No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ದುರ್ಬಲವಾಯಿತು ಮೋದಿ ಅಲೆ… ಮೇಲೆದ್ದಿದೆ ತೃತೀಯ ರಂಗದ ತಲೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2021
in Special Articles
0
ದುರ್ಬಲವಾಯಿತು ಮೋದಿ ಅಲೆ… ಮೇಲೆದ್ದಿದೆ ತೃತೀಯ ರಂಗದ ತಲೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಪ್ರಧಾನಿ ನರೇಂದ್ರಮೋದಿ ಅವರ ಅಲೆ ದುರ್ಬಲವಾಗಿದೆ ಎಂಬುದನ್ನು ಎತ್ತಿ ತೋರಿಸಿದೆಯಷ್ಟೇ ಅಲ್ಲದೆ ರಾಷ್ಟ್ರ ರಾಜಕಾರಣದಲ್ಲಿ ತೃತೀಯ ಶಕ್ತಿಗಳು ಪುನ: ಮೇಲೆದ್ದು ನಿಲ್ಲಲಿವೆ ಎಂಬ ಖಚಿತ ಸೂಚನೆ ನೀಡಿದೆ.

ಅದೇ ರೀತಿ ಉಪಚುನಾವಣೆಗಳಲ್ಲಿ ಬಿಜೆಪಿ ಎರಡು ಕಡೆ ಗೆದ್ದರೂ ಜನಬೆಂಬಲ ಕ್ಷೀಣಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಖುರ್ಚಿ ಮೆಲ್ಲಗೆ ಅಲುಗಾಡತೊಡಗಿದೆ.

ಅಂದ ಹಾಗೆ ಐದು ರಾಜ್ಯಗಳಿಗೆ ಚುನಾವಣೆ ನಡೆದರೂ ಅಂತಿಮವಾಗಿ ದೇಶದ ಗಮನ ಇದ್ದುದು ಪಶ್ಚಿಮ ಬಂಗಾಳ ಹಾಗೂ ತಮಿಳ್ನಾಡು ವಿಧಾನಸಭಾ ಚುನಾವಣೆಗಳ ಮೇಲೆ ಎಂಬುದು ನಿಸ್ಸಂಶಯ.

ಆದರೆ ಅಲ್ಲಿ ಅನುಕ್ರಮವಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಸ್ಪಾಲಿನ್ ನೇತೃತ್ವದ ಡಿಎಂಕೆ ಗೆಲುವು ಗಳಿಸಿ ಅಧಿಕಾರ ಹಿಡಿದಿವೆ.ಈ ಮಧ್ಯೆ ಕೇರಳದಲ್ಲಿ ಬಿಜೆಪಿ ತಲೆ ಎತ್ತಲು ಸಾಧ್ಯವೇ ಆಗಿಲ್ಲ.ಹೀಗಾಗಿ ಏಳು ವರ್ಷಗಳ ನಂತರ ಇದೇ ಮೊದಲ ಬಾರಿ ಬಿಜೆಪಿ ಸಂಕಷ್ಟದ ದಿನಗಳತ್ತ ಮುಖ ಮಾಡಿದಂತಾಗಿದೆ.

ಅಂದ ಹಾಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಪೂರ್ವ ಗೆಲುವು ಗಳಿಸಿದ್ದೇನೋ ನಿಜ.ಆದರೆ ಅದರ ಗೆಲುವಿಗೆ ಸಹಕಾರಿಯಾದ ರಾಜ್ಯಗಳಲ್ಲಿ ಮುಂದಿನ ಚುನಾವಣೆ ವೇಳೆಗೆ ಪಕ್ಷದ ಶಕ್ತಿ ಕುಸಿದಿರುತ್ತದೆ ಎಂಬುದು ಕಮಲ ಪಾಳೆಯದ ವರಿಷ್ಟರಿಗೆ ಗೊತ್ತಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಲ್ಲಿಯನ್ನು ವಶಪಡಿಸಿಕೊಳ್ಳಲು ಕಾರಣವಾದ ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕದಂತಹ ರಾಜ್ಯಗಳು ಮುಂದಿನ ಚುನಾವಣೆಯಲ್ಲಿ ದೊಡ್ಡ ಮಟ್ಟದ ಲಾಭ ತರುವುದಿಲ್ಲ ಎಂಬುದು ಅವರ ಲೆಕ್ಕಾಚಾರ.

ಉತ್ತರ ಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲಿ ಗೆದ್ದ ಸೀಟುಗಳ ಸಂಖ್ಯೆ ಮುಂದಿನ ಚುನಾವಣೆಯಲ್ಲಿ ಕಡಿಮೆಯಾಗಲಿವೆ.ಹೀಗಾಗಿ ಆಗುವ ಕೊರತೆಯನ್ನು ನೀಗಿಕೊಳ್ಳಲು ಪಶ್ಚಿಮ ಬಂಗಾಳ,ತಮಿಳ್ನಾಡಿನಂತಹ ರಾಜ್ಯಗಳಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂಬುದು ಅವರ ಇರಾದೆ ಆಗಿತ್ತು.

ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭಾ ಚುನಾವಣೆಯ ವೇಳೆಗೆ ಮಮತಾ ಬ್ಯಾನರ್ಜಿ ಶಕ್ತಿಯನ್ನು ಕುಗ್ಗಿಸಲು ಕಮ್ಯೂನಿಸ್ಟರು ಪರೋಕ್ಷವಾಗಿ ಬಿಜೆಪಿಯ ಜತೆ ಕೈ ಜೋಡಿಸಿದ್ದರ ಪರಿಣಾಮವಾಗಿ ಕಮಲ ಪಾಳೆಯ ಅಲ್ಲಿ ಝಗಮಗಿಸಿತ್ತು.

ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ನಡೆದ ಕಮ್ಯೂನಿಸ್ಟರ ವಲಸೆ ಈ ಬಾರಿಯೂ ತಮಗೆ ಶಕ್ತಿ ತುಂಬಲಿದೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿತ್ತು.ಆದರೆ ಪಶ್ಚಿಮ ಬಂಗಾಳದ ಮತದಾರರು. ನಿರ್ಣಾಯಕವಾಗಿ ಆ ಪಕ್ಷದ ಪಕ್ಕೆಲುಬು ಅದುರಿ ಹೋಗುವಂತೆ ಹೊಡೆತ ನೀಡಿದ್ದಾರಲ್ಲದೆ ಕಮ್ಯೂನಿಸ್ಟರ ಬಲಿದಾನ ವ್ಯರ್ಥವಾಗುವಂತೆ ಮಾಡಿದ್ದಾರೆ.

ಈ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಅನುಸರಿಸಿದ ತಂತ್ರದಿಂದ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ:ಇಲ್ಲಿ ಗೆದ್ದು ದಿಲ್ಲಿಗೆ ಲಗ್ಗೆ ಇಡುತ್ತೇನೆ.ಪಶ್ಚಿಮ ಬಂಗಾಳದ ಆಡಳಿತವನ್ನು ಹೊರಗಿನವರು ನಡೆಸಲು ಬಿಡುವುದಿಲ್ಲ ಎಂದು ಅಬ್ಬರಿಸಿದ್ದರು.

ಈಗ ಅವರ ಅಬ್ಬರಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆಯಲ್ಲದೆ ಏಕಕಾಲಕ್ಕೆ ಹಿಂದೆ ತಮ್ಮ ಗೆಲುವಿಗೆ ಪೂರಕವಾಗಿದ್ದ ರಾಜ್ಯಗಳಲ್ಲಿ ಕುಸಿಯುತ್ತಿರುವ ಬಿಜೆಪಿ ಅಲೆ ಮತ್ತು ಹೊಸ ಚುನಾವಣೆಗಳಲ್ಲಿ ಅನುಭವಿಸಿದ ಸೋಲು ಮೊದಲ ಬಾರಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕಂಗಾಲಾಗುವಂತೆ ಮಾಡಿದೆ.

ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರದಲ್ಲಿರಲಿಲ್ಲ ಎಂಬುದು ನಿಜ.ಆದರೆ ಜಯಲಲಿತಾ ಸಾವಿನ ನಂತರ ಅಲ್ಲಿ ಅಧಿಕಾರ ನಡೆಸುತ್ತಿದ್ದ ಎಐಎಡಿಎಂಕೆ ಪಕ್ಷವನ್ನು ಬಿಜೆಪಿ ವರಿಷ್ಟರನ್ನು ತಮ್ಮ ಮುಷ್ಟಿಯಲ್ಲಿ ಹಿಡಿದುಕೊಂಡಿದ್ದರು ಎಂಬುದು ನಿರ್ವಿವಾದ.

ಅಲ್ಲಿನ ಮುಖ್ಯಮಂತ್ರಿ ಯಳಪ್ಪಾಡಿ ಪಳನಿಸ್ವಾಮಿ ಅವರು ದಿಲ್ಲಿಗೆ ಹೋದರೆ ಪ್ರಧಾನಿಯ ಕಾಲಿಗೆ ಬಿದ್ದು ಬರುತ್ತಾರೆ.ಇದಕ್ಕೆ ಅವರು ಮಾಡಿಕೊಂಡಿರುವು ಹಗರಣ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಗಮನಿಸಿದರೆ ತಮಿಳ್ನಾಡಿನ ರಾಜಕಾರಣದ ಮೇಲೆ ಬಿಜೆಪಿ ಯಾವ ರೀತಿಯ ಪ್ರಭಾವ ಬೀರಲು ಹೊರಟಿತ್ತು ಎಂಬುದು ಸ್ಪಷ್ಟವಾಗುತ್ತದೆ.

ಆದರೆ ಅಲ್ಲೀಗ ಕರುಣಾನಿಧಿ ಪುತ್ರ ಸ್ಟಾಲಿನ್ ನೇತೃತ್ವದ ಡಿಎಂಕೆ ಜಯಭೇರಿ ಬಾರಿಸಿದೆ.ಅಂದ ಹಾಗೆ ದೇಶದಲ್ಲಿ ತೃತೀಯ ಶಕ್ತಿ ಅಧಿಕಾರ ಹಿಡಿಯುವುದರ ಹಿಂದೆ ಬಹುಮುಖ್ಯ ಪಾತ್ರ ವಹಿಸಿದ್ದ ಶಕ್ತಿಗಳಲ್ಲಿ ಡಿಎಂಕೆ ಕೂಡಾ ಒಂದು ಎಂಬುದನ್ನು ಮರೆಯಬಾರದು. ಹೀಗೆ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡುಗಳಲ್ಲಿ ಟಿಎಂಸಿ ಹಾಗೂ ಡಿಎಂಕೆ ಗಳಿಸಿದ ಗೆಲುವು ದೇಶದ ಬಹುತೇಕ ರಾಜ್ಯಗಳಲ್ಲಿ ನೆಲೆಸಿರುವ ಪರಿಸ್ಥಿತಿಗೆ ಉತ್ತೇಜನ ನೀಡುವಂತಿದೆ.

ಉದಾಹರಣೆಗೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ, ಕರ್ನಾಟಕದಂತಹ ರಾಜ್ಯಗಳನ್ನೇ ತೆಗೆದುಕೊಳ್ಳಿ.ಈ ಪೈಕಿ ಆಂಧ್ರಪ್ರದೇಶ ತೃತೀಯ ಶಕ್ತಿಗೆ ಟಾನಿಕ್ ನೀಡಿದಾಗಲೆಲ್ಲ ತನ್ನ ರಾಜ್ಯಕ್ಕೆ ಬಂಪರ್ ಯೋಜನೆಗಳನ್ನು ಪಡೆದುಕೊಂಡಿದೆ.ಮತ್ತು ಕೇಂದ್ರದ ಅಧಿಕಾರದಲ್ಲಿ ಪಾಲು ಪಡೆದಿದೆ.

ಆದರೆ ಆಂಧ್ರಪ್ರದೇಶವೇ ಇರಲಿ,ತೆಲಂಗಾಣವೇ ಇರಲಿ ಅವು ಮೋದಿ ಯುಗದಲ್ಲಿ ಸಂಪೂರ್ಣ ಬಳಲಿ ಹೋಗಿವೆ.ಅವಕ್ಕೀಗ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಮೋದಿ ಯುಗದಲ್ಲಿ ಸಾಧ್ಯವಾಗುತ್ತಿಲ್ಲ.ಇದೇ ಪರಿಸ್ಥಿತಿ ಒರಿಸ್ಸಾ,ತಮಿಳ್ನಾಡು,ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲೂ ಇದೆ.

ನರೇಂದ್ರಮೋದಿ ಕಾಲದಲ್ಲಿ ಈ ರಾಜ್ಯಗಳು ಸಂಪೂರ್ಣ ಶಕ್ತಿ ಕಳೆದುಕೊಂಡಿವೆಯಷ್ಟೇ ಅಲ್ಲದೆ ತಮ್ಮ ರಾಜ್ಯಗಳ ಹಿತ ಕಾಪಾಡಿಕೊಳ್ಳುವ ವಿಷಯದಲ್ಲಿ ಮೋದಿ ಬಳಗದ ವಿರುದ್ಧ ನಿಲ್ಲಲಾಗದ ಸ್ಥಿತಿಯಲ್ಲಿದ್ದವು.ಜಿ.ಎಸ್.ಟಿ ತೆರಿಗೆಯಲ್ಲೂ ತಮ್ಮ ಪಾಲಿನ ಹಣ ಕೊಡದ ಮೋದಿ ಸರ್ಕಾರದ ವಿರುದ್ಧ ಈ ಎಲ್ಲ ರಾಜ್ಯಗಳೂ ಕಡು ಕೋಪ ಹೊಂದಿದ್ದವು ಎಂಬುದೂ ನಿಜ.

ಇನ್ನು ಕೊರೋನಾ ಕಾಲಘಟ್ಟವನ್ನು ನಿಭಾಯಿಸಲು ನರೇಂದ್ರಮೋದಿ ಸರ್ಕಾರ ವಿಫಲರಾಗಿದ್ದು ಕೂಡಾ ಬಹುತೇಕ ರಾಜ್ಯಗಳಿಗೆ ಆಕ್ರೋಶ ತಂದಿರುವುದು ಸ್ಪಷ್ಟ. ಹೀಗಾಗಿ ಈ ಎಲ್ಲ ರಾಜ್ಯಗಳು ಕೇಂದ್ರದಲ್ಲಿ ಮರಳಿ ತೃತೀಯ ಶಕ್ತಿಗಳ ಯುಗ ಆರಂಭವಾಗಲಿ ಎಂದು ಬಯಸುತ್ತಿವೆ.ತೃತೀಯ ರಂಗ ಎಂದರೆ ಸ್ಥೂಲ ಅರ್ಥದಲ್ಲಿ ಯುಪಿಎ ರೂಪವನ್ನೂ ಪಡೆಯಬಹುದು.ಆದರೆ ಯುಪಿಎ ರೂಪ ಕಾಣಿಸಿಕೊಳ್ಳಲೂ ತೃತೀಯ ಶಕ್ತಿಗಳೇ ಮುಂದೆ ನಿಲ್ಲಬೇಕು.

ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಿತು.ಈ ಪೈಕಿ ಒಂದು ಲೋಕಸಭೆ ಮತ್ತು ಒಂದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಗಳಿಸಿದರೂ, ಬೆಳಗಾವಿಯ ಗೆಲುವು ಬಿಜೆಪಿಗೆ ನಿರಾಸೆ ತಂದಿರುವುದು ನಿಜ.
ಯಾಕೆಂದರೆ ಈ ಹಿಂದೆ ಸಂಸದರಾಗಿದ್ದ ಸುರೇಶ್ ಅಂಗಡಿ ಈ ಕ್ಷೇತ್ರದಲ್ಲಿ ಸುಮಾರು ನಾಲ್ಕು ಲಕ್ಷ ಮತಗಳ ಲೀಡ್ ಪಡೆದು ಗೆಲುವು ಗಳಿಸಿದ್ದರು.ಆದರೆ ಈಗ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯ ಮುಂದೆ ಬಿಜೆಪಿ ಕ್ಯಾಂಡಿಡೇಟ್ ಬಳಲಿ ಹೋಗಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಜೆಡಿಎಸ್ ನೀಡಿದ ಪರೋಕ್ಷ ಸಹಕಾರ ಬಿಜೆಪಿ ತಲೆ ಮೇಲೆತ್ತುವಂತೆ ಮಾಡಿದ್ದರೆ,ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿನ ಸೋಲು ಸ್ವತ: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಕಂಗೆಡಿಸಿದೆ. ಯಾಕೆಂದರೆ ಅಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದವರು ಪ್ರತಾಪ್ ಗೌಡ ಪಾಟೀಲ್.ಅವರು ಆಪರೇಷನ್ ಕಮಲ ಕಾರ್ಯಾಚರಣೆಗೆ ಬಲಿಯಾಗಿ ಬಿಜೆಪಿ ಸೇರಿದವರು.ಆದರೆ ಬಿಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಅವರು ಗೆಲುವು ಗಳಿಸಿಲ್ಲ.

ಇತ್ತೀಚೆಗಷ್ಟೇ ರಾಜ್ಯದ ಹತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು.ಅದರ ಬೆನ್ನಲ್ಲಿಯೇ ಈ ಫಲಿತಾಂಶಗಳು ಬಿಜೆಪಿ ಪಾಳೆಯದ ಮೇಲೆ ನಿರಾಸೆಯ ಕಾರ್ಮೋಡ ಕವಿಯುವಂತೆ ಮಾಡಿದೆ. ಅಷ್ಟೇ ಅಲ್ಲ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಖುರ್ಚಿ ನಡುಗುತ್ತಿದೆ ಎಂಬುದನ್ನೂ ಸ್ಪಷ್ಟ ಪಡಿಸಿದೆ.

ಒಟ್ಟಿನಲ್ಲಿ ಇಲ್ಲಿ ಯಡಿಯೂರಪ್ಪ ಶಕ್ತಿ ಕುಂದಿದ್ದರೆ, ದೇಶದಲ್ಲಿ ಮತ್ತೊಮ್ಮೆ ಮಮತಾ ಬ್ಯಾನರ್ಜಿ,ಸ್ಟಾಲಿನ್,ಜಗನ್ ಮೋಹನ್ ರೆಡ್ಡಿ,ಚಂದ್ರಶೇಖರರಾವ್,ನವೀನ್ ಪಾಟ್ನಾಯಕ್,ಶರದ್ ಪವಾರ್,ದೇವೇಗೌಡರಂತವರೆಲ್ಲ ಸೇರಿ ತೃತೀಯ ಶಕ್ತಿಯನ್ನು ಮೇಲಕ್ಕೆತ್ತಲು ಬಯಸುವುದು,ಆ ಮೂಲಕ ಕಾಂಗ್ರೆಸ್ ಒಳಗೊಂಡ ಯುಪಿಎ ಮೈತ್ರಿ ಕೂಟ ತಲೆ ಎತ್ತುವ ಸಾಧ್ಯತೆಗಳು ನಿಚ್ಚಳವಾಗಿ ಕಾಣಿಸತೊಡಗಿವೆ.
ಇಂತಹ ಪರಿಸ್ಥಿತಿ ಉದ್ಭವವಾಗುವುದಿಲ್ಲವೇನೋ?ಎಂದು ರಾಜಕೀಯ ವಲಯಗಳು ಭಾವಿಸಿದ್ದವು.ಆದರೆ ಇತಿಹಾಸದ ಚಕ್ರ ತಿರುಗುತ್ತಲೇ ಇರುತ್ತದೆ ಎಂಬುದನ್ನು ಚುನಾವಣೆಯ ಫಲಿತಾಂಶಗಳು ಸಾಬೀತುಪಡಿಸಿವೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMamatha BanarjeeMP ElectionNewsinKannadaNewsKannadaPrime Minister Narendra ModiR T Vittala MurthyThamil NaduWest Bengalಪಶ್ಚಿಮ ಬಂಗಾಳಪ್ರಧಾನಿ ನರೇಂದ್ರಮೋದಿಮಮತಾ ಬ್ಯಾನರ್ಜಿಲೋಕಸಭಾ ಚುನಾವಣೆ
Share197Tweet123Send
Previous Post

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

Next Post

ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL