No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಬ್ಬಬ್ಬಾ! ಸಕಲಕಲಾವಲ್ಲಭೆ ಬ್ರಹ್ಮಾವರದ ಈ ಯುವತಿಯ ಸಾಧನೆ ತಿಳಿದರೆ ಆಶ್ಚರ್ಯ ಪಡುತ್ತೀರಿ

ನಾ ಕಂಡಂತೆ ದೀಕ್ಷಾ ಎಸ್.ಎಂ. ಬ್ರಹ್ಮಾವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2021
in Special Articles
0
ಅಬ್ಬಬ್ಬಾ! ಸಕಲಕಲಾವಲ್ಲಭೆ ಬ್ರಹ್ಮಾವರದ ಈ ಯುವತಿಯ ಸಾಧನೆ ತಿಳಿದರೆ ಆಶ್ಚರ್ಯ ಪಡುತ್ತೀರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಕ್ಕಳೇ ಇಲ್ಲಿ ನೋಡಿ ಎಂದು ತಮ್ಮ ಕಂಚಿನ ಕಂಠದಿಂದ ಆರಂಭಿಸಿ ಇಡೀ ತರಗತಿಯ ಗಮನವನ್ನು ಸೆಳೆದು ಸಾಧಾರಣವಾಗಿ ಬೋರ್ ಎನಿಸುವ ರಾಸಾಯನಿಕ ಕ್ರಿಯೆಗಳು ಪಠ್ಯವನ್ನು ಪ್ರಾಯೋಗಿಕವಾಗಿ ಲಘು ಹಾಸ್ಯ ಮಿಶ್ರಿತ ಸ್ವರದೊಂದಿಗೆ ವಿದ್ಯಾರ್ಥಿಗಳ ಆಸಕ್ತಿಯನ್ನು ಕೊನೆಯ ಕ್ಷಣದವರೆಗೂ ಕಾಯ್ದುಕೊಂಡು, ಪಠ್ಯ ಮುಗಿಸಿದ್ದನ್ನು ಕಂಡು ನಮಗೆಲ್ಲರಿಗೂ ಅಚ್ಚರಿಯೋ ಅಚ್ಚರಿ. ಮಕ್ಕಳೊಂದಿಗೆ ನಾವು ಕೂಡ ಮಂತ್ರ ಮುಗ್ದರಾಗಿದ್ದೆವು.

ಇಲ್ಲಿ ತರಗತಿಯ ನಿರೂಪಣೆ ಮಾಡುತ್ತಿದ್ದುದು ಸುಮಾರು 24-25 ವರ್ಷಪ್ರಾಯದ ದೀಕ್ಷಾ ಎಸ್.ಎಂ. ಬ್ರಹ್ಮಾವರ. ಸ್ನೇಹಿತರಿಂದ ನಟ ಭಯಂಕರಿ, ಸಕಲಕಲಾ ವಲ್ಲಭೆ ಎಂದೇ ಕರೆಯಿಸಿಕೊಳ್ಳುವ ಇವರು ಸ್ನೇಹಿತರೊಂದಿಗೆ ಸದಾಕಾಲ ಮುಕ್ತವಾಗಿ ಬೆರೆಯುವ ಮನೋಭಾವ, ಹೇಳಬೇಕಾದ್ದನ್ನು ನೇರವಾಗಿ ಎದುರಿರುವವರಿಗೆ ನೋವುಂಟಾಗದಂತೆ ಹೇಳುವ ಪರಿ, ಸದಾ ಹಾಸ್ಯ ಭರಿತ ಮಾತುಗಳಿಂದ ತರಗತಿಯಲ್ಲಾಗಲೀ, ವೇದಿಕೆಯಲ್ಲಾಗಲೀ ದಿಟ್ಟತನದಿಂದ ವ್ಯವಹರಿಸುವ ರೀತಿ ನೇರ ನಡೆ ನುಡಿ, ಸರಳ ವ್ಯಕ್ತಿತ್ವ ಮತು ರಂಗಭೂಮಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಬಗೆ, ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯಾಭ್ಯಾಸ ಮಾಡಲು ಹೋದ ನನಗೆ ವಿಶೇಷವಾಗಿ ಕಂಡದ್ದು ಸರಿಯೇ. ಮನಃಶಾಸ್ತ್ರದಲ್ಲಿ ಒಲವುಳ್ಳ ನಾನು ವ್ಯಕ್ತಿಗಳನ್ನು ಅವಲೋಕಿಸುತ್ತಲೇ ಇರುವುದರಿಂದ ದೀಕ್ಷಾರ ಬಗೆಗೆ ಕುತೂಹಲ ಮೂಡಿದ್ದು ಸಹಜವಾಗಿಯೇ ಇತ್ತು.


ಯಾರಿದು ದೀಕ್ಷಾ? ಅಂತ ನನಗೆ ಅನ್ನಿಸಿದ ಹಾಗೆ ನಿಮಗೂ ಅನ್ನಿಸಿರಬೇಕಲ್ಲವೇ? ಹೇಳ್ತೇನೆ ಕೇಳಿ.
ದೀಕ್ಷಾ ಎಸ್.ಎಂ. ಬ್ರಹ್ಮಾವರ ಅವರು ಮೂಲತಃ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನವರು. ಶ್ರೀಯುತ ಶ್ಯಾಮ್ ಹಾಗೂ ಶ್ರೀಮತಿ ಸುಮಂಗಳರವರ ಪುತ್ರಿ. ತಂದೆ ಎಸ್.ಎಂ. ಪದವಿ ಕಾಲೇಜಿನಲ್ಲಿ ಅಟೆಂಡರ್ ವೃತ್ತಿಯಲ್ಲಿದ್ದು, ತಾಯಿ ಹಿರೇಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಜೊತೆ ಜೊತೆಗೆ ರಂಗಭೂಮಿಯಲ್ಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ರಂಗಭೂಮಿಯ ಜೊತೆ ಜೊತೆಗೆ ನೃತ್ಯ, ಭರತನಾಟ್ಯ, ಯಕ್ಷಗಾನ, ಗಾಯನ, ಡಬ್‌ಸ್ಮ್ಯಾಶ್ ಅಭಿನಯ, ಟೈಲರಿಂಗ್, ಸೀರೆಗೆ ಗೊಂಡೆ(ಕುಚ್ಚು) ಹಾಕುವುದು, ಎಂಬ್ರಾಯಿಡರಿ, ಡಾಲ್ ಮೇಕಿಂಗ್, ವಾಲ್ ಪೇಯಿಂಟಿಂಗ್, ಗ್ಲಾಸ್ ಪೇಯಿಂಟಿಂಗ್, ಸ್ಯಾಂಡ್ ಪೇಯಿಂಟಿಂಗ್, ನಿಬ್ ಪೇಯಿಂಟಿಂಗ್, ನಿಟ್ಟಿಂಗ್, AARI WORK, ಕ್ರಾಫ್ಟ್‌ ತಯಾರಿಕೆ ಆಭರಣ ತಯಾರಿಕೆ, ಸಿಲ್ಕ್ ತ್ರೆಡ್, ಟೆರಕೋಟ, ಗಾರ್ಡನಿಂಗ್ ಬ್ಯೂಟಿಶಿಯನ್, ಫ್ಯಾಶನ್ ಡಿಸೈನ್‌ನಲ್ಲಿಯೂ ಸಮಾನ ಅಭಿರುಚಿ ಹೊಂದಿದ್ದಾರೆ.

ಅಷ್ಟೇ ಅಲ್ಲದೇ ಅಬ್ಬಕ್ಕ ದಾರಗ ಜಾನಪದ ನೃತ್ಯ ತಂಡದಲ್ಲಿ ಭಾಗವಹಿಸಿ ಹೊರಜಿಲ್ಲೆಗಳಲ್ಲಿ ಪ್ರದರ್ಶನ ನೀಡಿ ಬಹುಮಾನಗಳನ್ನೂ ಗಳಿಸಿರುತ್ತಾರೆ, ಜೊತೆಗೆ ಅನಾಥಾಶ್ರಮಕ್ಕೆ ಆಗಾಗ ಭೇಟಿ ನೀಡಿ ತಮ್ಮಿಂದ ಆದಷ್ಟು ಸಹಾಯ ಮಾಡುವುದು, ಬೀದಿ ನಾಯಿಗಳ ಸಂರಕ್ಷಣೆ ಮಾಡುವುದು, ಹೆಬ್ಬುಲಿ ಹುಡ್ಗೀರು ಹಾಗೂ ಕಿಚ್ಚಾಭಿವೃದ್ಧಿ ಸಂಘದಲ್ಲಿದ್ದುಕೊಂಡು ಸಾಕಷ್ಟು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಇವರ ಪ್ರಮುಖ ಹವ್ಯಾಸಗಳು.
ಇವರು ಸಾಗಿಬಂದ ಜೀವನ ಶೈಲಿಯನ್ನೊಮ್ಮೆ ನೋಡುವುದಾದರೆ ತಂದೆ ತಾಯಿಯವರ ಮುದ್ದು ಮಗಳಾದ ಇವರಿಗೆ ಚಿಕ್ಕಂದಿನಿಂದಲೇ ಪ್ರವೃತ್ತಿಯಲ್ಲಿ ಯಕ್ಷಗಾನ, ರಂಗಭೂಮಿಯಂತಹ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವುದೇ ಸ್ಪೂರ್ತಿ ಜೊತೆಗೆ ಮಗಳ ಈ ಮಟ್ಟಿಗಿನ ಬೆಳವಣಿಗೆಯಲ್ಲಿ ಅವರ ಬೆಂಬಲವೂ ಇದೆ.


ಇವರು ತಮ್ಮ ಶಿಕ್ಷಣವನ್ನು 1ರಿಂದ 2ನೆಯ ತರಗತಿಯವರೆಗೆ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆ ತೋಕೂರು ಹಳೆಯಂಗಡಿಯಲ್ಲಿ ಮುಗಿಸಿ 3ರಿದ 4ರವರೆಗೆ ನಿರ್ಮಲ ಶಾಲೆ ಬ್ರಹ್ಮಾವರದಲ್ಲಿ ನಂತರ 5ರಿಂದ 7ರವರೆಗೆ ಪುನಃ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆ ತೋಕೂರು ಹಳೆಯಂಗಡಿ ಇಲ್ಲಿ ಮುಗಿಸಿ 8ರಿಂದ 12ರವರೆಗೆ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರದಲ್ಲಿ ಮುಗಿಸಿದರು. ನಂತರದ ಪದವಿಯನ್ನು (BSc-CBZ) ಪೂರ್ಣ ಪ್ರಜ್ಞ ಕಾಲೇಜು ಉಡುಪಿಯಲ್ಲಿ ಪಡೆದಿದ್ದಾರೆ. ಅನಂತರ ಮಂಗಳೂರು ವಿಶ್ವವಿದ್ಯಾನಿಲಯ ಕೊಣಜೆಯಲ್ಲಿ ಜೀವ ರಸಾಯನಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಜೊತೆಗೆ ಅಮ್ಮನಂತೆ ಶಿಕ್ಷಕಿಯಾಗಿ ವಿದ್ಯಾದಾನ ಮಾಡಬೇಕೆಂಬ ಪ್ರಬಲ ಆಕಾಂಕ್ಷೆ ಹೊಂದಿದ್ದು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರಿನಲ್ಲಿ ಆಉ ಪದವಿಯನ್ನು ಪಡೆದಿರುತ್ತಾರೆ.

ನನಗೆ ಚಿಕ್ಕಂದಿನಲ್ಲೇ ಹಾಡು, ನೃತ್ಯ ಅಂತೆಲ್ಲ ಆಸಕ್ತಿಯಿತ್ತು. ತನ್ನ 3ನೆಯ ವಯಸ್ಸಿನಲ್ಲಿ ಹಾರಾಡಿ ಶಾಲೆಯ ಗಣೇಶೋತ್ಸವದ ವೇದಿಕೆಯಲ್ಲಿ ನೃತ್ಯ ಕಾರ್ಯಕ್ರಮ ನೀಡಿದರು. ಆಗ ಶಾಲೆಯ ಸಂಚಾಲಕರಾದ ಮತ್ತು ಊರಿನ ಹಿರಿಯರಾದ ಶ್ರೀಯುತ ಮೋನಪ್ಪ ಶೆಟ್ಟಿಯವರು ತುಂಬು ಹೃದಯದಿಂದ ಹಾರೈಸಿ ಇದೇ ರೀತಿ ಎಲ್ಲಾ ತರಹದ ವೇದಿಕೆ ಕಾರ್ಯಕ್ರಮದಲ್ಲಿ ಬೆಳೆದು ಬಾ ಮಗುವೆ ಎಂದು ಹಾರೈಸಿದ ಹಿರಿಯರ ಸವಿ ನುಡಿಯ ಫಲವೇ ತನ್ನ ಬೆಳವಣಿಗೆಗೆ ಬುನಾದಿ ಎಂದು ಯಾವಾಗಲೂ ಮೆಲುಕು ಹಾಕುತ್ತಾರೆ. ಇವರು ಅನಂತರ ಭಾಗವಹಿಸಲು ಸಾಧ್ಯವಾದ ಕಡೆಗಳಲೆಲ್ಲ ಅತ್ಯುತ್ತಮ ಭಾಗವಹಿಸುವಿಕೆಯ ಜೊತೆಗೆ ಬಹುಮಾನಗಳನ್ನು ಪಡೆದು ವಿದ್ಯಾಸಂಸ್ಥೆಯ ಕೀರ್ತಿ ಪತಾಕೆಯನ್ನು ಹಾರಿಸಿರುತ್ತಾರೆ. ಛದ್ಮವೇಷ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದವರೆಗೆ ಭಾಗವಹಿಸಿದ್ದು, ವಿ.ವಿಮಟ್ಟದ ಸ್ಪರ್ದೆಯಲ್ಲಿನ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ನಿರ್ಣಾಯಕರ ಮನಸ್ಸು ಗೆದ್ದಿರುತ್ತಾರೆ. ಜೊತೆಗೆ ಇನ್ನೂ ಅನೇಕ ಬಹುಮಾನಗಳನ್ನು ಪಡೆದದ್ದು, ಜೊತೆಗೆ ತಮ್ಮದೇ ನಿರ್ದೇಶನದಲ್ಲಿ ಬದುಕಲು ಬಿಡಿ ನಾಟಕವನ್ನು ಪ್ರದರ್ಶಿಸಿದ್ದು ಸ್ಮರಣೀಯ ಕ್ಷಣಗಳೆಂದು ಅಭಿಪ್ರಾಯ ಪಡುತ್ತಾರೆ. ಜೊತೆಗೆ KSPL ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿದ್ದನ್ನು ನೆನಪಿಸಿಕೊಳ್ಳುತ್ತಾರೆ. ಇವರು ಸಿನಿಮಾ ನಟನಾ ತರಬೇತಿಯನ್ನು FILM AMBITHನಲ್ಲಿ, ರಂಗಭೂಮಿ ತರಬೇತಿಯನ್ನು ಕೋಶಿಕಾ (ಚೇರ್ಕಾಡಿ) ಸಂಸ್ಥೆಯಲ್ಲೂ ಹಾಗೂ ಇನ್ನಿತರ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ.

ರಂಗಭೂಮಿಗೆ ಪಾದಾರ್ಪಣೆ ಮಾಡಿ ಸುಮರು 5-6 ವರ್ಷ ಸಂದಿದೆ. ಈ ಅವಧಿಯಲ್ಲಿ ವಿದ್ಯಾಭ್ಯಾಸದ ಜೊತೆಯಲ್ಲಿ ಕುಂದಾಪುರ ಕನ್ನಡ ಮಾತ್ರವಲ್ಲದೆ ತುಳು ಭಾಷೆಯಲ್ಲಿಯೂ ಕೂಡ ನಾಟಕಗಳನ್ನು ಮಾಡಿದ್ದಾರೆ.ಈ ಮೂಲಕ ಸುಮಾರು 50ಕ್ಕೂ ಪ್ರಯೋಗಗಳಲ್ಲಿ ಭಾಗವಹಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ಕೋಳಿಕಳ್ಳ, ಗಿರ್ಗಿಟ್ಲಿ, ವಠಾರ, ಈ ಪೊರ್ಲು ತೂವೊಡ್ಚಿ, ಇಲ್ಲ್‌ ಇಲ್ಲದ ಕಥೆ, ಕಥೆ ಏರ್ ಬರೆರ್ಪೆ, ಏರ್ ತಾಂಕುರ್ವೆ, ಹುಚ್ಚಾಪುರ ಸಂಸ್ಥಾನದಲ್ಲಿ ಪ್ಲೇಗ್ ಇಲ್ಲ, ಸಾಹೇಬರು ಬರುತ್ತಾರೆ, ಕಿತಾಪತಿ ಕಿಟ್ಟ ಹೀಗೆ ಅನೇಕ ನಾಟಕಗಳಲ್ಲಿ ಪ್ರವೇಶ ಪಡೆದಿರುತ್ತಾರೆ.

ಜೊತೆಗೆ ಕಿರುಚಿತ್ರಗಳಿಗೆ ಧ್ವನಿ ನೀಡಿರುವುವುದರೊಂದಿಗೆ ಪಶ್ಚಾತ್ತಾಪ ಎಂಬ ಕಿರುಚಿತ್ರದಲ್ಲಿ ಅಭಿನಯ ಮಾಡಿರುತ್ತಾರೆ. ನಾಟಕ ತಂಡಕ್ಕೆ ಪಾದಾರ್ಪಣೆ ಗೈಯಲು ತಾಯಿಯ ಸ್ನೇಹಿತೆಯಾದ ಶ್ರೀಮತಿ ನಿರ್ಮಲ ಮತ್ತು ಆನಂದ ಪೆರ್ಡೂರು ರವರ ಸಹಕಾರವೇ ಕಾರಣ ಎಂದು ಹೇಳುತ್ತಾರೆ. ಇತ್ತೀಚೆಗೆ ಅನೇಕ ನಾಟಕ ತಂಡದವರು ನನ್ನನ್ನು ಗುರುತಿಸಿ ಅತಿಥಿ ಕಲಾವಿದೆಯಾಗಿ ಆಹ್ವಾನಿಸಿ ಸನ್ಮಾನಿಸಿದ್ದಾರೆ ಎಂದು ಹರ್ಷಿಸುತ್ತಾರೆ.

ಇವರು ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಉಮಾಶ್ರೀ ಮತ್ತು ಕಿಚ್ಚ ಸುದೀಪ್ ಅವರ ಅಭಿಮಾನಿ. ಉಮಾಶ್ರೀ ಅಮ್ಮನಂತೆ ಹಾಸ್ಯ ನಟನೆಯಲ್ಲಿ ಹೆಸರು ಮಾಡಬೇಕು, ನಟ ಸುದೀಪರಂತೆ ಮಿಂಚಬೇಕು ಅನ್ನೋದು ಇವರ ಬಹು ದೊಡ್ಡ ಕನಸು. ಈ ನಿಟ್ಟಿನಲ್ಲಿ ದೀಕ್ಷಾರವರ ಸಾಧನೆ ಪ್ರಗತಿದಾಯಕವಾಗಿರಲಿ ಇವರಿಂದ ರಂಗಭೂಮಿಯಲ್ಲಿ ಮತ್ತಷ್ಟು ಹೊಸ ಹೊಸ ಪ್ರಯೋಗಗಳಾಗಲಿ ಆ ದೇವರು ಇವರಿಗೆ ಹಾಗೂ ಇವರ ಕುಟುಂಬದವರಿಗೆ ಆಯಸ್ಸು ಆರೋಗ್ಯದ ಜೊತೆಗೆ ಕಲಾಕ್ಷೇತ್ರವನ್ನು ಶ್ರೀಮಂತಗೊಳಿಸುವ ಹೆಚ್ಚಿನ ಅವಕಾಶಗಳನ್ನು ಕೊಡಲಿ ಅಂತ ನಾನಂತೂ ಪ್ರಾರ್ಥಿಸುತ್ತೀನಿ ಮತ್ತೆ ನೀವು?

ಭಾಷೆಯ ಜೊತೆಗೆ ಕಲಾಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಇಂತಹ ಕಲಾವಿದರಿಗೆ ಬೆಂಬಲ ಕೊಡುವ ಮೂಲಕ ನಮ್ಮ ಪರಂಪರೆಯನ್ನು ಉಳಿಸೋಣ ಮತ್ತು ಬೆಳೆಸೋಣ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BrahmavaraCoastal ArticleKannada News WebsiteKaravaliKaravali ArticleLatest News KannadaSpecial ArticleTheaterಕರಾವಳಿಬ್ರಹ್ಮಾವರರಂಗಭೂಮಿ
Share197Tweet123Send
Previous Post

ತಾಳಗುಪ್ಪ ಬಳಿ ಭೀಕರ ಅಪಘಾತ: ಸೈಕಲ್ ಸವಾರ ಸ್ಥಳದಲ್ಲೇ ಸಾವು

Next Post

ಯುವಕರು ಸಂಘಟನಾತ್ಮಕವಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಸಿದ್ದರಾಮಯ್ಯ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವಕರು ಸಂಘಟನಾತ್ಮಕವಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಸಿದ್ದರಾಮಯ್ಯ ಕರೆ

ಯುವಕರು ಸಂಘಟನಾತ್ಮಕವಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಸಿದ್ದರಾಮಯ್ಯ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶುಭಹಾರೈಕೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶುಭಹಾರೈಕೆ

March 18, 2026
ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

March 18, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL