ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಸಾರ್ವತ್ರಿಕ ವಿಧಾನಸಭೆ ಚುನಾವಣೆ 2023 ರ ಅಂಗವಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯ ವಿವಿಧ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಸೋಮವಾರದಂದು ಒಟ್ಟು 2 ಲಕ್ಷ ರೂ. ನಗದು ಹಣ ಮತ್ತು 19,011 ರೂ. ಮೌಲ್ಯದ 44.46 ಲೀಟರ್ ಮದ್ಯ ವಶಪಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ DC Pawankumar Malapati ತಿಳಿಸಿದ್ದಾರೆ.
95-ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತೋರಣಗಲ್ಲಿನ ವಿಜಯನಗರ ವಿಮಾನ ನಿಲ್ದಾಣದ ಹತ್ತಿರ ಚೆಕ್ಪೆÇೀಸ್ಟ್ ಬಳಿ ಎಸ್ಎಸ್ಟಿ ತಂಡವು ತಪಾಸಣೆ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪರಿಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಲಾಗಿರುತ್ತದೆ.

Also read: ಬಂಡೆಪ್ಪ ಕಾಶಂಪುರ ಸಮ್ಮುಖದಲ್ಲಿ ನೂರಾರು ಮಂದಿ ಜೆಡಿಎಸ್’ಗೆ ಸೇರ್ಪಡೆ
ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್ಎಸ್ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಈಗಾಗಲೇ ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ.











Discussion about this post