ರಾಂಚಿ: ಲೋಕಸಭಾ ಚುನಾವಣೆಯಲ್ಲಿ ಆರ್’ಜೆಡಿ ಹೀನಾಯ ಸೋಲು ಅನುಭವಿಸಿರುವ ಪರಿಣಾಮ ತೀವ್ರ ನೊಂದಿರುವ ಅದರ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಊಟ-ತಿಂಡಿ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.
ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿ ಎಂದು ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಲಾಲೂ, ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಆಘಾತಗೊಂಡಿದ್ದು, ಇವರನ್ನು ಆರ್’ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳಿಗೆ ಮಾತನಾಡಿರುವ ಆಸ್ಪತ್ರೆಯ ವೈದ್ಯರು, ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಊಟ ಹಾಗೂ ತಿಂಡಿಯನ್ನು ಸೇವನೆ ಮಾಡದೇ ತಿರಸ್ಕರಿಸಿದ್ದಾರೆ. ಅವರು ಪ್ರತಿದಿನ ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕು. ಆದರೆ, ಅವರು ಆಹಾರ ತೆಗೆದುಕೊಳ್ಳದೇ ಇರುವ ಕಾರಣ ಆರೋಗ್ಯದಲ್ಲಿ ಏರುಪೇರಾಗುತ್ತಿದೆ ಎಂದಿದ್ದಾರೆ.
Discussion about this post