ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬಾಗಲಕೋಟೆ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಸಹ ಕ್ಯಾರೆ ಎನ್ನದ ಬಾದಾಮಿ ಜನರು ಮಾತ್ರ ಗುಂಪು ಗುಂಪಾಗಿ ಸೇರುವ ಕೆಲಸ ಮಾಡುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ 21 ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರೆಡ್ ಝೋನ್ ಎಂದು ಘೋಷಣೆ ಮಾಡಿದ್ದರೂ ಸಹ ಜನರು ಬೇಕಾಬಿಟ್ಟಿಯಾಗಿ ತಿರುಗುತ್ತಿದ್ದಾರೆ.
ಇಂದು ಬೆಳಿಗ್ಗೆ ಜನರು ಕಾಯಿಪಲ್ಲೆ, ದಿನಸಿ ವಸ್ತುಗಳನ್ನು ಖರೀದಿ ಮಾಡಲು ಅಂಗಡಿಗಳಲ್ಲಿ, ಪ್ರಮುಖ ರಸ್ತೆಗಳಲ್ಲಿ ಮುಗಿ ಬಿದ್ದಿದ್ದರು. ಬಾದಾಮಿ ತಾಲೂಕು ಆಡಳಿತ ಎಷ್ಟು ಕಷ್ಟ ಪಟ್ಟು ಜನರಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತಿದ್ದರೂ ಜನರು ತಮ್ಮ ಇಷ್ಟ ಬಂದ ಹಾಗೆ ತಿರುಗಾಡುತ್ತಿದ್ದಾರೆ. ಇವರಿಗೆ ಬ್ರೇಕ್ ಹಾಕುವ ಕೆಲಸವನ್ನೂ ಸಹ ತಾಲೂಕು ಆಡಳಿತ ಯಾಕೆ ಮಾಡುತ್ತಿಲ್ಲ ಎನ್ನುವುದು ಪ್ರಶ್ನೆಯಾಗಿದೆ.
Get in Touch With Us info@kalpa.news Whatsapp: 9481252093
Discussion about this post