ಭದ್ರಾವತಿ: ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ನಗರದ ವಿವಿಧೆಡೆ ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ 371 ಪ್ರಕರಣಗಳನ್ನು ದಾಖಲಿಸಿ 21,700 ರೂ ದಂಢ ವಸೂಲಿ ಮಾಡಿದ ಪ್ರಕರಣ ಶನಿವಾರ ನಡೆದಿದೆ.
ತಹಸೀಲ್ದಾರ್ ಸೋಮಶೇಖರ್ ನೇತೃತ್ವದ ತಂಡ ದಾಳಿ ನಡೆಸಿದ್ದು ತಾಲೂಕಿನ ತರೀಕೆರೆ ರಸ್ತೆ, ಹೊಸಮನೆ ಮುಖ್ಯ ರಸ್ತೆ, ತಾಲೂಕು ಕಛೇರಿ ರಸ್ತೆ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ತಂಬಾಕು ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತಂತೆ ಸಾರ್ವಜನಿಕರಿಗೆ ಹಾಗೂ ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಒ ತಮ್ಮಣ್ಣಗೌಡ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಬಿ.ಎಸ್.ಶಂಕರಪ್ಪ, ಟಿಎಚ್ಒ ಡಾ.ಎಂ.ಆರ್.ಗಾಯಿತ್ರಿ, ತಂಬಾಕು ನಿಯಂತ್ರಣಾಧಿಕಾರಿ ಹೇಮಂತರಾಜ್ ಅರಸ್, ಗ್ರಾಮಾಂತರ ಸಿಪಿಐ ಯೋಗೇಶ್, ಪ್ರಕಾಶ್, ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್ ರಾಜ್, ಸೋಮಶೇಖರ್, ಬಸವರಾಜ್, ಶಶಿಕುಮಾರ್ ಸೇರಿದಂತೆ ಹಲವರು ಭಾಗವಸಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post