No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಜಾತಶತ್ರು ಎಂಬುದಕ್ಕೆ ಪರ್ಯಾಯ ಅಟಲ್ ಜೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2018
in Special Articles
0
Share on FacebookShare on TwitterShare on WhatsApp

ಹೌದು…! ಅವರು ರಾಷ್ಟ್ರವೇ ಹೆಮ್ಮೆ ಪಡುವಂತಹ ಒಬ್ಬ ಶ್ರೇಷ್ಠ ಪ್ರಧಾನಿಮಂತ್ರಿಯಾಗಿದ್ದವರು. ಮಾತ್ರವಲ್ಲ ಅದ್ಬುತ ಕವಿ ಕೂಡಾ ಹೌದು. ಎಲ್ಲಕ್ಕಿಂತ ಹೆಚ್ಚಾಗಿ ಅವರು ಭಾರತ ದೇಶ ಮಾತ್ರವೇಕೆ, ಪ್ರಪಂಚವೇ ಕಂಡಂತಹ ಶ್ರೇಷ್ಠ ನಾಯಕ ಹಾಗೂ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ಅವರೇ ಮಾಜಿ ಪ್ರಧಾನಮಂತ್ರಿ, ಹಿರಿಯ ಮುತ್ಸದ್ದಿ ಅಟಲ್ ಬಿಹಾರಿ ವಾಜಪೇಯಿ.

ರಾಷ್ಟ್ರ ಕಂಡಂತಹ ಅದ್ಬುತ ಆಡಳಿತಗಾರರಲ್ಲಿ ಅಟಲ್ ಜೀ ಅಗ್ರಗಣ್ಯರು. ದೇಶದ ಹಿತಕ್ಕಾಗಿ ಇವರು ತೆಗೆದುಕೊಂಡ ನಿರ್ಧಾರಗಳು ಹಾಗೂ ಮಾಡಿದ ಕಾರ್ಯಗಳು ಸರ್ವಮಾನ್ಯವಾಗಿದೆ. 2005ರಲ್ಲಿ ರಾಜಕೀಯ ಜೀವನದಿಂದ ನಿವೃತ್ತಿ ಘೋಷಿಸಿಕೊಂಡು ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದ ರೀತಿಯಿಂದಲೇ ವಿರೋಧಿಗಳಿಂದಲೂ ಭಾರತದ ಹಿರಿಯ ಪ್ರಜೆ, ರಾಜಕಾರಣಿಗಳಲ್ಲೇ ಸಭ್ಯ ರಾಜಕಾರಣಿ ಮತ್ತು ಗೌರವಾನ್ವಿತ ಮುತ್ಸದ್ದಿ ಎಂದು ಕರೆಸಿಕೊಂಡ ಭಾರತದ ಏಕೈಕ ರಾಜಕಾರಣಿ ಅಟಲ್ ಜೀ. ಇದರಿಂದ ಭಾರತದಾದ್ಯಂತ ಅಜಾತಶತ್ರು ಎಂದು ಕರೆಯಲ್ಪಟ್ಟಿದ್ದಾರೆ.

ಎ ರೈಟ್ ವ್ಯಾನ್ ಇನ್ ಎ ರಾಂಗ್ ಪಾರ್ಟಿ ಎಂಬ ವಿಶೇಷಣ ವಾಜಪೇಯಿಯವರ ಬಗ್ಗೆ ಗಣ್ಯರು ಆಡಿರುವ ಅಣಿಮುತ್ತುಗಳು. ಇಂತಹ ಅಟಲ್ ಅವರಿಗೆ ಪದ್ಮ ವಿಭೂಷಣ, ಲೋಕಮಾನ್ಯ ತಿಲಕ್ ಪ್ರಶಸ್ತಿ, ಉತ್ತಮ ರಾಜಕೀಯ ಪಟು ಗೌರವ ಹಾಗೂ ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಸೇರಿದಂತೆ ನೂರಾರು ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ. ಅತ್ಯುತ್ತಮ ಆಡಳಿತವನ್ನು ನೀಡಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ತಂದುಕೊಟ್ಟ ಶ್ರೇಷ್ಠ ಆಡಳಿತಗಾರರಾದ ಅಟಲ್ ಬಿಹಾರಿ ವಾಜಪೇಯಿಯವರಿಗೆ ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಭಾರತರತ್ನ ನೀಡಬೇಕು ಎಂದು ಹಲವು ವರ್ಷಗಳಿಂದ ಕೂಗು ಕೇಳಿಬಂದಿರುವುದು ಸೂಕ್ತವಾಗಿತ್ತು.

ಯಾವುದೇ ರೀತಿಯಿಂದ ನೋಡಿದರೂ ಅಟಲ್ಜಿ ಭಾರತರತ್ನ ಪ್ರಶಸ್ತಿಗೆ ಅರ್ಹರು ಎನ್ನುವುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಇರುವಲ್ಲಿಯವರೆಗೂ ಅಟಲ್ ಜೀಗೆ ಭಾರತ ರತ್ನ ಕೊಡುವ ಮನಸ್ಸನ್ನು ಮಾಡಲೇ ಇಲ್ಲ. ಆದರೆ, ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಬಂದ ನಂತರ ಮಹತ್ವದ ನಿರ್ಧಾರ ಕೈಗೊಂಡು, ವಾಜಪೇಯಿ ಅವರಿಗೆ ಭಾರತರತ್ನ ಘೋಷಿಸಿದೆ. ಇದರಂತೆ ಅಂದಿನ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸ್ವತಃ ವಾಜಪೇಯಿ ಅವರ ನಿವಾಸಕ್ಕೆ ತೆರಳಿ 2015ರ ಮಾರ್ಚ್ 27ರಂದು ಭಾರತ ರತ್ನ ಪ್ರದಾನ ಮಾಡಿದರು.

ಬಹುಷಃ ಅಟಲ್ ಅವರಿಗೆ ಭಾರತರತ್ನ ನೀಡಿದ್ದು, ಪ್ರಶಸ್ತಿಯ ಬೆಲೆಯೇ ಹೆಚ್ಚಾಗಿದೆ ಎಂದರೆ ನಿಜಕ್ಕೂ ಅತಿಶಯೋಕ್ತಿಯಲ್ಲ.

ಅಟಲ್ಜಿಯವರ ಐದು ದಶಕಗಳ ಸಾರ್ವಜನಿಕ ಜೀವನದಲ್ಲಿ ಹಲವು ಹಿನ್ನೆಡೆಗಳನ್ನು ಎದುರಿಸಿದರೂ, ದೇಶವಾಸಿಗಳ ಎದುರಲ್ಲಿ ಎಂದೂ ಚಿಕ್ಕವರಾಗಲಿಲ್ಲ. ಇಂದಿಗೂ ಬಿಜೆಪಿಯನ್ನು ಒಪ್ಪದವರು ಅಟಲ್ ಅವರನ್ನು ಸ್ವೀಕರಿಸುತ್ತಾರೆ. ಅಷ್ಟು ಮಾತ್ರವೇಕೆ 2004ರಲ್ಲಿ ವಾಜಪೇಯಿ ಸರ್ಕಾರ ಸೋತಾಗ ನಮಗೂ ಬೇಸರವಾಯಿತು ಎಂದು ಶತ್ರು ರಾಷ್ಟ್ರ ಪಾಕೀಸ್ತಾನದ ವಿದೇಶಾಂಗ ಸಚಿವ ಖುರ್ಷಿದ್ ಕಸೂರಿ ಹೇಳುತ್ತಾರೆಂದರೆ ವಾಜಪೇಯಿಯವರ ವ್ಯಕ್ತಿತ್ವ ಎಂತಹದ್ದಿರಬಹುದು.

Tags: Ajathashatru Atal JiAtal Bihari VajpayeeAtal jiBhatata RatnaFormer Prime Minister of India
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಲ್ಲುಕ್ಕಿ ಮೊದಲ ಶಾಖೆ ಬೆಂಗಳೂರಿನಲ್ಲಿ ಪ್ರಾರಂಭ

Next Post

ಅಪ್ಪ ಹೇಳಿದ ಕಥೆಗಳು-1: ನಾನು ವಾಜಪೇಯಿಯವರ ಅಭಿಮಾನಿ ಹೇಗಾದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪ್ಪ ಹೇಳಿದ ಕಥೆಗಳು-1: ನಾನು ವಾಜಪೇಯಿಯವರ ಅಭಿಮಾನಿ ಹೇಗಾದೆ?

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL