ಬಂಡೀಪುರ: ಮಾಸ್ತಿಗುಡಿ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಅವರನ್ನು ಬಂಡೀಪುರ ಬಳಿ ತಮಿಳುನಾಡು ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಮಾಸ್ತಿಗುಡಿ ಚಿತ್ರೀಕರಣದ ವೇಳೆ ಇಬ್ಬರು ಕಲಾವಿದರು ಮೃತಪಟ್ಟಿದ್ದರು. ಈ ಕುರಿತಂತೆ ಪ್ರಕರಣ ದಾಖಲಾದ ನಂತರ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಅವರು ಪೊಲೀಸರಿದಂದ ತಪ್ಪಿಸಿಕೊಂಡಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ವಿಜಯ್ ನಿರ್ಮಾಪಕರಿಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ವಿರುದ್ದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ದಾಖಲಾದ ಬಳಿಕ ವಿಜಯ್ ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ವಿಜಯ್ ಅವರಿಗಾಗಿ ಪೊಲೀಸರು ಹುಡುಕುತ್ತಿದ್ದರು. ಇಂದು ಮುಂಜಾನೆ ಕೊಯಮತ್ತೂರು ಬಂಡೀಪುರ ಗಡಿಯಲ್ಲಿ ರೆಸಾರ್ಟ್ವೊಂದರಲ್ಲಿ ತಲೆಮರೆಸಿಕೊಂಡಿದ್ದ ವಿಜಯ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Discussion about this post