ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿರುವ ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರ ಮತ್ತೊಂದು ಪ್ರಯತ್ನಕ್ಕೆ ಮಹತ್ವದ ಮುನ್ನಡೆ ದೊರೆತಿದ್ದು, ಕ್ಷೇತ್ರದ ಜನರಲ್ಲಿ ಸಂತಸ ಮೂಡಿದೆ.
ಹೌದು… ಮಲೆನಾಡಿನ ಹೆಬ್ಬಾಗಿಲು #Shivamogga ಶಿವಮೊಗ್ಗದಿಂದ ಕರಾವಳಿಯನ್ನು ಸಂಪರ್ಕಿಸುವ ಆಗುಂಬೆ ಘಾಟ್ #AgumbeGhat ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಸಂಸದರು ಪ್ರಯತ್ನ ನಡೆಸಿದ್ದು, ಅದಕ್ಕೆ ಈಗೊಂದು ಮಹತ್ವದ ಜಯ ಸಿಕ್ಕಿದೆ.
ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು 2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.
ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು ಮತ್ತು ತಜ್ಞರ ನೇಮಕಾತಿ ಒಳಗೊಂಡಿರುವುದು ಈ ಘೋಷಣೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.
ದಶಕಗಳಿಂದ ಜನರು ಎದುರಿಸುತ್ತಿದ್ದ ಅಪಾಯಕರ ಪ್ರಯಾಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಕ್ಕಿನಲ್ಲಿ ಇದು ಮೊದಲ ನಿರ್ಣಾಯಕ ಹೆಜ್ಜೆಯಾಗಿದೆ.
ಪ್ರಮುಖವಾಗಿ, ಈ ಯೋಜನೆ ಮಲೆನಾಡು-ಕರಾವಳಿ ಜಿಲ್ಲೆಗಳ ಸಂಪರ್ಕ ಸುಧಾರಿಸಿ, ಸುರಕ್ಷತೆ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ.
ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















