ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಜಿಲ್ಲೆ ಸಿರುಗುಪ್ಪ ತಾಲೂಕಿನ ಮಿಟ್ಟೇಸೂಗುರು ಗ್ರಾಮದಲ್ಲಿ ಇಂದು ಅಯೋಧ್ಯೆಯಿಂದ ಬಂದಿರುವಂತಹ ರಾಮ ಮಂದಿರ ಪ್ರಾಣ Ayodhya Rama Mandira ಪ್ರತಿಷ್ಠೆಯ ಪವಿತ್ರ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆಗಳಿಗೆ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ವಿಶ್ವಹಿಂದೂ ಪರಿಷತ್ತಿನ ಹಿರಿಯರಾದ ಕೆ. ವೆಂಕಟರೆಡ್ಡಿ ಅವರಿಗೆ ಮಂತ್ರಾಕ್ಷತೆ ಆಮಂತ್ರಣ ಪತ್ರಿಕೆ ನೀಡಿದ ಬಳಿಕ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆ ವಿತರಿಸಿದರು.
Also read: ನಟ ಯಶ್ ಕಟೌಟ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮೂವರ ಸಾವು
ಈ ಸಂದರ್ಭದಲ್ಲಿ ಅಖಿಲ ಭಾರತೀಯ ಸಂತ ಸಮಿತಿ, ಬಳ್ಳಾರಿ ಜಿಲ್ಲಾ ಸಂಯೋಜಕರಾದ ಕುಮಾರ ನಾಯಕ್, ಶ್ರೀನಿವಾಸ, ನಮೀತ್ ಕುಮಾರ್ ಹಾಗೂ ಶರತ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















