ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಅದರ ಸಲುವಾಗಿ ಗ್ರಾಮದ ಎಲ್ಲ ಚರಂಡಿ ಮತ್ತು ರಸ್ತೆಗಳ ಸ್ವಚ್ಚತೆಗೆ ಪಂಚಾಯ್ತಿ ಮುಂದಾಗಿದೆ ಎಂದು ಪಿಡಿಓ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಅದೇಶದಂತೆ ಗ್ರಾಮದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿದ್ದು ಚರಂಡಿಗಳಿಗೆ ಡಿಡಿಟಿ, ಫಿನಾಯಲ್, ರಾಸಾನಿಯಕ ಸಿಂಪಡಿಸುವ ಕೆಲಸ ನಡೆಯುತ್ತಿದೆ. ಕೆಲವು ಖಾಸಗಿ ನಿವೇಶನಗಳಲ್ಲಿ ಕಸಕಡ್ಡಿ ತುಂಬಿದ್ದು ಅವುಗಳನ್ನು ಮತ್ತು ತಿಪ್ಪೆಗುಂಡಿಗಳನ್ನು ಜೆಸಿಬಿ ಮುಖಾಂತರ ತೆರವುಗೊಳಿಸಲಾಗುತ್ತಿದೆ. ಇದಕ್ಕೆ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಜನ ಸಾಮಾನ್ಯರು ಸಹಕರಿಸಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯ ಮಾನವ ಹಕ್ಕುಗಳ ಹಿಂದುಳಿದ ವರ್ಗಗಳ ಅಧ್ಯಕ್ಷ ಅಸೀಕಿಲ್ ಮಾತನಾಡಿ, ಸರಕಾರಗಳ ಅದೇಶವನ್ನು ಗ್ರಾಮದ ಜನರು ಚಾಚೂ ತಪ್ಪದೇ ಪಾಲಿಸುತ್ತಿದ್ದು, ಜೊತೆಗೆ ಅಂತರವನ್ನು ಕಾಯ್ದುಕೊಂಡು ಮಹಾಮಾರಿ ಕೊರೋನಾ ನಿರ್ಮೂಲನೆ ಕಟಿಬದ್ದರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post