No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡಿಗರೇ, ಶಿವಮೊಗ್ಗದ ಈ ಸ್ಥಳಗಳನ್ನು 7 ಅದ್ಬುತಗಳ ಸಾಲಿಗೆ ಸೇರಿಸಲು ಇದು ಸುವರ್ಣಾವಕಾಶ

ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ: ಇದರಲ್ಲಿ ನೀವು ಪಾಲ್ಗೊಳ್ಳಿ | ನಮ್ಮ ಜಿಲ್ಲೆಯ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ: ಯಾವುವು ಆ ಸ್ಥಳಗಳು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 17, 2022
in ಶಿವಮೊಗ್ಗ
0
ಮಲೆನಾಡಿಗರೇ, ಶಿವಮೊಗ್ಗದ ಈ ಸ್ಥಳಗಳನ್ನು 7 ಅದ್ಬುತಗಳ ಸಾಲಿಗೆ ಸೇರಿಸಲು ಇದು ಸುವರ್ಣಾವಕಾಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಶಿವಮೊಗ್ಗದ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.

ಶಿವಮೊಗ್ಗ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ  ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.
ಶಿವಮೊಗ್ಗದ ನಾಮ ನಿರ್ದೇಶನಗಳು
ರಾಜ, ರಾಕೆಟ್‌, ರೋರರ್‌, ಲೇಡಿ ಎಂಬ ಶರಾವತಿಯ ನಾಲ್ಕು ಧಾರೆಗಳು ಅಬ್ಬರಿಸಿ ಭೋರ್ಗರೆಯುವ ಜಗತ್ಪ್ರಸಿದ್ಧ ಜೋಗ ಜಲಪಾತ. ಸಹ್ಯಾದ್ರಿ ಶ್ರೇಣಿಯ ಮಳೆಕಾಡಿನಲ್ಲಿರುವ ಸಮುದ್ರಮಟ್ಟದಿಂದ 1354 ಮೀಟರ್‌ ಎತ್ತರದಲ್ಲಿರುವ ಚಾರಣಿಗರ ನೆಚ್ಚಿನ ತಾಣ ಕೊಡಚಾದ್ರಿ ಬೆಟ್ಟ. ದಕ್ಷಿಣದ ಚಿರಾಪುಂಜಿ ಎಂಬ ಹಿರಿಮೆ ಹೊಂದಿದ್ದ ಅದ್ಭುತ ಪ್ರಕೃತಿ ಸೌಂದರ್ಯದ, ಸೂರ್ಯಾಸ್ತ ವೀಕ್ಷಣೆಗೂ ಪ್ರಸಿದ್ಧವಾದ ತಾಣ ಆಗುಂಬೆ ಘಾಟಿ. 1500 ವರ್ಷ ಹಳೆಯ, ಹಲ್ಮಿಡಿಗಿಂತಲೂ ಪುರಾತನವಾದ ಶಾಸನ ತಾಳಗುಂದ ಶಿಲಾ ಶಾಸನ.

ಈಗಾಗಲೇ https://www.7wondersofkarnataka.comನಲ್ಲಿ ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಶಿವಮೊಗ್ಗದ ಈ ನಾಲ್ಕು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.

ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ಶಿವಮೊಗ್ಗ ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು.ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.

ಏನಿದು ಅಭಿಯಾನ?
ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್’ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.
‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ‘ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈ ಅಭಿಯಾನ.

ಯಾವ ಹಂತದಲ್ಲಿದೆ ಅಭಿಯಾನ?
ಮೇ ತಿಂಗಳಲ್ಲಿ ಚಾಲನೆ ದೊರೆತಿರುವ ಆರು ಹಂತದ ಈ ಅಭಿಯಾನ ಎರಡನೇ ಹಂತಕ್ಕೆ ತಲುಪಿದೆ. ಮೊದಲ ಹಂತದಲ್ಲಿ ಸಾರ್ವಜನಿಕರು ವೆಬ್‌ಸೈಟ್ ಮೂಲಕ ತಮ್ಮ ನೆಚ್ಚಿನ ಊರು, ಜಿಲ್ಲೆ, ತಾಲೂಕು ಸೇರಿ ರಾಜ್ಯದ ಯಾವುದೇ ಜಾಗದಲ್ಲಿ ತಾವು ನೋಡಿದ ಅದ್ಭುತ ಪ್ರವಾಸೀ ಸ್ಥಳ, ಪಾರಂಪರಿಕ ತಾಣ, ಅತ್ಯಾಧುನಿಕ ಕಟ್ಟಡ, ರಸ್ತೆ ಹೀಗೆ ಅದ್ಭುತ ಎನಿಸುವ ಸ್ಥಳದ ಫೋಟೊ ಅಪ್‌ಲೋಡ್ ಮಾಡಿ ಆ ಸ್ಥಳದ ವೈಶಿಷ್ಟ್ಯವನ್ನು ದಾಖಲು ಮಾಡಿ ನಾಮನಿರ್ದೇಶನ ಮಾಡಿದ್ದಾರೆ.

ಇದೀಗ, ಎರಡನೇ ಹಂತದಲ್ಲಿ ಸಾರ್ವಜನಿಕರಿಂದ ನಾಮನಿರ್ದೇಶನಗೊಂಡ ಅದ್ಭುತಗಳಲ್ಲಿ 100 ಸ್ಥಳಗಳನ್ನು ಆಯ್ಕೆ ಮಾಡಿ, ಅತ್ಯದ್ಭುತ ತಾಣಗಳು ಯಾವುವು ಎಂಬ ಬಗ್ಗೆ ವೋಟಿಂಗ್‌ ನಡೆಯುತ್ತಿದೆ.

ವೋಟಿಂಗ್ ನಿಯಮ:

  • ಆಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು
  • ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ
  • ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ
  • ತನ್ಮೂಲಕ  ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 7 Wonders of KarnatakaAgumbe GhatJog FallsKannada News WebsiteKodachadri HillsLatest News KannadaSeven Wonders of KarnatakaShimogaShivamoggaShivamogga NewsTalagunda Shasanaಆಗುಂಬೆ ಘಾಟಿಕರುನಾಡಿನ ಏಳು ಅದ್ಭುತಕರ್ನಾಟಕದ ಏಳು ಅದ್ಭುತಕೊಡಚಾದ್ರಿ ಬೆಟ್ಟಜೋಗ ಜಲಪಾತತಾಳಗುಂದ ಶಿಲಾ ಶಾಸನವಿಶ್ವದ ಏಳು ಅದ್ಭುತಶಿವಮೊಗ್ಗ
Share197Tweet123Send
Previous Post

ಗಮನಿಸಿ! ಆ.17ರಂದು ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ: ಜಿಲ್ಲಾಧಿಕಾರಿ ಸ್ಪಷ್ಟನೆ

Next Post

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL