No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ವಿಧಾನಸಭಾ ಚುನಾವಣೆ: ಬಳ್ಳಾರಿಯಲ್ಲಿ ಶೇಕಡಾವಾರು ಎಷ್ಟು ಮತದಾನವಾಗಿದೆ?

kalpa News by kalpa News
May 11, 2023
in ಬಳ್ಳಾರಿ
0
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಬಳ್ಳಾರಿ ಜಿಲ್ಲಾ ವ್ಯಾಪ್ತಿಯ 05 ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಲ್ಲಿ ಮೇ 10 ರಂದು ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸಂಜೆ 05 ಗಂಟೆಯವರೆಗಿನ ವರದಿಯಂತೆ ಒಟ್ಟು ಶೇ.67.68 ರಷ್ಟು ಮತದಾನವಾಗಿದೆ.

ಬೆಳಗ್ಗೆ 7 ಗಂಟೆಯಿಂದಲೇ ಪ್ರಾರಂಭಗೊಂಡ ಮತದಾನ, ಆರಂಭದಲ್ಲಿ ಬಿರುಸಿನಿಂದ, ಮಧ್ಯಾಹ್ನ ಮಂದಗತಿಯಲ್ಲಿ ನಂತರ ಸಂಜೆ ಮತ್ತೆ ಬಿರುಸಿನಿಂದ ಸಾಗಿತು. ಮತದಾರರ ಆಕರ್ಷಿಸಲು ಜಿಲ್ಲಾಡಳಿತದಿಂದ 5 ಕ್ಷೇತ್ರಗಳಲ್ಲಿ ವಿಭಿನ್ನ ಪರಿಕಲ್ಪನೆಯ ಮತಗಟ್ಟೆಗಳನ್ನು ತೆರೆಯಲಾಗಿತ್ತು. ಸಖಿ ಮತಗಟ್ಟೆ, ಯುವ ಮತಗಟ್ಟೆ, ವಿಕಲಚೇತನ ಮತಗಟ್ಟೆ ಹಾಗೂ ಪರಿಸರ ಸ್ನೇಹಿ, ಸಾಂಪ್ರದಾಯಿಕ ಮತ್ತು ವಿಷಯಾಧಾರಿತ ಮತಗಟ್ಟೆ ತೆರೆದು ಮತದಾನಕ್ಕೆ ಪ್ರೇರಣೆಯಾದವು.
ಜಿಲ್ಲೆಯಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 676 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 515 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,222 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಕಂಪ್ಲಿ-240, ಸಿರಗುಪ್ಪ-227, ಬಳ್ಳಾರಿ ಗ್ರಾಮೀಣ-242, ಬಳ್ಳಾರಿ ನಗರ-262 ಹಾಗೂ ಸಂಡೂರು ಕ್ಷೇತ್ರದ 251 ಮತಗಟ್ಟೆಗಳಲ್ಲಿ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು.

ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗಿನ ಶೇಕಡಾವಾರು ಮತದಾನ ಪ್ರಮಾಣ ವಿವರ ಇಂತಿದೆ:

ಬೆಳಿಗ್ಗೆ 9 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.11.54, ಸಿರುಗುಪ್ಪ ಕ್ಷೇತ್ರ-ಶೇ.9.53, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.8.54, ಬಳ್ಳಾರಿ ನಗರ ಕ್ಷೇತ್ರ-ಶೇ.7.26 ಮತ್ತು ಸಂಡೂರು ಕ್ಷೇತ್ರ-ಶೇ.5.90 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.8.5 ರಷ್ಟು ಮತದಾನವಾಗಿದೆ.
ಬೆಳಿಗ್ಗೆ 11 ಗಂಟೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.30.75, ಸಿರುಗುಪ್ಪ ಕ್ಷೇತ್ರ-ಶೇ.25.84, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.24.0, ಬಳ್ಳಾರಿ ನಗರ ಕ್ಷೇತ್ರ-ಶೇ.19.22 ಮತ್ತು ಸಂಡೂರು ಕ್ಷೇತ್ರ-ಶೇ.19.03 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.23.76 ರಷ್ಟು ಮತದಾನವಾಗಿದೆ.

ಮಧ್ಯಾಹ್ನ 01 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.49.89, ಸಿರುಗುಪ್ಪ ಕ್ಷೇತ್ರ-ಶೇ.43.29, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.40.33, ಬಳ್ಳಾರಿ ನಗರ ಕ್ಷೇತ್ರ-ಶೇ.31.75 ಮತ್ತು ಸಂಡೂರು ಕ್ಷೇತ್ರ-ಶೇ.35.18 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.39.74 ರಷ್ಟು ಮತದಾನವಾಗಿದೆ.

ಮಧ್ಯಾಹ್ನ 03 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.64.84, ಸಿರುಗುಪ್ಪ ಕ್ಷೇತ್ರ-ಶೇ.57.18, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.53.04, ಬಳ್ಳಾರಿ ನಗರ ಕ್ಷೇತ್ರ-ಶೇ.41.78 ಮತ್ತು ಸಂಡೂರು ಕ್ಷೇತ್ರ-ಶೇ.51.95 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.53.27 ರಷ್ಟು ಮತದಾನವಾಗಿದೆ.
ಸಂಜೆ 05 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.78.39, ಸಿರುಗುಪ್ಪ ಕ್ಷೇತ್ರ-ಶೇ.71.15, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.67.51, ಬಳ್ಳಾರಿ ನಗರ ಕ್ಷೇತ್ರ-ಶೇ.54.84 ಮತ್ತು ಸಂಡೂರು ಕ್ಷೇತ್ರ-ಶೇ.69.09 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.67.68 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Also read: ಬೀದರ್ ನಲ್ಲಿ ಮತದಾನ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಕ್ಷೇತ್ರವಾರು ಮತದಾರರ ವಿವರ:
ಕಂಪ್ಲಿ ವಿಧಾನಸಭಾ ಕ್ಷೇತ್ರ: 91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ 1,06,528 ಪುರುಷ ಮತದಾರರು, 1,07,882 ಮಹಿಳೆ ಮತದಾರರು ಹಾಗೂ 29 ಜನ ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,14,439 ಮತದಾರರಿದ್ದಾರೆ. ಅದರಲ್ಲಿ 8,084 ಯುವ ಮತದಾರರು, 2,509 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು, 4,331 ವಿಶೇಷ ಚೇತನ ಮತದಾರರಿದ್ದಾರೆ.

ಸಿರುಗುಪ್ಪ ವಿಧಾನಸಭಾ ಕ್ಷೇತ್ರ: 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ 1,06,789 ಪುರುಷ ಮತದಾರರು, 1,10,354 ಮಹಿಳೆ ಮತದಾರರು ಹಾಗೂ 38 ಜನ ಇತರೆ ಮತದಾರರಿದ್ದು, ಒಟ್ಟು 2,17,181 ಮತದಾರರಿದ್ದಾರೆ. ಅದರಲ್ಲಿ 7,024 ಯುವ ಮತದಾರರು, 3,128 ಜನ 80 ವರ್ಷ ಮೇಲ್ಪಟ್ಟ ಮತದಾರರು, 3,696 ವಿಶೇಷಚೇತನ ಮತದಾರರಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕೇತ್ರದಲ್ಲಿ 1,16,096 ಪುರುಷ ಮತದಾರರು, 1,22,181 ಮಹಿಳೆ ಮತದಾರರು ಹಾಗೂ 49 ಜನ ಇತರೆ ಮತದಾರರಿದ್ದು, ಒಟ್ಟು 2,38,326 ಮತದಾರರಿದ್ದಾರೆ. ಅದರಲ್ಲಿ 7,940 ಯುವ ಮತದಾರರು, 3,436 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು, 3,001 ವಿಶೇಷ ಮತದಾರಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ: 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 1,26,067 ಪುರುಷ ಮತದಾರರು, 1,33,087 ಮಹಿಳೆ ಮತದಾರರು ಮತ್ತು 30 ಲಿಂಗತ್ವ ಅಲ್ಪ ಸಂಖ್ಯಾತ ಮತದಾರರು ಸೇರಿ ಒಟ್ಟು 2,59,184 ಮತದಾರರಿದ್ದಾರೆ.

ಅದರಲ್ಲಿ 8,432 ಯುವ ಮತದಾರರು, 4,691 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು, 1,383 ವಿಶೇಷ ಚೇತನ ಮತದಾರರಿದ್ದಾರೆ.

https://kalpa.news/wp-content/uploads/2023/04/Christ-King-PU-College-Video-1.mp4

ಸಂಡೂರು ವಿಧಾನಸಭಾ ಕ್ಷೇತ್ರ: 95-ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ 1,11,839 ಪುರುಷ ಮತದಾರರು, 1,11,416 ಮಹಿಳೆ ಮತದಾರರು ಮತ್ತು ಇತರೆ 26 ಜನ ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಒಳಗೊಂಡು ಒಟ್ಟು 2,23,281 ಮತದಾರರಿದ್ದಾರೆ. ಈ ಪೈಕಿ 7,879 ಯುವ ಮತದಾರರು, 3,081 ಜನ ವಯಸ್ಕ ಮತದಾರರು, 2,694 ವಿಶೇಷಚೇತನ ಮತದಾರರಿದ್ದಾರೆ.

ಕಳೆದ 2018 ರಲ್ಲಿ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಶೇ.77.65, ಸಿರುಗುಪ್ಪ ಕ್ಷೇತ್ರ-ಶೇ.74.59, ಬಳ್ಳಾರಿ ಗ್ರಾಮೀಣ-ಶೇ.74.25, ಬಳ್ಳಾರಿ ನಗರ-ಶೇ.64.44 ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.74.44 ರಷ್ಟು ಅಂದರೆ ಒಟ್ಟಾರೆ ವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಶೇ.73.07 ರಷ್ಟು ಮತದಾನವಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್ ನಲ್ಲಿ ಮತದಾನ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳು ಭದ್ರ: ಸಿಆರ್’ಪಿಎಫ್ ಯೋಧರು, ಪೊಲೀಸ್ ಸರ್ಪಗಾವಲು

kalpa News

kalpa News

Next Post
ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳು ಭದ್ರ: ಸಿಆರ್’ಪಿಎಫ್ ಯೋಧರು, ಪೊಲೀಸ್ ಸರ್ಪಗಾವಲು

ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳು ಭದ್ರ: ಸಿಆರ್'ಪಿಎಫ್ ಯೋಧರು, ಪೊಲೀಸ್ ಸರ್ಪಗಾವಲು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL