ಕಲ್ಪ ಮೀಡಿಯಾ ಹೌಸ್ | ಬಾಗಲಕೋಟೆ |
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನಿರಪರಾಧಿ ಎಂದು ಕ್ಲೀನ್ ಚಿಟ್ ದೊರೆತರೂ ನಂತರವೂ ಸಹ ಸಚಿವ ಸ್ಥಾನ ನೀಡದ ಕುರಿತಾಗಿ ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.
ಈ ಕುರಿತಂತೆ ಮೌನ ಮುರಿದು ಬಹಿರಂಗವಾಗಿ ಮಾತನಾಡಿರುವ ಅವರು, ನಿರಪರಾಧಿ ಎಂದು ಸಾಬೀತಾದ ನಂತರವೂ ಸಹ ನನಗೆ ಯಾಕೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಎಂಬುದಕ್ಕೆ ಸಿಎಂ ಬೊಮ್ಮಾಯಿ ಅವರೇ ಉತ್ತರ ನೀಡಬೇಕು. ನಾನು ಈ ಕುರಿತಂತೆ ಮಾತನಾಡುವುದಿಲ್ಲ ಎಂದಿದ್ದಾರೆ.
ವಿಧಾನಸಭೆಯ ಪಾವಿತ್ರದ ಬಗ್ಗೆ ನನಗೆ ತಿಳಿದಿದೆ. ನಾನು ವಿಧಾನಸಭೆಗೆ ಕಾಲಿಟ್ಟ ನಂತರ ಒಂದು ದಿನವೂ ಸಹ ರಜೆ ಹಾಕಿಲ್ಲ, ಅಲ್ಲಿ ನಿದ್ದೆಯೂ ಮಾಡಿಲ್ಲ. ನನ್ನ ವಿರುದ್ಧ ಬಂದ ಆರೋಪದಲ್ಲಿ ಮುಕ್ತನಾಗಿ ಬಂದಿದ್ದೇನೆ. ಆದರೂ ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಎಂಬುದಕ್ಕೆ ಮುಖ್ಯಮಂತ್ರಿಗಳೇ ಉತ್ತರಿಸಲಿ ಎಂದರು.
ಗುತ್ತಿಗೆದಾರ ಸಂತೋಷ್ ಪ್ರಕರಣದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಕಳೆದುಕೊಂಡಿದ್ದ ಈಶ್ವರಪ್ಪನವರಿಗೆ ತಮ್ಮ ಕೇಸ್ ನಲ್ಲಿ ಕ್ಲೀನ್ ಚೀಟ್ ಆಗಿ ಬಂದರೆ ತಮಗೆ ಮತ್ತೆ ಸಂಪುಟದಲ್ಲಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭರವಸೆ ನೀಡಿದ್ದರು.
ಆದರೆ ಈಗ ಪೊಲೀಸ್ ಇಲಾಖೆ ನೀಡಿರುವ ವರದಿಯಲ್ಲಿ ಸಚಿವ ಈಶ್ವರಪ್ಪ ನವರಿಗೆ ಕುತ್ತಿಗೆದಾರ ಸಂತೋಷ್ ಪ್ರಕರಣದಲ್ಲಿ ಕ್ಲೀನ್ ಚೀಟ್ ನೀಡಲಾಗಿದೆ. ಕ್ಲೀನ್ ಚೀಟ್ ನೀಡಿದ್ದರು ನನಗೆ ಸಂಪುಟದಲ್ಲಿ ಮತ್ತೆ ಸ್ಥಾನ ನೀಡುವುದಕ್ಕೆ ವಿಳಂಬ ಮಾಡುತ್ತಿರುವುದು ಏಕೆ..? ಇದನ್ನು ನಾನು ಖಂಡಿಸುತ್ತೇನೆ ಎಂದು ಬೊಮ್ಮಾಯಿ ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
Also read: ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅನಾವರಣ: ಕಾಂಗ್ರೆಸ್ ಡಬಲ್ ಸ್ಟಾಂಡರ್ಡ್
ಬೆಳಗಾವಿಗೆ ಹೋಗುತ್ತೇನೆ ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳುವುದಿಲ್ಲ ಅಧಿವೇಶನದಲ್ಲಿ ಪಾಲ್ಗೊಳ್ಳತ್ತಿರುವುದಕ್ಕೆ ಸ್ಪೀಕರ್ ಹತ್ತಿರ ಅನುಮತಿಯನ್ನು ಪಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post