ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಯಲ್ಲಿ #LoksabhaElection2024 ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಸ್ಫರ್ಧೆ ಮಾಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರು ಈಗ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #BSYediyurappa ಕುಟುಂಬದ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #BYRaghavendra ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ.

Also read: ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ಇದೇ ವೇಳೆ ನನ್ನನ್ನು ಬಿಜೆಪಿಯಿಂದ ತಾತ್ಕಾಲಿಕವಾಗಿ ಹೊರ ಹಾಕಿದ್ದಾರೆ. ಈ ಹಿಂದೆ ಜಗದೀಶ್ ಶೆಟ್ಟರ್ ಅವರನ್ನು ಆರು ವರ್ಷ ಹೊರ ಹಾಕಿದ್ದರು. ಯಡಿಯೂರಪ್ಪ ಹೋಗಿ ಕಾಲು ಹಿಡಿದು ಮತ್ತೆ ಕರೆತಂದರು. ನಾನು ಈ ಅಮಾನತನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನಾನು ಚುನಾವಣೆ ಗೆಲ್ಲುತ್ತೇನೆ, ಮೋದಿ ಪರ ಕೈ ಎತ್ತುತ್ತೇನೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post