No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ. ಮೈತ್ರೇಯಿ ಆದಿತ್ಯಪ್ರಸಾದ್

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2026
in ಡಾ. ಮೈತ್ರೇಯಿ ಆದಿತ್ಯಪ್ರಸಾದ್
0
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಈ ಬಾರಿಯ ಚಳಿ ಸ್ವಲ್ಪ ಹೆಚ್ಚಾಗಿದ್ದಿದರಿಂದ ಮೊಗ್ಗುಗಳು ಅರಳುವುದು ತಡವಾಗುತ್ತಿತ್ತು. ಈಗ ಬೇಸಿಗೆಯ ಆರಂಭವಾಗಿರುವುದರಿಂದ ಮತ್ತೆ ಮೊಗ್ಗು ಅರಳಲಾರಂಭಿಸಿದೆ. ಹಾಗೆಯೇ ನನ್ನ ಲೇಖನಕ್ಕೂ ಬಂದ ಚಳಿಗಾಲ ಕಳೆದು ಮತ್ತೆ ಮೊಗ್ಗುಗಳು ಅರಳಲಾರಾಂಭಿಸಿದೆ. ಈ ಬೇಸಿಗೆಯಲ್ಲೇ ಇವರ ಪರಿಚಯ ಯಾಕೆಂದರೆ ಬಿಸಿಲ ದಾಹ ಇಂಗುವುದು ನೀರಿನ ಸೇವನೆಯಿಂದ ಮಾತ್ರ. ಯಾವುದೇ ರಾಸಾಯನಿಕಗಳನ್ನು ಬಳಸದ ನೀರನ್ನು ನಮಗೆ ನೀಡುತ್ತಿರುವ ಇವರು ಎಲೆ ಮರೆಯ ಕಾಯಿಯಂತೆ ಇರುವವರು. ಯಾವುದೇ ಪ್ರಚಾರ ಹಾಗೂ ಪ್ರಶಂಸೆಗಳ ಮೊರೆ ಹೋಗದೆ ತನ್ನ ಕಾಯಕ ಭಗವಂತನ ಸೇವೆ ಎಂಬಂತೆ ಮಾಡುತ್ತಾ ಬಂದಿರುವ ಶ್ರೀ ಸೀತಾರಾಮ ಎನ್.ಎಸ್. ಇವರು. ಸರಳ ಹಾಗೂ ಸಜ್ಜನಿಕೆಯನ್ನೇ ತನ್ನ ಜೀವನಶೈಲಿಯಾಗಿಸಿ ಪರೋಪಕಾರವೇ ತನ್ನ ಜೀವನ ಧ್ಯೇಯವೆಂದು ಬದುಕುತ್ತಿರುವವರು.

ನಮಗೆಲ್ಲ ಪ್ರೀತಿಯಿಂದ ಸೀತಾರಾಮಣ್ಣ ಆಗಿರುವ ಅವರು ಮೂಲತಃ ಸಾಗರ #Sagara ಸಮೀಪದ ನೀಚಡಿಯವರು. ಶ್ರೀ ಗೌರಿಸುಬ್ಬಯ್ಯ ಹಾಗೂ ಶ್ರೀಮತಿ ನಾಗವೇಣಿ ದಂಪತಿಗಳ ಐದು ಮಕ್ಕಳಲ್ಲಿ ಎರಡನೆಯವರು. ಇವರನ್ನು ತಂದೆ ತಾಯಿಯರು ತುಂಬಾ ಕಷ್ಟದಲ್ಲಿಯೇ ಬೆಳೆಸಿರುವ ಕಾರಣಕ್ಕೋ ಏನೋ ಜೀವನದಲ್ಲಿ ಯಾರಾದರೂ ಕಷ್ಟ ಅಂತ ಬಂದರೆ ಸಹಾಯ ಮಾಡುವ ಮನೋಭಾವ ತುಸು ಹೆಚ್ಚೇ ಇದೆ ಎನ್ನಬಹುದು. ತಾನು ಬೆಳೆದು ಬಂದ ಕಷ್ಟದ ಅರಿವಿರುವುದಕ್ಕೆ ಇತರರನ್ನು ಕಂಡಾಗ ಗೌರವ.ಸಜ್ಜನಿಕೆಯ ಸ್ವಭಾವದವರಾದ ಇವರು ಸಂಘಜೀವಿ. ಜೀವನ ನಿರ್ವಹಣೆಗಾಗಿ ಉಷಾ ಗೌರಿ ವಾಟರ್ ಸಪ್ಲೈಯರ್ ಎಂಬ ಉದ್ಯೋಗ ಮಾಡುತ್ತಿದ್ದಾರೆ. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿಯೂ #RSS ತಮ್ಮ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಿದವರಾಗಿದ್ದಾರೆ. ಯೋಗದಲ್ಲಿ ಸಾಧನೆ ಮಾಡಿ, ತಮ್ಮ ಮನೆಯ ಮೇಲೆಯೇ ಯೋಗ ಕೇಂದ್ರವನ್ನು ಸ್ಥಾಪಿಸಿ ಅನೇಕರಿಗೆ ಉಚಿತವಾಗಿ ಯೋಗವನ್ನು ಕಲಿಸಿಕೊಡುತ್ತಾ ಬಂದಿದ್ದಾರೆ. ಮುದ್ರೆಗಳ ಕುರಿತಾಗಿ ವಿಶೇಷವಾದ ಅಧ್ಯಯನ ಮಾಡಿ ಇತರರಿಗೂ ಸಹ ಅದನ್ನು ಕಲಿಸಿಕೊಡುತ್ತಿದ್ದಾರೆ. ಯೋಗದ ಮೂಲಕ ಆರೋಗ್ಯ ನೀಡುವುದು ಒಂದೆಡೆಯಾದರೆ, ನಂಜಿಗೆ, ಕೆಮ್ಮಿಗೆ ಇತ್ಯಾದಿಗಳಿಗೆ ಗಿಡಮೂಲಿಕೆಗಳಿಂದ ಸ್ವತಃ ತಾವೇ ಔಷಧಿ ತಯಾರಿಸಿ ಅಗತ್ಯವಿದ್ದವರಿಗೆ ನೀಡುವ ನಾಟಿ ವೈದ್ಯರೂ ಸಹ ಆಗಿದ್ದಾರೆ.
ಇವರಿಗೆ ಬರದ ವಿದ್ಯೆಗಳಿಲ್ಲ ಒಳ್ಳೆಯ ಛಾಯಾಚಿತ್ರಗಾರರು, ವಿಡಿಯೋಗ್ರಫಿ ಕೂಡ ಚೆನ್ನಾಗಿ ಮಾಡ್ತಾ ಇದ್ರು.ಈ ಮೊದಲು ತೀರ್ಥಹಳ್ಳಿಯಲ್ಲಿ ಜೀವನ ನಿರ್ವಹಣೆಗಾಗಿ ಒಂದು ಸ್ಟುಡಿಯೋ ಇಟ್ಟುಕೊಂಡಿದ್ದ ಸೀತಾರಾಮ್ ಅವರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆ ಊರನ್ನು ತೊರೆದು ಶಿವಮೊಗ್ಗದಲ್ಲಿ #Shivamogga ನೆಲೆ ನಿಂತರು. ದುರ್ಗಿಗುಡಿಯ ಸಮೀಪದಲ್ಲಿ ಉಡುಗೊರೆ, ಸ್ಮರಣಿಕೆ ಇವುಗಳ ಅಂಗಡಿಯೊಂದನ್ನ ತೆರೆದರು. ಅವರಿಗೆ ಒಬ್ಬ ಮಗಳು ಹಾಗೂ ಒಬ್ಬ ಮಗ. ಮಗನನ್ನು ಸೈನಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಸಿ ಈಗ ಅವನು ಉನ್ನತ ಅಧ್ಯಯನ ಮಾಡಿ ದುಬೈನಲ್ಲಿ ನೆಲೆಸಿದ್ದಾನೆ. ತಮ್ಮ ಮಗಳಾದ ಉಷಾ ಗೌರಿಯನ್ನು ವೈದ್ಯಳನ್ನಾಗಿ ಮಾಡುವ ಕನಸಿಟ್ಟು ಓದಿಸುತ್ತಿದ್ದರು. ಆಗ ಅಪಘಾತವೊಂದರಲ್ಲಿ ಆಕೆಯನ್ನು ಕಳೆದುಕೊಳ್ಳ ಬೇಕಾಯಿತು. ಸತ್ತವನಿಂದ ಜೀವಿಗಳಿಗೆ ಏನು ಉಪಯೋಗ?” ಎಂದು 180 ವರ್ಷಗಳ ಹಿಂದೆ ಇಂಗ್ಲಿಷ್ ತತ್ವಜ್ಞ ಜೆರೆಮಿ ಬೆಂಥಮ್ ಕೇಳಿದ್ದ ಪ್ರಶ್ನೆ, ಇಂದಿನ ಅಂಗಾಂಗ ದಾನ ಪದ್ಧತಿಯಲ್ಲಿ ಅದ್ಭುತ ಅರ್ಥ ಪಡೆದುಕೊಂಡಿದೆ.

Also Read: ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

‘ಕ್ಯಾಡೇವರ್ ಟ್ರಾನ್ಸ್‌ಪ್ಲಾಂಟ್’ #KidneyTransplant ಅಂದರೆ, ಮೆದುಳು ಮರಣ ಹೊಂದಿದ ವ್ಯಕ್ತಿಯ ಅಂಗಾಂಗಗಳನ್ನು ಜೀವಂತ ರೋಗಿಗಳಿಗೆ ಪ್ರತಿರೋಪಣೆ ಮಾಡುವ ವಿಧಾನವು ಇಂದು ಅನೇಕ ಜೀವಗಳನ್ನು ಉಳಿಸುತ್ತಿದೆ. ಆ ರೀತಿಯಲ್ಲಿ ಉಷಾ ಸದಾ ಸಕಾರಾತ್ಮಕ ಚಿಂತನೆ ಹೊಂದಿದವಳಾಗಿದ್ಧಳು. ಅವಳ ಮೆದುಳು ನಿಷ್ಕ್ರಿವಾದ ಸಂದರ್ಭದಲ್ಲೂ ಇತರರಿಗೆ ಸಹಾಯ ಮಾಡಬೇಕೆಂದು ಅವಳು ಬಯಸುತ್ತಿರುವಂತೆ ತಂದೆಗೆ ಭಾಸವಾಗಿ ಆಕೆಯ ಕಿಡ್ನಿಗಳನ್ನು ದಾನ ಮಾಡಲು ಒಪ್ಪಿಗೆ ನೀಡಿ ದಾಖಲೆಯನ್ನೇ ಬರೆದವರು ಸೀತಾರಾಮಣ್ಣ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಿಡ್ನಿಗಳನ್ನು ತೆಗೆದು ಎರಡನ್ನೂ ಸಹ ಅತೀ ಅಗತ್ಯವಿರುವವರಿಗೆ ದಾನ ಮಾಡಲಾಯಿತು. ಸಾವಿನಲ್ಲೂ ಅವಳ ಅಂಗಾಂಗಗಳಲ್ಲಿ ಯಾವುದು ಬೇರೆಯವರಿಗೆ ಜೀವದಾನ ಮಾಡಲು ಬರುತ್ತದೋ ಎಲ್ಲವನ್ನು ದಾನ ಮಾಡಿ ಕರ್ನಾಟಕದ ಮೊಟ್ಟ ಮೊದಲ ಕೆಡವರ್ ಕಿಡ್ನಿ ದಾನಿ ಎಂಬ ಹೆಸರಿನಿಂದ ಆಕೆಯನ್ನು ಅಜರಾಮರಳಾಗಿಸಿದರು.ಈ ಮಹಾನ್ ಕಾರ್ಯದ ಗೌರವಕ್ಕಾಗಿ #Manipal ಮಣಿಪಾಲ್ ಆಸ್ಪತ್ರೆಯ ಡಾ. ಸುದರ್ಶನ್ ಬಲ್ಲಾಳ್ ಅವರು ಪ್ರತಿ ತಿಂಗಳೂ “ಉಷಾ ದಿನ” ಎಂದು ಘೋಷಿಸಿ ಆ ದಿನದ ಕಿಡ್ನಿ ಟ್ರಾನ್ಸ್ ಪ್ಲಾಂಟ್ ನ್ನು ಕಡಿಮೆ ವೆಚ್ಚದಲ್ಲಿ ಇಂದಿಗೂ ನಡೆಸಲಾಗುತ್ತಿದೆ. ಅಂದು ಆಕೆಯ ಕಿಡ್ನಿ ದಾನ ಮಾಡಿದುದು ಇಂದು ಅಂಗಾಂಗ ದಾನದ ಗಣನೀಯ ಪ್ರಮಾಣ ಹೆಚ್ಚಿಸಲು ಕಾರಣವಾಯಿತು. ಇಷ್ಟು ಉದಾತ್ತವಾಗಿ ಆಲೋಚಿಸುವ ಹೆತ್ತವರನ್ನು ಪಡೆದ ಆಕೆಯೇ ಧನ್ಯಳು. ಒಂದು ಬಿಡಿಗಾಸೂ ಕೂಡ ಪಡೆಯದೇ ಮಗಳ ಅಂಗಾಂಗಗಳನ್ನು ದಾನ ಮಾಡಿದ್ದರು ಸೀತಾರಾಮಣ್ಣ ದಂಪತಿಗಳು. ಆ ಕಾರಣಕ್ಕಾಗಿ ಕಳೆದ ವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಈ ದಂಪತಿಗಳಿಗೆ ಸನ್ಮಾನವನ್ನೂ ಕೂಡ ಮಾಡಿದರು. ಮಗಳನ್ನು ಕಳೆದುಕೊಂಡ ದುಃಖವನ್ನು ಒಡಲೊಳಗೆ ಇಟ್ಟುಕೊಂಡು ಇತರರೆದುರಿಗೆ ಸಂತಸದಿಂದ ಇರುವ ಮಹನೀಯರು ಸೀತಾರಾಮ ಅವರು. 1998 ರ ಫೆಬ್ರವರಿಯಲ್ಲಿ ಈ ಘಟನೆಗಳು ನಡೆದ ಮೇಲೆ ಅವರು ತಮ್ಮ ಜೀವನವನ್ನು ಅಧ್ಯಾತ್ಮಿಕ ಸಾಧನೆ ಮಾಡುವಲ್ಲಿ ಮುಡಿಪಾಗಿಟ್ಟರು. ರುದ್ರವೇ ಮೊದಲಾದ ಮಂತ್ರಗಳನ್ನು ಕಲಿತು ಎಲ್ಲಿಯೇ ರುದ್ರ ಪಾರಾಯಣ ನಡೆಯಲಿ ಅಲ್ಲಿ ತಮ್ಮದೊಂದು ಸೇವೆ ನೀಡುತ್ತಲೇ ಬಂದಿದ್ದಾರೆ. ಮನೆಯಲ್ಲಿ ಸತ್ಸಂಗ ನಡೆಸುತ್ತಾರೆ. ಶ್ರೀ ಶ್ರೀಧರ ಭಗವಾನರ #SridharaSwamiji ಅಪ್ಪಟ ಭಕ್ತಾರಾದ ಅವರು ಶ್ರೀ ಶ್ರೀಧರ ಸೇವಾ ಸಮಿತಿಯ ಶಿವಮೊಗ್ಗ ಮಂಡಲದ ಅಧ್ಯಕ್ಷರೂ ಆಗಿದ್ದಾರೆ. ಪ್ರತಿನಿತ್ಯ ಬೆಳಗಿನ ಜಾವ ಮೂರುವರೆಗಿನ ಬ್ರಾಹ್ಮೀ ಮುಹೂರ್ತ ದಲ್ಲಿ ಎದ್ದು ನಿತ್ಯ ಅನುಷ್ಠಾನಗಳಲ್ಲಿ ತೊಡಗುತ್ತಾರೆ. ಇವರಿಗೆ ಯೋಗ ಶಿಕ್ಷಣ ಸಂಸ್ಥೆಯೇ ಮೊದಲಾಗಿ ಹಲವೆಡೆ ಸನ್ಮಾನವೂ ಸಹ ಆಗಿರುತ್ತದೆ. ಕಷ್ಟವೆಂದವರಿಗೆ ಸಹಾಯ ಹಸ್ತ ನೀಡುವಲ್ಲಿ ಸಿದ್ಧ ಹಸ್ತರಾದ ಇವರನ್ನು ನೋಡಿದರೆ ನನಗೆ ನೆನಪಾಗುವ ಸುಭಾಷಿತ ಇದು –
ಪರೋಪಕಾರಾಯ ಫಲಂತಿ ವೃಕ್ಷಃ
ಪರೋಪಕಾರಾಯ ವಹಂತಿ ನದ್ಯಃ l
ಪರೋಪಕಾರಾಯ ದುಹಂತಿ ಗಾವಃ
ಪರೋಪಕಾರಾರ್ಥಮಿದಂ ಶರೀರಮ್ ll ಅಂದರೆ ಮರಗಳು ಇತರರಿಗಾಗಿಯೇ ಹಣ್ಣುಗಳನ್ನು ಕೊಡುತ್ತದೆ. ಹಾಗೇ ನದಿಗಳು ಸಹ ಇತರಿರಾಗಿಯೇ ಹರಿಯುತ್ತದೆ, ಹಸು ಹಾಲು ಕೊಡುವುದೂ ಸಹ ಪರರಿಗಾಗಿಯೇ ಹಾಗಾಗಿ ಮನುಷ್ಯನ ಶರೀರವೂ ಸಹ ಇತರರ ಉಪಯೋಗಕ್ಕಾಗಿಯೇ ಎಂಬ ಸುಭಾಷಿತದಂತೆ ಸೀತಾರಾಮಣ್ಣನವರ ಬದುಕು ಅರ್ಥಪೂರ್ಣ.Also Read: ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

ಸದಾ ಕ್ರಿಯಾಶೀಲರಾಗಿರುವ ಇವರೆಲ್ಲ ಕಾರ್ಯಗಳಿಗೆ ಇವರ ಸಹಧರ್ಮಣಿಯಾದ ಶ್ರೀಮತಿ ನೇತ್ರಾವತಿ ಅವರ ಬೆಂಬಲವೂ ಸಾಕಷ್ಟಿದೆ. ಇತ್ತೀಚೆಗಷ್ಟೇ ತಮ್ಮ 80 ಸಂವತ್ಸರಗಳನ್ನು ಸಾರ್ಥಕವಾಗಿ ಪೂರೈಸಿದ ನಮ್ಮೆಲ್ಲರ ಪ್ರೀತಿಯ ಸೀತಾರಾಮಣ್ಣನಿಗೆ ಭಗವಂತ ಇನ್ನಷ್ಟು ಆಯುರಾರೋಗ್ಯವನ್ನು ನೀಡಿ ಕರುಣಿಸಲೆಂದು ಪ್ರಾರ್ಥಿಸುವೆ. ಯಾರಿಗೂ ತೊಂದರೆಯನ್ನು ಕೊಡದೆ ಸ್ವಂತಿಕೆಯಲ್ಲಿಯೇ ಬದುಕನ್ನು ಸಾಧಿಸುವ ಸದಾ ಇತರರ ಒಳಿತನ್ನೇ ಆಶಿಸುವ ನಮ್ಮ ಪ್ರೀತಿಯ ಸೀತಾರಾಮಣ್ಣ ಅನೇಕರಿಗೆ ಪ್ರೇರಣೆಯಾಗಲಿ. ಏಕೆಂದರೆ ಅವರ ಬದುಕು, ಕಷ್ಟಕಾಲದಲ್ಲಿಯೂ ಇತರರಿಗೆ ಸಹಾಯ ಮಾಡುವ ಮನೋಭಾವ, ಎಂತಹ ಸಮಯದಲ್ಲಿ ಆಗಲಿ ಮನಸ್ಸನ್ನು ತಮ್ಮ ಸ್ತಿಮಿತದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವ ರೀತಿ, ಸರಳತೆಯ ಬದುಕು, ಉತ್ತಮನಾಗು ಉಪಕಾರಿಯಾಗೆಂಬ ಭಾವ, ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸಹಾಯ, ಶಾಂತ ಸ್ವರೂಪ ಈ ಎಲ್ಲವೂ ಇಂದಿನ ಪೀಳಿಗೆಗೆ ಬೇಕಾದ ಅತ್ಯುತ್ತಮ ಮಾನವೀಯ ಮೌಲ್ಯಗಳಾಗಿವೆ. ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಇಂಥವರು ನಮ್ಮ ನಡುವೆಯೇ ಇದ್ದಿರುವುದು ವಿಶೇಷ. ಸಹಸ್ರ ಚಂದ್ರನನ್ನು ಕಂಡ ಸಾರ್ಥಕ ಬದುಕು ಇವರದು. ಇವರ ಬದುಕು ಅನೇಕರಿಗೆ ಮಾರ್ಗದರ್ಶಕವೂ ಆದರ್ಶಪ್ರಾಯವೂ ಆಗಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Cadaver transplantKidney TransplantShimogaShivamoggaUsha Dinaಉಷಾ ದಿನಕಿಡ್ನಿ ಟ್ರಾನ್ಸ್ ಪ್ಲಾಂಟ್ಕ್ಯಾಡೇವರ್ ಟ್ರಾನ್ಸ್‌ಪ್ಲಾಂಟ್ತೀರ್ಥಹಳ್ಳಿನಾಟಿ ವೈದ್ಯನೀಚಡಿಮಣಿಪಾಲ್ರಾಷ್ಟ್ರೀಯ ಸ್ವಯಂಸೇವಕ ಸಂಘವಿಶೇಷ ಲೇಖನಶಿವಮೊಗ್ಗಸಾಗರಸೀತಾರಾಮ
Share302Tweet189Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

Next Post

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL