ಕಲ್ಪ ಮೀಡಿಯಾ ಹೌಸ್ | ಬಿ.ಆರ್. ಪ್ರಾಜೆಕ್ಟ್ |
ತಂದೆ ತಾಯಿಗಳು ಮಕ್ಕಳಿಗಾಗಿ ಆಸ್ತಿ ಮಾಡುವುದರ ಕಡೆ ಯೋಚಿಸದೇ, ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡುವುದರ ಕಡೆ ಗಮನಹಿರಿಸಬೇಕೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪೋಷಕರಿಗೆ ಕರೆ ನೀಡಿದರು.
ಅವರು ಇಂದು ಭದ್ರಾವತಿ ತಾಲ್ಲೂಕ್ ಶಾಂತಿನಗರದಲ್ಲಿರುವ ಬಿಜಿಎಸ್ ಕುವೆಂಪು ಸ್ಕೂಲ್ ನ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ‘ಬಿಜಿಎಸ್ ಫೆಸ್ಟ್ 2024-25’ ರ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡುತ್ತಿದ್ದರು.
ಶಾಲೆಯಲ್ಲಿ ಮಕ್ಕಳು ಕೇವಲ 6 ಘಂಟೆಗಳ ಕಾಲ ಮಾತ್ರ ಇದ್ದರೆ, ಮನೆಯಲ್ಲಿ ಸುಮಾರು 18 ಘಂಟೆಗಳ ಕಾಲ ಇರುತ್ತಾರೆ. ಶಾಲೆಯಲ್ಲಿ ಆಧ್ಯಾತ್ಮಿಕ ಯುಕ್ತ ವಿದ್ಯೆಯನ್ನು ನೀಡುವುದರ ಜೊತೆಯಲ್ಲಿ ಕ್ರೀಡೆ, ವಿಜ್ಞಾನ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಶಾಲೆಯಲ್ಲಿ ಇರುವಷ್ಟು ಸಮಯ ತೊಡಗಿಸುವ ಕೆಲಸವನ್ನು ಶಾಲೆಯ ಶಿಕ್ಷಕರು ಮಾಡುತ್ತಾರೆ. ಆದರೆ ಪೋಷಕರು ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಎಂಬುದು ಬಹುಮುಖ್ಯ. ಜವಾಬ್ದಾರಿ ಮಕ್ಕಳನ್ನಾಗಿ ಮಾಡುವ ಹೊಣೆ ತಂದೆ ತಾಯಿಗಳಾದ್ದಗಿರುತ್ತದೆ. ಮನೆ-ಮನಸ್ಸಿಗೆ ಬೆಂಕಿ ಹಚ್ಚುವ ಧಾರವಾಹಿಗಳನ್ನು ನೋಡದಂತೆ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕೆಂದರು.
Also read: ಬೀದಿ ಬಸವನನ್ನು ಯಾಕಿನ್ನೂ ಬಂಧಿಸಿಲ್ಲ? ಸುಮೋಟೋ ಕೇಸ್ ಹಾಕದಿದ್ದರೆ ಭದ್ರಾವತಿಯಲ್ಲಿ ಪ್ರತಿಭಟನೆ: ಶಾಸಕ ಚನ್ನಬಸಪ್ಪ
ಅಭಿಮನ್ಯು ತನ್ನ ತಾಯಿ ಗರ್ಭದಲ್ಲಿರುವಾಗಲೇ ಕೃಷ್ಣನ ಉಪದೇಶ ಕೇಳಿಸಿಕೊಂಡ ಎಂದಾದರೆ ಮಕ್ಕಳು ಹೊಟ್ಟೆಯಲ್ಲಿ ಇರುವ ಸಂದರ್ಭದಲ್ಲಿ ತಾಯಿಯಾದವರು ಟಿವಿಯಲ್ಲಿ ಕ್ರೈಂ ಸ್ಟೋರಿಗಳನ್ನು ನೋಡಿದರೆ ಆ ಮಗುವಿನ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಆಲೋಚಿಸಬೇಕಾಗುತ್ತದೆ. ಗರ್ಭದಲ್ಲಿರುವಾಗ ಮಗು ಒಳ್ಳೆಯ ಮಾತುಗಳನ್ನು ಆಲಿಸಿದರೆ ಆ ಮಗು ವೀರ-ಶೂರನಾಗಿ ಬೆಳೆಯುತ್ತದೆ ಎಂದು ಮಾರ್ಮಿಕವಾಗಿ ಸ್ವಾಮೀಜಿ ನುಡಿದರು.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ, ಭದ್ರಾವತಿ ತಾಲ್ಲೂಕು ಶಿಕ್ಷಣಾಧಿಕಾರಿಗಳಾದ ಎ.ಕೆ. ನಾಗೇಂದ್ರಪ್ಪ, ಭದ್ರಾವತಿ ಗ್ರಾಮಾಂತರ ವಲಯ ಪೋಲಿಸ್ ಇನ್ಸ್ ಪೆಕ್ಟರ್ ಜಗದೀಶ್ ಹಂಚಿನಾಳ, ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ, ಟ್ರಸ್ಟಿ ವಾಸಪ್ಪಗೌಡ, ಶಾಲೆಯ ಪ್ರಾಂಶುಪಾಲರಾದ ಆಶೋಕ್ ಇದ್ದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post