ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಇಂದು ಹಲವು ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೇರಿದ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಶಿವಮೊಗ್ಗದ ಗುಂಡಪ್ಪ ಶೆಡ್’ನ ಮಲ್ಲೇಶ್ವರ ನಗರದ ನಿವಾಸ, ಗೋಪಾಳ ಗೌಡ ಬಡಾವಣೆಯಲ್ಲಿನ ನಿವಾಸ, ಭದ್ರಾವತಿಯ ಹುಣಸೇಕಟ್ಟೆಯ ತೋಟದ ಮನೆಯಲ್ಲೂ ಸಹ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆದಿದೆ.
ಇನ್ನು, ಆಲ್ಕೊಳದಲ್ಲಿರುವ ಇಲಾಖೆಯ ಕಚೇರಿಯಲ್ಲೂ ಸಹ ಪರಿಶೀಲನೆ ನಡೆದಿದೆ.
ಭ್ರಷ್ಠಾಚಾರ ನಿಗ್ರಹದಳದ ದಾವಣಗೆರೆ ಎಸ್’ಪಿ ಜಯಪ್ರಕಾಶ್, ಶಿವಮೊಗ್ಗ ಎಸಿಬಿ ಡಿವೈಎಸ್’ಪಿ ಜೆ. ಲೋಕೇಶ್, ದಾವಣಗೆರೆ ಡಿಎಸ್’ಪಿ ಪರಮೇಶ್ವರ್, ಪೊಲೀಸ್ ನಿರೀಕ್ಷಕ ವೀರೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post