ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ಮುಸ್ಲಿಂ ಸಮುದಾಯಕ್ಕೆ ಸೇರಿ ಉದ್ಯೋಗಿಗಳು ನಮ್ಮಲ್ಲಿ ಕೆಲಸಕ್ಕೆ ಇಲ್ಲ ಎಂದು ಬೋರ್ಡ್ ಹಾಕಿದ್ದ ಹಿನ್ನೆಲೆಯಲ್ಲಿ ಬೇಕರಿ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ.
ಚೆನ್ನೈನ ಬೇಕರಿಯೊಂದರ ಮಾಲೀಕ ನಮ್ಮ ಅಂಗಡಿಯಲ್ಲಿ ಎಲ್ಲ ತಿನಿಸುಗಳನ್ನೂ ಜೈನ ಸಮುದಾಯದವರೇ ತಯಾರಿಸುತ್ತಾರೆ. ಮುಸ್ಲಿಂ ಸಮುದಾಯದ ಉದ್ಯೋಗಿಗಳು ನಮ್ಮಲ್ಲಿ ಕೆಲಸಕ್ಕೆ ಇಲ್ಲ ಎಂದು ಬರೆದು ಅಂಗಡಿಯ ಎದುರು ಬೋರ್ಡ್ ಹಾಕಿದ್ದರು.
ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗಳು ನಡೆದಿದ್ದವು. ಇದನ್ನು ಗಮನಿಸಿದ ಪೊಲೀಸರು ಈ ವಿಚಾರ ಕೋಮು ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಪ್ರಕರಣ ದಾಖಲಿಸಿಕೊಂಡು ಬೇಕರಿ ಮಾಲೀಕನನ್ನು ಬಂಧಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post