ಕಲ್ಪ ಮೀಡಿಯಾ ಹೌಸ್ | ಆನಂದಪುರ |
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.
ಆನಂದಪುರ ಗ್ರಾಪಂನ ಮುಂಬಾಳ್ ಗ್ರಾಮದ ಗುರುಮೂರ್ತಿ (38) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ಅಡ್ಡೆರಿ ಗ್ರಾಮದ ಬಳಿ ವ್ಯಕ್ತಿ ರೈಲಿಗೆ ಸಿಲುಕಿ ಈ ಘಟನೆ ನಡೆದಿದೆ.
ಈ ಪ್ರಕರಣ ಶಿವಮೊಗ್ಗ ರೈಲ್ವೆ ಇಲಾಖೆಯಲ್ಲಿ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post