ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಲ್ಲಿ ರಾಜಕೀಯ ಹಾಗೂ ಧಾರ್ಮಿಕವಾಗಿ ಅತ್ಯಂತ ಸೂಕ್ಷ್ಮ ಪ್ರಕರಣ ಅಯೋಧ್ಯಾ ವಿವಾದದ ಕುರಿತಾಗಿ ಇಂದು ಅಂತಿಮ ತೀರ್ಪು ನೀಡುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಝೆಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದೆ.
ಇಂದು ತೀರ್ಪು ನೀಡುವ ಹಿನ್ನೆಲೆಯಲ್ಲಿ ಅವರಿಗೆ ಈಗಿರುವ ಭದ್ರತೆಯನ್ನು ನವೀಕರಿಸಿ, ವಿಶೇಷ ಭದ್ರತೆಯನ್ನು ನೀಡಲಾಗಿದೆ. ಗಣ್ಯಾತಿಗಣ್ಯರಿಗಾಗಿ ದೇಶದಲ್ಲಿರುವ ಅತ್ಯುನ್ನತ ಭದ್ರತಾ ವ್ಯವಸ್ಥೆಗಳಲ್ಲಿ ಝೆಡ್ ಪ್ಲಸ್ ಸಹ ಒಂದಾಗಿದ್ದು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಹಾಗೂ ಸಿಆರ್’ಪಿಎಫ್ ಯೋಧರ ಭದ್ರತೆ ಒದಗಿಸುತ್ತಾರೆ.
ನವೆಂಬರ್ 17 ರಂದು ನಿವೃತ್ತರಾಗಲಿರುವ ನ್ಯಾಯಮೂರ್ತಿ ಗೊಗೋಯ್ ಅವರು ಅಕ್ಟೋಬರ್ 16 ರಂದು ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದ ಐದು ಸದಸ್ಯರ ಸಂವಿಧಾನ ಪೀಠದ ಮುಖ್ಯಸ್ಥರಾಗಿದ್ದಾರೆ. ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಎ. ನಜೀರ್ ಅವರು ನ್ಯಾಯಪೀಠದ ಇತರ ಸದಸ್ಯರಾಗಿದ್ದಾರೆ.
Get In Touch With Us info@kalpa.news Whatsapp: 9481252093, 94487 22200






Discussion about this post