ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಾಡ ಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದ ಬಲರಾಮ(67) ಆನೆ ಅಸುನೀಗಿದೆ.
ಬಲರಾಮ ಆನೆ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ನರಳುತ್ತಿತ್ತು. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದೆ.
ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿತ್ತು. ಬಲರಾಮನಿಗೆ ಕ್ಷಯ ರೋಗವಿತ್ತು ಎಂದು ಹೇಳಲಾಗಿದ್ದು, ವರದಿಯಿಂದಷ್ಟೇ ಕಾರಣ ತಿಳಿದುಬರಬೇಕಿದೆ.
Discussion about this post