಡೆಸಿ ವೇತನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾದ ಆಯನೂರು ಮಂಜುನಾಥ್ ಅವರಿಗೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಧನ್ಯವಾದಗಳನ್ನು ಅರ್ಪಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post