ಬೆಂಗಳೂರು: ದಶಕಗಳ ಕಾಲ ದೇಶಕ್ಕೆ ಕಳಂಕಪ್ರಾಯವಾಗಿದ್ದ ಸಂವಿಧಾನದ 370 ಹಾಗೂ 35ಎ ವಿಧಿಯನ್ನು ರದ್ದು ಮಾಡಿರುವ ಮೋದಿ ಸರ್ಕಾರದ ನಿರ್ಧಾರಕ್ಕೆ ನಟ ಜಗ್ಗೇಶ್ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಕರ್ಣಾನಂದವಾಯಿತು ಇಂದಿನ ನನ್ನ ಹೆಮ್ಮೆಯ ಭಾಜಪ ಪಕ್ಷದ ಐತಿಹಾಸಿಕ ನಿರ್ಣಯ. ಭಾರತೀಯರ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
1947 ಅಲ್ಲಾ 2019 ಭಾರತಕ್ಕೆ ನಿಜವಾದ ಸ್ವತಂತ್ರ ಸಿಕ್ಕದಿನ. ಒಕ್ಕೂರಲಿನ ಸ್ವಾಭಿಮಾನದ ಘೋಷ ಮೊಳಗಲಿ ಎಂದು ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯವನ್ನು ಸ್ವಾಗತಿಸಿದ್ದಾರೆ.
SWR Intensifies Food Safety Checks Across Karnataka Railway Stations
Kalpa Media House | Hubballi | In response to the special food safety inspection drive conducted at railway stations across...
Read moreDetails






