No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ಆನಂದಕಂದ ಲೇಖನ ಮಾಲಿಕೆ | ಪ್ರಸಿದ್ಧಿ vs ಸಾಧನೆ, ಸಾರ್ಥಕತೆ

kalpa News by kalpa News
October 12, 2025
in ಆನಂದ ಕಂದ
0
ಆನಂದಕಂದ ಲೇಖನ ಮಾಲಿಕೆ | ಪ್ರಸಿದ್ಧಿ vs ಸಾಧನೆ, ಸಾರ್ಥಕತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-32  |ಜೀವನವೆಂಬುದು ಪ್ರತಿಯೊಬ್ಬರನ್ನೂ ಕೂಡ ವಿಭಿನ್ನ ದಿಕ್ಕಿನಲ್ಲಿ ಕರೆದುಕೊಂಡು ಹೋಗುತ್ತದೆ. ಕೆಲವರು ಖ್ಯಾತಿ, ಅಧಿಕಾರ ಮತ್ತು ಸಂಪತ್ತಿನ ಹಾದಿ ಹಿಡಿಯುತ್ತಾರೆ; ಇನ್ನು ಕೆಲವರು ಕರ್ತವ್ಯಮಾರ್ಗದಲ್ಲಿ ನಡೆದು ಒಳಗಿನ ತೃಪ್ತಿಯನ್ನು ಸಂಪಾದಿಸುತ್ತಾರೆ. ಈ ವಿಭಿನ್ನ ಮಾರ್ಗಗಳ ಮಧ್ಯೆ ನಿಂತು ನಾವು ಕೇಳಬೇಕಾದ ಪ್ರಶ್ನೆಯೇ – “ಸಾರ್ಥಕರೆಲ್ಲರೂ ಪ್ರಸಿದ್ಧರೇ? ಪ್ರಸಿದ್ಧರೆಲ್ಲರೂ ಸಾರ್ಥಕರೇ?”.

ಹೀಗಾಗಿ ಪ್ರಸಿದ್ಧಿ ಮತ್ತು ಸಾರ್ಥಕತೆ – ಎರಡೂ ಕೂಡ ಜೀವನದ ವಿಭಿನ್ನ ಮಾರ್ಗಗಳು; ಒಂದನ್ನು ಲೋಕ ಮೆಚ್ಚುತ್ತದೆ, ಮತ್ತೊಂದರಿಂದ ಆತ್ಮತೃಪ್ತಿ ಉಂಟಾಗುತ್ತದೆ. ಈ ಎರಡು ಮಾರ್ಗಗಳ ಮಧ್ಯೆ ಸಮತೋಲನ ಸಾಧಿಸಿದವರು ಮಾತ್ರ ನಿಜವಾಗಿಯೂ ಅಮರರಾಗುತ್ತಾರೆ.

ಸಾರ್ಥಕತೆ ಎನ್ನುವುದು ಬಾಹ್ಯ ಮೆಚ್ಚುಗೆ ಅಥವಾ ಹೊಗಳಿಕೆಯಿಂದ ಬರುವುದಲ್ಲ. ಅದು ಆತ್ಮಸಂತೃಪ್ತಿಯ ಸ್ಥಿತಿ. ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಪೂರೈಸಿದಾಗ ಮನಸ್ಸಿನಲ್ಲಿ ಮೂಡುವ ನಿಜವಾದ ಶಾಂತಿ. ಒಬ್ಬ ಗುರು ತನ್ನ ಜೀವನವನ್ನೆಲ್ಲಾ ವಿದ್ಯಾರ್ಥಿಗಳ ಬೋಧನೆಗೆ ಮೀಸಲಿಟ್ಟಾಗ, ಅವನು ಪ್ರಸಿದ್ಧನಾಗದಿದ್ದರೂ ಅವನ ಜೀವನ ಸಾರ್ಥಕವಾಗುತ್ತದೆ. ಒಬ್ಬ ರೈತ ದಿನವೂ ಬಿಸಿಲಿನ ತಾಪದಲ್ಲಿ ದುಡಿಯುತ್ತಾ, ಕೋಟ್ಯಾಂತರ ಜನರ ಹೊಟ್ಟೆತುಂಬಿಸುತ್ತಾನೆ. ಅವನು ಪತ್ರಿಕೆಗಳಲ್ಲಿ ಬರದಿರಬಹುದು, ಆದರೆ ಅವನ ಶ್ರಮವೇ ದೇಶದ ಆಧಾರ. ಇದೇ ಸಾರ್ಥಕತೆ.ಆದರೆ ಪ್ರಸಿದ್ಧಿ ಎಂಬುದು ಕೇವಲ ಜನರು ಕೊಡುವ ಗೌರವ. ಅದು ಸಮಾಜದ ಕಣ್ಣಿನಲ್ಲಿ ವ್ಯಕ್ತಿಯ ಸ್ಥಾನವನ್ನು ತೋರಿಸುತ್ತದೆ, ಆದರೆ ಆ ವ್ಯಕ್ತಿಯ ಮನಸ್ಸಿನ ಶುದ್ಧತೆಯನ್ನಲ್ಲ. ಪ್ರಸಿದ್ಧರಾಗುವುದಕ್ಕೆ ಕೆಲವೊಮ್ಮೆ ಪ್ರತಿಭೆ, ಕೆಲವೊಮ್ಮೆ ಭಾಗ್ಯ, ಮತ್ತೆ ಕೆಲವೊಮ್ಮೆ ಕೃತಕ ಪ್ರಚಾರವೇ ಕಾರಣವಾಗಬಹುದು. ಇಂದಿನ ಸಾಮಾಜಿಕ ಮಾಧ್ಯಮದ ಯುಗದಲ್ಲಿ, ಕೆಲವು ಕ್ಷಣಗಳಲ್ಲಿ ಲಕ್ಷಾಂತರ ಜನರು ಒಬ್ಬರನ್ನು ಪ್ರಸಿದ್ಧಗೊಳಿಸುತ್ತಾರೆ, ಮತ್ತೆ ಕೆಲವು ದಿನಗಳಲ್ಲಿ ಅದೇ ಜನರು ಅವರನ್ನು ಮರೆತು ಬಿಡುತ್ತಾರೆ. ಹೀಗಾಗಿ ಪ್ರಸಿದ್ಧಿಯು ತಾತ್ಕಾಲಿಕ ಅಲೆ; ಅದು ಎಷ್ಟೇ ಎತ್ತರಕ್ಕೆ ಏರಿದರೂ ಒಂದಲ್ಲ ಒಂದು ದಿನ ಬೀಳುತ್ತದೆ.

ಆದರೆ ನಾವು ಇತಿಹಾಸದ ಪುಟಗಳನ್ನು ತಿರುವಿದಾಗ ನಮಗೆ ಸಾರ್ಥಕತೆಯಿಂದ ಪ್ರಸಿದ್ಧರಾದ ಮಹನೀಯರನ್ನು ಕಾಣುತ್ತಾರೆ. ಶ್ರೀರಾಮಚಂದ್ರನು ಕೇವಲ ರಾಜನೆಂದು ಅಥವಾ ಅಧಿಕಾರಕ್ಕಾಗಿ ಪ್ರಸಿದ್ಧರಾದವನಲ್ಲ; ಅವನು ಸಾರ್ಥಕನಾಗಿದ್ದವನು. ಏಕೆಂದರೆ ಅವನ ಜೀವನ ಧರ್ಮದ ಪ್ರತಿಬಿಂಬವಾಗಿತ್ತು.ಅವನು ಪಿತೃವಾಕ್ಯಪರಿಪಾಲಕನಾ ಗಿ,ಶರಣಾಗತವತ್ಸಲನಾಗಿ ಮತ್ತು ಶಿಷ್ಟರಕ್ಷಕನಾಗಿ ನಡೆದು ಆದರ್ಶಪುರುಷರಾದರು. ಅವರ ಪ್ರಸಿದ್ಧಿಯ ಮೂಲವೇ ಅವರ ಸಾರ್ಥಕತೆ.

ಅದೇ ರೀತಿಯಲ್ಲಿ ಶ್ರೀಕೃಷ್ಣ ಪರಮಾತ್ಮನು ಕೂಡ ಕೇವಲ ಪ್ರಸಿದ್ಧನಾದವನಲ್ಲ; ಅವರ ಸಾರ್ಥಕತೆ ಕರ್ಮಯೋಗದ ಬೋಧನೆಯಲ್ಲಿ ಹಾಗೂ ಧರ್ಮಸ್ಥಾಪನೆಯ ಸಂಕಲ್ಪದಲ್ಲಿ ಅಡಗಿತ್ತು. ಅವನು ಲೋಕಕ್ಕೆ ತಿಳಿಸಿದ “ನಿಷ್ಕಾಮ ಕರ್ಮ” ತತ್ತ್ವವೇ ಸಾರ್ಥಕ ಜೀವನದ ಸೂತ್ರ. ಅವರ ಪ್ರಸಿದ್ಧಿ ಧರ್ಮದ ಸಂಸ್ಥಾಪನೆಯಿಂದ ಹುಟ್ಟಿದದ್ದು, ವೈಭವದ ಪ್ರದರ್ಶನದಿಂದಲ್ಲ.

ಇಂತಹ ಆದರ್ಶಪುರುಷರ ಕಥೆಗಳನ್ನು ಬಾಲ್ಯದಲ್ಲಿಯೇ ಕೇಳಿದ ಸ್ವಾಮಿ ವಿವೇಕಾನಂದರು ಕೂಡ ಇದೇ ಪಂಕ್ತಿಯವರು. ಅವರು ಬೋಧಿಸಿದ ಆತ್ಮಶಕ್ತಿ, ದೇಶಭಕ್ತಿ ಮತ್ತು ಮಾನವಸೇವೆ ಜೀವನವನ್ನು ಸಾರ್ಥಕಗೊಳಿಸುವ ದಾರಿಯನ್ನು ತೋರಿಸಿತು. ಅವರ ಪ್ರಸಿದ್ಧಿ ಚಿಕಾಗೋ ಭಾಷಣದಿಂದ ಬಂದರೂ, ಅವರ ಸಾರ್ಥಕತೆ ತ್ಯಾಗ ಮತ್ತು ಗುರು ರಾಮಕೃಷ್ಣರ ತತ್ತ್ವಗಳಲ್ಲಿ ಜೀವಂತವಾಗಿತ್ತು. ಪ್ರಸಿದ್ಧಿ ಅವರನ್ನು ಹುಡುಕಿಕೊಂಡು ಬಂತು, ಏಕೆಂದರೆ ಅವರು ಸಾರ್ಥಕರಾಗಿದ್ದರು.ಹೀಗಾಗಿ ನಾವು ಕಾಣಬಹುದು ನಿಜವಾದ ಪ್ರಸಿದ್ಧಿ ಸಾರ್ಥಕತೆಯಲ್ಲಿ ಅರಳುತ್ತದೆ. ಸಾರ್ಥಕತೆ ಎಂಬುದು ಬೆಳಕು; ಪ್ರಸಿದ್ಧಿ ಎಂಬುದು ಅದರ ಪ್ರತಿಫಲನೆಯ ಕಿರಣ.ಇಂದಿನ ಯುಗದಲ್ಲಿ ಬಹುಜನ ಪ್ರಸಿದ್ಧರಾಗಲು ಅಸಹನೀಯ ಸ್ಪರ್ಧೆಯಲ್ಲಿ ಓಡುತ್ತಿದ್ದಾರೆ — ಆದರೆ ಕೆಲವರು ಮಾತ್ರ ಸಾರ್ಥಕವಾಗಲು ಪ್ರಯತ್ನಿಸುತ್ತಿದ್ದಾರೆ. ಸಾರ್ಥಕತೆ ಎಂದರೆ ಎಲ್ಲರ ಮೆಚ್ಚುಗೆ ಪಡೆಯುವುದಲ್ಲ; ಅದು ಕೇವಲ ಒಂದು ಪ್ರಶ್ನೆಗೆ ನೇರವಾದ ಉತ್ತರ – “ನಾನು ನಿಜವಾಗಿ ನನ್ನ ಕರ್ತವ್ಯವನ್ನು ನಿಷ್ಠೆಯಿಂದ ಪೂರೈಸಿದ್ದೇನಾ?” ಎಂದು.

ಒಟ್ಟಾರೆ ಹೇಳುವುದಾದರೆ ಸಾರ್ಥಕತೆ ಮತ್ತು ಪ್ರಸಿದ್ಧಿ ಎರಡು ವಿಭಿನ್ನ ದಾರಿಗಳು. ಪ್ರಸಿದ್ಧಿ ಋಣಾತ್ಮಕವಾಗಿಯೂ ಇರಬಹುದು, ಧನಾತ್ಮಕವಾಗಿಯೂ ಇರಬಹುದು. ಆದರೆ ಸಾಧನೆ ಎಂಬುದು ಕೇವಲ ಧನಾತ್ಮಕ ಮಾತ್ರ. ಉದಾಹರಣೆಗೆ ಗಂಗೆಯ ಉಳಿವಿಗಾಗಿ ಹೋರಾಡಿ ಜೀವ ತೆತ್ತ ಜ್ಞಾನಸ್ವರೂಪ ಸಾನಂದ ಸ್ವಾಮೀಜಿಯಂಥ ಅನೇಕರು ಪ್ರಸಿದ್ಧಿಗೆ ಬಾರದ ಸಾರ್ಥಕರು. ಅಂತೆಯೇ ತಮ್ಮ ಕುಕೃತ್ಯದಿಂದ ಋಣಾತ್ಮಕವಾಗಿ ಪ್ರಸಿದ್ಧಿಗೆ ಬಂದವರು ವೀರಪ್ಪನ್ ಅಂತಹ ಇತ್ಯಾದಿಗಳು.

ಪ್ರಸಿದ್ಧರಾಗುವುದು ಸುಲಭ, ಆದರೆ ಸಾರ್ಥಕರಾಗುವುದು ದುರ್ಲಭ. ಪ್ರಸಿದ್ಧಿಯನ್ನು ಬೆನ್ನಟ್ಟುವವರು ಕಾಲದೊಂದಿಗೆ ಮಾಯವಾಗುತ್ತಾರೆ; ಸಾರ್ಥಕತೆಯನ್ನು ಬೆನ್ನಟ್ಟುವವರು ಕಾಲಕ್ಕಿಂತಲೂ ಎತ್ತರವಾಗಿ ಉಳಿಯುತ್ತಾರೆ. ರಾಮ ನಡೆದಂತೆ ನಡೆದರೆ, ಕೃಷ್ಣ ನುಡಿದಂತೆ ನಡೆದರೆ, ಖಂಡಿತವಾಗಿಯೂ ಸಾರ್ಥಕತೆಯನ್ನು ನಾವು ಪಡೆಯುತ್ತೇವೆ. ಹೀಗಾಗಿ ನಾವು ಪ್ರಸಿದ್ಧರಾಗುವುದಕ್ಕಿಂತ ಸಾರ್ಥಕರಾಗುವುದೇ ಉತ್ತಮ; ಏಕೆಂದರೆ ಸಾರ್ಥಕತೆ ಇದ್ದಲ್ಲಿ ಪ್ರಸಿದ್ಧಿ ಸ್ವತಃ ನಮ್ಮನ್ನು ಹುಡುಕಿಕೊಂಡು ಬರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnandakandaKannada News WebsiteLatest News KannadaPurnapramati Gurukulaಆನಂದಕಂದಪ್ರಸಿದ್ಧಿಸಾರ್ಥಕತೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಸ್ಲಿರನ್ನು ಖುಷಿ ಪಡಿಸೋಕೆ ಬಚ್ಚಾ ಏನೇನೋ ಮಾತಾಡ್ತಾನೆ | ಖರ್ಗೆಗೆ ಯತ್ನಾಳ್ ಟಕ್ಕರ್

Next Post

ಶಿವಮೊಗ್ಗದಲ್ಲಿ RSS ವೈಭವದ ಪಥಸಂಚಲನ ಹೇಗಿತ್ತು? ಫೋಟೋ, ವೀಡಿಯೋ ನೋಡಿ

kalpa News

kalpa News

Next Post
ಶಿವಮೊಗ್ಗದಲ್ಲಿ RSS ವೈಭವದ ಪಥಸಂಚಲನ ಹೇಗಿತ್ತು? ಫೋಟೋ, ವೀಡಿಯೋ ನೋಡಿ

ಶಿವಮೊಗ್ಗದಲ್ಲಿ RSS ವೈಭವದ ಪಥಸಂಚಲನ ಹೇಗಿತ್ತು? ಫೋಟೋ, ವೀಡಿಯೋ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL