ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ಎ2 ಆರೋಪಿ ನಟ ದರ್ಶನ್’ಗೆ #Darshan ಚಿಕಿತ್ಸೆಗಾಗಿ ಆರು ವಾರಗಳ ಕಾಲ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನ್ಯಾಯಾಲಯ ವಿಧಿಸಿದ್ದ ಎಲ್ಲ ಷರತ್ತುಗಳನ್ನು ದರ್ಶನ್ ಕುಟುಂಬಸ್ಥರು ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬಳ್ಳಾರಿ ಜೈಲಿನಿಂದ ಅವರು ಬಿಡುಗಡೆಗೊಂಡಿದ್ದಾರೆ.

Also read: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಅಪಘಾತ | ಮಹಿಳೆ ಸಾವು
ಸಂಜೆ 6 ಗಂಟೆ ವೇಳೆಗೆ ಜೈಲಿನಿಂದ ಹೊರಬಂದ ದರ್ಶನ್, ಪತ್ನಿ ಕುಳಿತಿದ್ದ ಕಾರಿನಲ್ಲಿ ಕುಳಿತು ಪ್ರಯಾಣ ಆರಂಭಿಸಿದ್ದಾರೆ. ಚಳ್ಳಕೆರೆ-ತುಮಕೂರು ಮಾರ್ಗವಾಗಿ ರಾತ್ರಿ 12 ಗಂಟೆ ವೇಳೆಗೆ ದರ್ಶನ್ ಬೆಂಗಳೂರು ತಲುಪುವ ನಿರೀಕ್ಷೆಯಿದೆ.

ಇನ್ನು, ದರ್ಶನ್ ಭದ್ರತೆ ದೃಷ್ಠಿಯಿಂದ ಬಳ್ಳಾರಿ ಜಿಲ್ಲೆಯ ಗಡಿ ದಾಟುವರೆಗೂ 50 ಪೊಲೀಸರನ್ನು ಒಳಗೊಂಡ ತಂಡದ ಭದ್ರತೆ ಒದಗಿಸಲಾಗಿದೆ.
ದರ್ಶನ್’ಗೆ ಆರೋಗ್ಯ ಕಾರಣದಿಂದ 6 ವಾರಗಳ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳನ್ನು ಮುಗಿದರೆ ಇಂದು ಸಂಜೆಯೇ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕೋರ್ಟ್ ನಿರ್ದಿಷ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ಹೇಳಿಲ್ಲ. ದರ್ಶನ್ ಅವರು ಈ ಹಿಂದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಅಪೋಲೋ ಆಸ್ಪತ್ರೆಗೆ ತೆರಳುತ್ತಾರೋ ಅಥವಾ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೋ ಎನ್ನುವುದು ಅವರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post