No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರಂಗಪ್ರವೇಶಕ್ಕೆ ಅಣಿಯಾದ ಅನನ್ಯಾ ಅಂಬರೀಶ್ | 18ರಂದು ಜೆಎಸ್‌ಎಸ್ ಸಭಾಂಗಣದಲ್ಲಿ ನೃತ್ಯ ಪ್ರಸ್ತುತಿ

ಖ್ಯಾತ ವಿದುಷಿ ರೇವತಿ ನರಸಿಂಹನ್ ಮಾರ್ಗದರ್ಶನ

kalpa News by kalpa News
June 14, 2023
in Special Articles
0
ರಂಗಪ್ರವೇಶಕ್ಕೆ ಅಣಿಯಾದ ಅನನ್ಯಾ ಅಂಬರೀಶ್ | 18ರಂದು ಜೆಎಸ್‌ಎಸ್ ಸಭಾಂಗಣದಲ್ಲಿ ನೃತ್ಯ ಪ್ರಸ್ತುತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ನಾಟ್ಯ ನಿಕೇತನದ ಗುರು ವಿದುಷಿ ರೇವತಿ ನರಸಿಂಹನ್ ಅವರ ಶಿಷ್ಯೆ ಅನನ್ಯಾ ಅಂಬರೀಶ್ ಗಿಳಿಯಾರ್ ಭರತನಾಟ್ಯ #Bharatanatya ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ.

ರಾಜಧಾನಿಯ ಜಯನಗರ 8ನೇ ಬಡಾವಣೆಯ ಜೆಎಸ್‌ಎಸ್ ಸಭಾಂಗಣದಲ್ಲಿ ಜೂ. 18ರ ಬೆಳಗ್ಗೆ 10.30ಕ್ಕೆ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಅನನ್ಯಾ ಅಂಬರೀಶ್ ರಂಗಪ್ರವೇಶ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಖ್ಯಾತ ನರ್ತಕಿ, ಅಭಿನವ ಡಾನ್ಸ್ ಅಕಾಡೆಮಿ ನಿರ್ದೇಶಕಿ ನಿರುಪಮಾ ರಾಜೇಂದ್ರ, ಹಿರಿಯ ವಿಮರ್ಷಕ ಎಸ್. ನಂಜುಂಡರಾವ್, ಕರ್ನಾಟಕ ಶಾಸ್ತ್ರೀಯ ಸಂಗೀತ #CarnaticClassicalMusic ಗಾಯಕ ಕೆ. ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅನನ್ಯಾ ಅಂಬರೀಶ್ ರಂಗಪ್ರವೇಶದ #RangaPravesha ಪ್ರಸ್ತುತಿಗೆ ವಿದ್ವಾಂಸರಾದ ಡಿ.ಎಸ್. ಶ್ರೀವತ್ಸ (ಗಾಯನ), ಗುರು ರೇವತಿ ನರಸಿಂಹನ್(ನಟುವಾಂಗ), ಹರ್ಷ ಸಾಮಗ (ಮೃದಂಗ), ವಿವೇಕ ಕೃಷ್ಣ (ಕೊಳಲು) ಮತ್ತು ಶಂಕರ್ ರಾಮನ್ (ವೀಣೆ) ಸಹಕಾರವಿದೆ.

ಕಲಾವಿದೆಯ ಪರಿಚಯ
ಬೆಂಗಳೂರಿನ ವೈದ್ಯಕೀಯ ರಂಗದ ಉದ್ಯಮಿ ಅಂಬರೀಶ್ ಗಿಳಿಯಾರ್ ಮತ್ತು ವೀಣಾ ಅಂಬರೀಶ್ ಪುತ್ರಿ ಅನನ್ಯಾ ನೃತ್ಯ ಕ್ಷೇತ್ರಕ್ಕೆ ಅಡಿ ಇಟ್ಟಿದ್ದು 8ನೇ ವಯಸ್ಸಿನಲ್ಲಿ. ಮನೆಯ ಸುಸಂಸ್ಕೃತ, ಸಂಗೀತ, ಸಾಹಿತ್ಯದ ವಾತಾವರಣವೇ ಅನನ್ಯಾಗೆ ಕಲಾಸಕ್ತಿಮೂಡಿಸಿತು. ವೀಣಾ ವಾದಕರಾಗಿರುವ ಅಜ್ಜ ಗಣಪತಿ ಸೋಮಯಾಜಿ ಅವರ ಜೀವನ ಮತ್ತು ಸಾಧನೆಯೇ ಈಕೆಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿತು.
ವಿದುಷಿ ರೇವತಿ ನರಸಿಂಹನ್ ಅವರಲ್ಲಿ ಶಿಷ್ಯತ್ವ ಸ್ವೀಕರಿಸಿದ ಅನನ್ಯಾ, ಬಹುಬೇಗ ನರ್ತನವನ್ನು ತನ್ನದಾಗಿಸಿಕೊಳ್ಳುವತ್ತ ಆಸಕ್ತಿ ತೋರಿದ್ದು ವಿಶೇಷ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆ ಹೊಂದಿದ ಈಕೆ ಈಗ ವಿದ್ವತ್ ಪರೀಕ್ಷೆ ಅಭ್ಯಾಸ ನಿರತೆ. 2019ರಿಂದ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಿಸಿಆರ್‌ಟಿ ವಿದ್ಯಾರ್ಥಿವೇತನ #CCRTScholarship ಪಡೆದು ನೃತ್ಯ ಕಲಿಕೆಯಲ್ಲಿ ಸಾಧನೆ ತೋರುತ್ತಿರುವುದು ಬಹು ವಿಶೇಷ.

ಅನನ್ಯಾ ಅಂಬರೀಶ್ ಗಿಳಿಗಾರ್

ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸದಲ್ಲೂ ವಿಶೇಷ ಆಸಕ್ತಿ ತೋರಿದ್ದಾಳೆ ಅನನ್ಯಾ. ಈಗ ಸೀನಿಯರ್ ಹಂತದ ಅಭ್ಯಾಸದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದ ವಿದುಷಿ ಗಾಯತ್ರಿ ಮಯ್ಯ ಅವರ ಶಿಷ್ಯತ್ವದಲ್ಲಿ ಗಾಯನವನ್ನು ಕರಗತ ಮಾಡಿಕೊಳ್ಳುವತ್ತ ಸಾಗಿರುವುದು ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿದೆ.

ವಿವಿಧ ವೇದಿಕೆಯಲ್ಲಿ ಕಲಾ ಪ್ರದರ್ಶನ
ಬಾಲ ಕಲಾವಿದೆಯಾಗಿ `ರಾಮಾನುಜ ವೈಭವ’ ನೃತ್ಯ ನಾಟಕದಲ್ಲಿ ಪುಟ್ಟ ಕೃಷ್ಣನ ಅಭಿನಯದಿಂದ ಪ್ರೇಕ್ಷಕರ ಮನಗೆದ್ದ ಅನನ್ಯಾ ವೇದಿಕೆಯ ಪ್ರಸ್ತುತಿಗಳಿಗೆ ಹೇಳಿ ಮಾಡಿಸಿದ ಪ್ರತಿಭೆ. ನಾಟ್ಯನಿಕೇತನ ಸಂಸ್ಥೆಯ ವಾರ್ಷಿಕ ಮಹೋತ್ಸವಗಳಲ್ಲಿ ಸಹ ಕಲಾವಿದೆಯರೊಂದಿಗೆ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದು ಗಮನಾರ್ಹ ಸಂಗತಿ.
ಗುರು ರೇವತಿ ಅವರ ಮಾರ್ಗದರ್ಶನ ಹಲವು ವಿನೂತನ ಪ್ರಯೋಗಾತ್ಮಕ ನೃತ್ಯಗಳಲ್ಲಿ ಅನನ್ಯಾ ತನ್ನ ನೃತ್ಯ ಕೌಶಲ ಪಡಮೂಡಿಸಿ ಸೈ ಎನಿಸಿಕೊಂಡಿರುವುದು ಬೆಳವಣಿಗೆಯ ಸಂಕೇತವೇ ಆಗಿದೆ. ಶಂಕರ ಟಿವಿ ವಾಹಿನಿ ನೃತ್ಯ ಸ್ಪರ್ಧೆಯಲ್ಲಿ #DanceCompetition ಈಕೆಗೆ ಬಹುಮಾನ ಬಂದಿರುವುದು ಸ್ಪರ್ಧಾತ್ಮಕ ರಂಗಕ್ಕೆ ಅಣಿಗೊಳಿಸಿದಂತಾಗಿದೆ.

ಕುಮಾರನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಷಯ ಅಧ್ಯಯನ ಮಾಡುವುದರೊಂದಿಗೆ ಸಂಗೀತ #Music ಮತ್ತು ನೃತ್ಯ ಕ್ಷೇತ್ರಗಳಲ್ಲಿ ಸಾಧನೆ ಹೆಜ್ಜೆಗಳನ್ನು ಮೂಡಿಸುತ್ತಿರುವ ಅನನ್ಯಾಗೆ ಗುರುಕೃಪೆಯೊಂದಿಗೆ ಶ್ರದ್ಧೆ ಮತ್ತು ಆಸಕ್ತಿಗಳು ಕೈ ಹಿಡಿದು ಬೆಳೆಸುತ್ತಿವೆ. ಮೂಲ ವಿಜ್ಞಾನ ಮತ್ತು ಕಲೆಯನ್ನು ಜೀವನದ ಸಾಧನೆಗೆ ಒಗ್ಗಿಸಿಕೊಂಡು ಉನ್ನತ ಸ್ಥಾನಕ್ಕೆ ಏರಬೇಕು ಎಂಬುದು ಈಕೆಯ ಅಂತರಂಗದ ಆಶಯ. ಅದಕ್ಕೆ ಹೆತ್ತವರು ಅಹರ್ನಿಷಿ ಪ್ರೋತ್ಸಾಹ ನೀಡುತ್ತಿರುವುದು ಸುಕೃತವೇ ಸರಿ. ಭರವಸೆಯ ಕಲಾವಿದೆಯಾಗಿರುವ ಅನನ್ಯಾಗೆ ರಂಗ ಪ್ರವೇಶವು ಕಲಾಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ರೂಪಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005-1.mp4

Kalahamsa Infotech private limited

Tags: Abhinava Dance AcademyBENGALURUBharatanatyaCarnatic classical musicKannada News WebsiteLatest News KannadaRamanuja Vaibhavaಅನನ್ಯಾ ಅಂಬರೀಶ್ ಗಿಳಿಗಾರ್ಅಭಿನವ ಡಾನ್ಸ್ ಅಕಾಡೆಮಿಕರ್ನಾಟಕ ಶಾಸ್ತ್ರೀಯ ಸಂಗೀತನೃತ್ಯ ನಾಟಕಬಾಲ ಕಲಾವಿದೆಬೆಂಗಳೂರುಭರತನಾಟ್ಯರಂಗಪ್ರವೇಶರಾಮಾನುಜ ವೈಭವ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ವಿಶ್ವ ರಕ್ತದಾನಿಗಳ ದಿನ’ ನಾವೇಕೆ ಈ ದಿನವನ್ನು ಈ ವಿಶೇಷ ದಿನವನ್ನಾಗಿ ಆಚರಿಸುತ್ತಿದ್ದೇವೆ?

Next Post

ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು

kalpa News

kalpa News

Next Post
Faridabad Teacher Murder Stabbed School Revenge Attack

ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL