ಕಲ್ಪ ಮೀಡಿಯಾ ಹೌಸ್ | ಅಯೋಧ್ಯೆ |
ರಾಮಲಲ್ಲಾ ಪ್ರತಿಷ್ಠಾಪನಾ Ramalalla Prathishtapane ಕಾರ್ಯ ನಿನ್ನೆ ಪೂರ್ಣಗೊಂಡ ಬೆನ್ನಲ್ಲೇ ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ತೆರೆದಿದ್ದು, ರಾಮನ ದರ್ಶನಕ್ಕಾಗಿ ಅಯೋಧ್ಯೆ ತುಂಬಿತುಳುಕುತ್ತಿದೆ.
ದೇಶ ಹಾಗೂ ವಿದೇಶಗಳಿಂದ ರಾಮಭಕ್ತರು ಹರಿದುಬರುತ್ತಿದ್ದು, ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಇಂದು ಬೆಳಗಿನಜಾವ 3 ಗಂಟೆಯಿಂದಲೇ ಸಾವಿರಾರು ಮಂದಿ ಸಾಲುಗಟ್ಟಿ ನಿಂತಿದ್ದು, ರಾಮನೂರು ಹೊಸ ಇತಿಹಾಸ ಸೃಷ್ಠಿಸುತ್ತಿದೆ. ಅಯೋಧ್ಯೆಗೆ ಕೇಸರಿ ಧ್ವಜ ಹಾಗೂ ಉಡುಪಿನೊಂದಿಗೆ ಭಕ್ತರು ದಂಡು ದಂಡಾಗಿ ಆಗಮಿಸುತ್ತಿದ್ದು, ಜೈಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.
Also read: ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ
ದರ್ಶನ ಸಮಯ ನಿಗದಿ
ಭಕ್ತರಿಗೆ ಬಾಲರಾಮನ ದರ್ಶನಕ್ಕಾಗಿ ಎರಡು ಅವಧಿಯನ್ನು ನಿಗದಿಪಡಿಸಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ Shriram Janmabhoomi Thirtha Kshethra Trust ತಿಳಿಸಿದೆ.
ಮೊದಲ ಅವಧಿಯು ಬೆಳಗ್ಗೆ 7 ರಿಂದ 11.30ರವರೆಗೆ ಮತ್ತು ಎರಡನೇ ಅವಧಿಯು ಮಧ್ಯಾಹ್ನ 2 ಗಂಟೆಯಿAದ ಸಂಜೆ 7 ಗಂಟೆಯವರೆಗೆ ನಿಗದಿಪಡಿಸಲಾಗಿದೆ.
ನಿತ್ಯ ಸಂಜೆ 6.30ಕ್ಕೆ ವಿಶೇಷ ಭಜನೆ, ಶೃಂಗಾರ ಆರತಿ ಕಾರ್ಯಕ್ರಮ ನಡೆಯಲಿದ್ದು, ಒಂದು ದಿನ ಮೊದಲೇ ಭಕ್ತರು ತಮ್ಮ ಸ್ಥಾನವನ್ನು ಕಾಯ್ದಿರಿಸಬೇಕು.
ಸಂಜೆ 7 ಗಂಟೆಗೆ ಬಾಲರಾಮನಿಗೆ ಆರತಿ ನೆರವೇರಲಿದ್ದು, ಆರತಿ ದರ್ಶನಕ್ಕಾಗಿ ಬರುವ ಭಕ್ತರು ಟ್ರಸ್ಟ್ ಕಚೇರಿಯಲ್ಲಿ ಮುಂಚಿತವಾಗಿ ಪಾಸ್ ಪಡೆದಿರಬೇಕು ಎಂದು ಅವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post