ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ನಗರದಲ್ಲಿ ದ್ವಿಚಕ್ರ ವಾಹನಗಳು, ಆಟೋಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಅದಕೋಸ್ಕರ ವಾಹನಗಳಿಗೆ ನಿಗದಿತ ನಿಲ್ದಾಣವನ್ನು ನಿರ್ಮಿಸುವ ಉದ್ದೇಶದಿಂದ ನಗರದಲ್ಲಿ ಸರ್ವೇ ಮಾಡಲಾಗಿದೆ ಎಂದು ವೃತ್ತ ನಿರೀಕ್ಷಕ ಈ. ಆನಂದ ತಿಳಿಸಿದರು.
ನಗರದ ಚಿತ್ರದುರ್ಗ ರಸ್ತೆಯ ಎಸ್.ಆರ್. ಕಾಂಪ್ಲೆಕ್ಸ್’ನ ಸಮೀಪ ಸರ್ವೇ ಕಾರ್ಯ ನಡೆಸಿ ಅವರು ಮಾತನಾಡಿದರು.
ನಗರದಲ್ಲಿ ದ್ವಿಚಕ್ರ ವಾಹನಗಳು, ಅಟೋಗಳು, ಟಾಟಾ ಏಸ್ ವಾಹನಗಳು ಸಾರ್ವಜನಿಕ ಸ್ಥಳ ಬಸ್ ನಿಲ್ದಾಣ, ನೆಹರೂ ವೃತ್ತ, ಬಳ್ಳಾರಿ ರಸ್ತೆ, ಬೆಂಗಳೂರು ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ, ವೃದ್ದರಿಗೆ ಶಾಲಾ ಮಕ್ಕಳಿಗೆ, ವ್ಯಾಪಾರಿಗಳಿಗೆ ತುಂಬ ಕಿರಿಕಿರಿಯಾಗುತ್ತಿತು. ಇದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದರು. ಇದನ್ನು ಮನಗಂಡು ವಾಹನಗಳನ್ನು ನಿಗದಿತ ಸ್ಥಳಗಳಲ್ಲಿ ನಿಲ್ಲಿಸವ ವ್ಯವಸ್ಥೆಯನ್ನು ಮಾಡಲು ಸರ್ವೆ ನಡೆಸಲಾಗಿದೆ ಎಂದರು.
ಪಿಎಸ್’ಐಎಸ್’ಡಿ ನೂರ್ ಅಹ್ಮದ್ ಮಾತನಾಡಿ, ನಗರದಲ್ಲಿ ಸಂಚಾರಿ ವ್ಯವಸ್ಥೆ ಸುಗಮವಾಗುವಂತೆ ಮಾಡಲು ದ್ವಿಚಕ್ರ, ಆಟೋಗಳಿಗೆ ನಿಗದಿತ ಸ್ಥಳದಲ್ಲಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನಗರದ ಮುಖ್ಯ ರಸ್ತೆಯಲ್ಲಿ ನಿಲ್ಲಿಸುವ ವಾಹನಗಳನ್ನು ಸೀಮಿತ ಸ್ಥಳಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಲು ಹಿರಿಯ ಅಧಿಕಾರಗಳ ಜೊತೆ ಚರ್ಚಿಸಿ ಅವರ ಮಾರ್ಗದರ್ಶನದಂತೆ ಕೆಲವು ಕಡೆ ವಾಹನ ನಿಲ್ದಾಣಗಳ ವ್ಯವಸ್ಥೆ ಮಾಡುವ ಉದ್ದೇಶದಿಂದ ಇಂದು ಸರ್ವೇ ಕಾರ್ಯ ನಡೆಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಿಎಸ್’ಐಗಳಾದ ಕೆ. ಸತೀಶ್ ನಾಯ್ಕ, ಶಿವಕುಮಾರ್, ಪೇದೆಗಾದ ತಿರುಕಪ್ಪ, ಹನುಮಂತ ರೆಡ್ಡಿ ಕುಮಾರಸ್ವಾಮಿ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get in Touch With Us info@kalpa.news Whatsapp: 9481252093
Discussion about this post