No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರಮ, ಶಿಸ್ತು ಮತ್ತು ಸಾಧನೆಯ ಬಾಲ ಮೂರ್ತಿ ತುಳುನಾಡಿನ ಅತೀಶ್ ಶೆಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2025
in Special Articles
0
ಶ್ರಮ, ಶಿಸ್ತು ಮತ್ತು ಸಾಧನೆಯ ಬಾಲ ಮೂರ್ತಿ ತುಳುನಾಡಿನ ಅತೀಶ್ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ : ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ  |

ಕ್ರೀಡೆ, ನಟನೆ, ನೃತ್ಯ, ಈಜು, ಫುಟ್ಬಾಲ್, ಕಿಕ್ ಬಾಕ್ಸಿಂಗ್, ಕರಾಟೆ, ಚಿತ್ರಕಲೆ… ಹೀಗೆ ಮುಂದುವರೆಯುತ್ತದೆ ತುಳುನಾಡಿನ ಈ ಸಕಲಕಲಾ ವಲ್ಲಭ ಅತೀಶ್ ಎಸ್. ಶೆಟ್ಟಿ ಸಾಧನೆ.

ತುಳುನಾಡಿನ ಮಂಗಳೂರು ಮೂಲದ ಎಂಆರ್’ಪಿಎಲ್ ಉದ್ಯೋಗಿಯಾಗಿರುವ ಸತೀಶ್ ಶೆಟ್ಟಿ, ಉಪನ್ಯಾಸಕಿಯಾಗಿರುವ ಭಾರತಿ ದಂಪತಿ ಪುತ್ರನಾದ ಅತೀಶ್ ಎಸ್. ಶೆಟ್ಟಿ ಸದ್ಯ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಬಿಜೈನಲ್ಲಿ 10ನೇ ತರಗತಿ ಕಲಿಯುತ್ತಿದ್ದಾರೆ.

ಬಾಲ್ಯದಿಂದಲೇ ಚುರುಕುತನದಿಂದ ಕೂಡಿದ ಇವರು, ಕ್ರೀಡೆ, ನಟನ, ನೃತ್ಯ, ಈಜು, ಫುಟ್ಬಾಲ್, ಕಿಕ್ ಬಾಕ್ಸಿಂಗ್, ಕರಾಟೆ ಹಾಗೂ ಚಿತ್ರಕಲೆ ಮುಂತಾದ ಅನೇಕ ಹವ್ಯಾಸಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ತಂದುಕೊಂಡು ಅವರು ಇಂದಿನ ಯುವಜನತೆಗೆ ಪ್ರೇರಣೆಯಾಗಿದ್ದಾರೆ.

2021ರಲ್ಲಿ ಮೈಸೂರಿನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅವರು, ಪುಣೆಯ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್’ನಲ್ಲಿ ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೇರಳ ಶಾಲಾಮಟ್ಟ, ಮಂಗಳೂರು ಜಿಲ್ಲಾ ಮಟ್ಟ, ಬೆಂಗಳೂರು ರಾಷ್ಟ್ರೀಯ ಮಟ್ಟ ಹಾಗೂ ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲೂ ಚಿನ್ನದ ಪದಕ ಜಯಿಸುವ ಮೂಲಕ ತಮ್ಮ ಶಕ್ತಿಯನ್ನು ಸಾಬೀತುಪಡಿಸಿದ್ದಾರೆ. ಜೊತೆಗೆ, ಜಾರ್ಖಂಡ್’ನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಸಹ ಆಯ್ಕೆಯಾಗಿರುವುದು ಇವರ ಇನ್ನೊಂದು ಮಹತ್ವದ ಸಾಧನೆ.

ಅತೀಶ್ ಅವರು ಬಾಲ್ಯದಲ್ಲಿಯೇ ತಮ್ಮ ನಟನಾ ಪ್ರತಿಭೆಯನ್ನು ತೋರಿಸಿದ್ದಾರೆ. K-Star Suvarna ವಾಹಿನಿಯ Junior Drama Funters ಕಾರ್ಯಕ್ರಮದಲ್ಲಿ “Best Performer of the Week” ಪ್ರಶಸ್ತಿಯನ್ನು ಪಡೆದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.

ಕಲರ್ ಸೂಪರ್ ವಾಹಿನಿಯ Mahabharata Reality Show ನಲ್ಲಿ ಅಭಿನಯಿಸಿ ತೀರ್ಪುಗಾರರಾಗಿದ್ದ ಚಿತ್ರ ನಿರ್ದೇಶಕ ಎಸ್. ನಾರಾಯಣ್ ಹಾಗೂ ಶ್ರುತಿ ಅವರ ಪ್ರಶಂಸೆ ಪಡೆದರು. ಕೇವಲ ಐದು ವರ್ಷದ ವಯಸ್ಸಿನಲ್ಲಿ ಮಜಾಭಾರತ ಕಾರ್ಯಕ್ರಮದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದು ಅವರ ನಟನಾ ಜೀವನದ ದೊಡ್ಡ ಸಾಧನೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಎಂಬ ಚಿತ್ರದಲ್ಲಿ ನಟಿಸಿದ್ದು, ಅದರ ಪ್ರಚಾರಕ್ಕಾಗಿ ಅವರಿಗೆ ಪ್ರಸಿದ್ಧ ಮಜಾ ಟಾಕೀಸ್ ಕಾರ್ಯಕ್ರಮಕ್ಕೆ ಪ್ರವೇಶ ದೊರಕಿತು. ಇದುವರೆಗೆ ಅವರು ನಾಲ್ಕು ಕಿರುಚಿತ್ರಗಳಲ್ಲಿ ಹಾಗೂ ಹದಿನೇಳು ತುಳು, ಕನ್ನಡ ಮತ್ತು ಇತರ ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಅತೀಶ್ ಸಾಧನೆಯನ್ನು ಪುರಸ್ಕರಿಸಿ ಅನೇಕ ಗೌರವಗಳು ಅವರನ್ನು ಅರಸಿ ಬಂದಿವೆ. ಕರ್ನಾಟಕ ಪ್ರತಿಭಾ ರತ್ನ, ಕರ್ನಾಟಕ ಕಲಾಶ್ರೀ, ಕಾರಂತರ ಹುಟ್ಟುಹಬ್ಬ ಸಾಧನಶ್ರೀ ಮುಂತಾದ ಪ್ರಮುಖ ಪ್ರಶಸ್ತಿಗಳು ಅವರ ಮುಡಿಗೇರಿವೆ.

ಬೆಂಗಳೂರಿನ ಬಂಟರ ಸಂಘದ ವತಿಯಿಂದ ನೀಡಲಾದ Best Excellence Award ಸಹ ಇವರ ಸಾಧನೆಯ ಮತ್ತೊಂದು ಮುತ್ತಾಗಿದೆ. ಇವುಗಳೊಂದಿಗೆ ಅನೇಕ ಸಾಂಸ್ಕೃತಿಕ ಸಂಸ್ಥೆಗಳು, ಸಂಘಟನೆಗಳು ಹಾಗೂ ಕ್ರೀಡಾ ವೇದಿಕೆಗಳಿಂದ ಅವರು ಹಲವಾರು ಸನ್ಮಾನಗಳನ್ನು ಸ್ವೀಕರಿಸಿದ್ದಾರೆ. ಈ ಸನ್ಮಾನಗಳು ಅವರ ಪರಿಶ್ರಮ, ಪ್ರತಿಭೆ ಹಾಗೂ ಸಮಾಜದಲ್ಲಿ ಮೂಡಿಸಿರುವ ಪ್ರಭಾವಕ್ಕೆ ಸಾಕ್ಷಿಯಾಗಿವೆ. ವಿದ್ಯಾಭ್ಯಾಸದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಸಮನ್ವಯಗೊಳಿಸಿಕೊಂಡು ಸಾಧನೆಗೈದ ಅತೀಶ್ ಎಸ್. ಶೆಟ್ಟಿ ಅವರು ನಮ್ಮ ಸಮಾಜಕ್ಕೆ ಹೆಮ್ಮೆಯ ವ್ಯಕ್ತಿ. ಅವರ ಪರಿಶ್ರಮ, ಶಿಸ್ತು ಹಾಗೂ ಬಹುಮುಖ ಪ್ರತಿಭೆ ಇಂದಿನ ಪೀಳಿಗೆಯವರಿಗೆ ಮಾದರಿಯಾಗಿದೆ.
ಕ್ರೀಡೆಯಲ್ಲಿ ಅತೀಶ್ ಸಾಧನೆಗಳು
1) 2021 ರಲ್ಲಿ ಪುಣೆ ಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ
2) 2023 ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು, ಜಾರ್ಖಂಡ್ ನ ರಾಂಚಿ ಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ
3) 2024 ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್’ನಲ್ಲಿ ಬೆಳ್ಳಿಯ ಪದಕ
4)2025ರಲ್ಲಿ ತಮಿಳ್ ನಾಡಿನ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್’ನಲ್ಲಿ ಒಂದು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ
4) ಬೆಂಗಳೂರು ನಲ್ಲಿ ನಡೆದ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಪದಕ
5) ಮೈಸೂರ್ ದಸರಾ ಕ್ರೀಡಾಕೂಟದಲ್ಲಿ ವುಷು ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ
6) 2019 ರಲ್ಲಿ ಬಾಗಲಕೋಟೆಯಲ್ಲಿ ನಡೆದ ಹಾಗೂ 2020ರಲ್ಲಿ ಮಂಗಳೂರುನಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಚಾಂಪಿಯನ್ ಶಿಪ್’ನಲ್ಲಿ ಭಾಗಿ
7) ಕೇರಳದ ಪಾಲಾಕಾಡ್’ನಲ್ಲಿ ನಡೆದ ಶಾಲಾಮಟ್ಟದ ಕರಾಟೆ ಚಾಂಪಿಯನ್ ಶಿಪ್’ನಲ್ಲಿ ಚಿನ್ನದ ಪದಕ
8) ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಪದಕ
9) ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್’ನಲ್ಲಿ ಚಿನ್ನದ ಪದಕ
10) ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ

ನಟನಾ ಹಾದಿ

  • ಕೆ ಸ್ಟಾರ್ ಚಾನೆಲ್ ನ ಜೂನಿಯರ್ ಡ್ರಾಮ ಫಂಟರ್ಸ್ ನಲ್ಲಿ ಉತ್ತಮ ಅಭಿನಯ ನೀಡಿ Best Performer of the Week ಪ್ರಶಂಸೆ
  • ಕಲರ್ಸ್ ಸೂಪರ್ ಚಾನೆಲ್’ನ ಮಜಭಾರತ ರಿಯಾಲಿಟಿ ಶೋನಲ್ಲಿ ಉತ್ತಮ ಅಭಿನಯ ನೀಡಿ ತೀರ್ಪುಗಾರರಾದ ಎಸ್. ನಾರಾಯಣ್ ಮತ್ತು ಶ್ರುತಿ
  • ಅವರಿಂದ ಉತ್ತಮ ಪ್ರಶಂಸೆ ಪಡೆದು 2ಬಾರಿ ಮಜಭಾರತದ ಕಿರೀಟ ಮುಡಿಲಿಗೆ
  • ಡೈಜಿ ವರ್ಡ್ ಚಾನೆಲ್’ನಲ್ಲಿ ಬಿನ್ನೆರ್ ಬರ್ಪೆರ್ ಕಾರ್ಯಕ್ರಮದಲ್ಲೂ ಅಭಿನಯ

ಕಿರುಚಿತ್ರಗಳು ಹಾದಿ
1) ಗಣೇಶ್ ನಿರ್ದೇಶನದ ಸ್ಫೂರ್ತಿ
2) ಪ್ರತೀಕ್ ಅತ್ತಾವರ, ನಿರ್ದೇಶನದ ಯಥಾ ತಥಾ
3) ಪ್ರದೀಪ್ ಕುಕ್ಕಿಪಾಡಿ ನಿರ್ದೇಶನದ ಆಪರೇಷನ್ ತುಳುನಾಡ್
4) ದೀಕ್ಷಿತ್ ನಿರ್ದೇಶನದ “cup ice cream”
ಸಿನಿಮಾಗಳು ಹಾದಿ

  • ನುಗ್ಗೆಕಾಯಿ
  • ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು
  • ಸೂರಜ್ ಬೋಳಾರ್ ನಿರ್ದೇಶನದ ರಾಹುಕಾಲ ಗುಳಿಗಕಾಲ
  • ಚಂದ್ರಪ್ರಭಾ ನಿರ್ದೇಶನದ ಅಂಗಿಕಮ್
  • ಶೋಭರಾಜ್ ಪಾವೂರು ನಿರ್ದೇಶನದ ಪೆಪೆಪೆರೆ ಪೆರೆರೆರೆ
  • ಸಂತೋಷ್ ಮಾಡ ನಿರ್ದೇಶನದ ಲಕ್ಕಿ ಬಾಬು
  • ಆರ್ಯ ಮೇಡಂ ನಿರ್ದೇಶನದ ನಮ್ದು ಊರು ಕುಡ್ಲ ಸಿನಿಮಾ
  • ಅನೂಪ್ ಭಂಡಾರಿ ನಿರ್ದೇಶನದ ಸುದೀಪ್ ಅಭಿನಯದ ವಿಕ್ರಂತ್ ರೋಣ
  • ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ (ಕನ್ನಡ )
  • ಎಕಂ Web series
  • ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರಾ ಸಿನಿಮಾ
  • ಕಿಶೋರ್ ಮೂಡಬಿದ್ರೆ ನಿರ್ದೇಶನದ ಕೇಕ್ ಸಿನಿಮಾ. ಇದಕ್ಕೆ International film festival ಬೆಂಗಳೂರು awardಲ್ಲಿ best jury film award 13) ಅಪ್ಪು ಚಲನ ಚಿತ್ರೋತ್ಸವದಲ್ಲಿ ಭಾಗವಹಿಸುವಿಕೆ
  • ರಕ್ಷಿತ್ ಶೆಟ್ಟಿ ನಿರ್ಮಾಣದ, ಸುಮಂತ್ ಭಟ್ ನಿರ್ದೇಶನದ ಮಿಥ್ಯ ಸಿನಿಮಾ(ಕನ್ನಡ)
  • ಸುಕೇಶ್ ಶೆಟ್ಟಿ ನಿರ್ದೇಶನದ ದೂರದರ್ಶನ ಸಿನಿಮಾ (ಕನ್ನಡ )
  • ಶ್ರೀ ಮುರುಳಿ ನಟಿಸಿರುವ ಭಗೀರ ಸಿನಿಮಾ
  • ಶಂಕರ್ ನಿರ್ದೇಶನದ ಧ್ರುವ 369 ಸಿನಿಮಾ
  • ಸಂತೋಷ ಶೆಟ್ಟಿ ನಿರ್ದೇಶನದ ಯಾನ್ ಸೂಪರ್ ಸ್ಟಾರ್ ಸಿನಿಮಾ
  • ಪರೀಕ್ಷೆ ಭಯವೇ ಕನ್ನಡ ಸಿನಿಮಾದಲ್ಲಿ ನಟನೆ

ಜಾಹೀರಾತುಗಳು
ಅರುಣಾ ಮಸಾಲ,
ಸಂಜೀವ ಶೆಟ್ಟಿ ಟೆಕ್ಸ್’ಟೈಕ್ಸ್

ಮುಡಿಗೇರಿರುವ ಪ್ರಶಸ್ತಿಗಳು
1) ಕರ್ನಾಟಕ ಪ್ರತಿಭಾ ರತ್ನ
2) ಕರ್ನಾಟಕ ಕಲಾಶ್ರೀ
3) ಕಾರಂತರ ಹುಟ್ಟುಹಬ್ಬ ಸಾಧನಶ್ರೀ
4) ಸೌರಭ ರತ್ನ

ಸನ್ಮಾನಗಳು

  • ಬಂಟರ ವಲಯವಾದ ಮುಡಿಪು ವಲಯ ಬಂಟರ ಸಂಘದಲ್ಲಿ ಸನ್ಮಾನ
  • ಬಂಟರ ಸಂಘ ಬೋಳಿಯಾರ್ ಮತ್ತು ವರ್ಕಾಡಿಯಲ್ಲಿ ಸನ್ಮಾನ
  • ಬಂಟರ ಸಂಘ ಬೆಂಗಳೂರು ನಲ್ಲಿ ಬೆಸ್ಟ್ ಎಕ್ಸಲೆನ್ಸ್ ಅವಾರ್ಡ್
  • 150ಕ್ಕೂ ಹೆಚ್ಚು ಸ್ಟೇಜ್’ಗಳಲ್ಲಿ ಕಾರ್ಯಕ್ರಮ
  • 50ಕ್ಕೂ ಹೆಚ್ಚು ಸ್ಟೇಜ್’ಗಳಲ್ಲಿ ಸನ್ಮಾನಗಳು
  • 50ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ActingKannada News WebsiteKickboxingLatest News KannadaLourdes Central School BejaiMangaloreSportsTuluNaduಅತೀಶ್ ಎಸ್. ಶೆಟ್ಟಿಕಿಕ್ ಬಾಕ್ಸಿಂಗ್ಕ್ರೀಡೆನಟನೆಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಬಿಜೈ
Share196Tweet123Send
Previous Post

Welcome Aizawl to the Railway map of India | ನೂತನ ರೈಲು ಮಾರ್ಗ ಉದ್ಘಾಟಿಸಿ, ಅಭಿನಂದಿಸಿದ ಮೋದಿ

Next Post

ಭಾರತದ ಫುಟ್ಬಾಲ್ ಅಭಿವೃದ್ಧಿಯತ್ತ ಬೆಂಗಳೂರು ಎಫ್’ಸಿಯಿಂದ ಮಹತ್ವದ ಹೆಜ್ಜೆ: ಹೊಸ ತರಬೇತಿ ಕೇಂದ್ರ ಉದ್ಘಾಟನೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದ ಫುಟ್ಬಾಲ್ ಅಭಿವೃದ್ಧಿಯತ್ತ ಬೆಂಗಳೂರು ಎಫ್’ಸಿಯಿಂದ ಮಹತ್ವದ ಹೆಜ್ಜೆ: ಹೊಸ ತರಬೇತಿ ಕೇಂದ್ರ ಉದ್ಘಾಟನೆ!

ಭಾರತದ ಫುಟ್ಬಾಲ್ ಅಭಿವೃದ್ಧಿಯತ್ತ ಬೆಂಗಳೂರು ಎಫ್'ಸಿಯಿಂದ ಮಹತ್ವದ ಹೆಜ್ಜೆ: ಹೊಸ ತರಬೇತಿ ಕೇಂದ್ರ ಉದ್ಘಾಟನೆ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL