ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಆದೇಶಿಸಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಫೆ.14ರಂದು ಕೊನೆಯ ದಿನವಾಗಿರುತ್ತದೆ. ಫೆ.15ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಫೆ.17 ಕೊನೆಯ ದಿನವಾಗಿರುತ್ತದೆ. ಮತದಾನವು ಫೆ.25ರಂದು ನಡೆಯಲಿದೆ.
ಖಾಲಿ ಇರುವ ಗ್ರಾಮ ಪಂಚಾಯಿತಿಗಳ ವಿವರ:
ಬಳ್ಳಾರಿ ತಾಲೂಕಿನ ಯರ್ರಗುಡಿ ಗ್ರಾಮ ಪಂಚಾಯಿತಿ ಖಾಲಿ ಇರುವ ಸ್ಥಾನ 1, ಚಾನಾಳ್ ಖಾಲಿ ಇರುವ ಸ್ಥಾನ 1, ಕುರುಗೋಡು ತಾಲೂಕಿನ ಗೆಣಿಕೆಹಾಳು ಸ್ಥಾನ 1, ಸಿರುಗುಪ್ಪ ತಾಲೂಕಿನ ಬಿ.ಎಂ ಸೂಗೂರು 2 ಸ್ಥಾನ ಇದರಲ್ಲಿ ಸಾಮಾನ್ಯ ಹಾಗೂ ಸಾಮಾನ್ಯ ಮಹಿಳೆ ಮೀಸಲಾತಿ ಇರುತ್ತದೆ. ಸಂಡೂರು ತಾಲೂಕಿನ ದೇವಗಿರಿಯ ಸ್ಥಾನ 1ಕ್ಕೆ ಉಪ ಚುನಾವಣೆ ನಡೆಯಲಿದೆ.
Also read: ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ
ಫೆ.8 ರಿಂದ ನೀತಿ ಸಂಹಿತೆ ಜಾರಿ:
ಬಳ್ಳಾರಿ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸದಸ್ಯರ ನೇಮಕಕ್ಕೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾದೆ. ಉಪಚುನಾವಣೆ ಶಾಂತಯುತ ಹಾಗೂ ಮುಕ್ತವಾಗಿ ನಡೆಸಲು ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು ತಹಶೀಲ್ದಾರರ ಉಸ್ತುವಾರಿಯಲ್ಲಿ ತಾಲೂಕು ಮಟ್ಟದ ಎಂಸಿಸಿ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಫೆ.25 ರಂದು ಬಳ್ಳಾರಿ, ಕುರುಗೋಡು, ಸಿರುಗುಪ್ಪ ಮತ್ತು ಸಂಡೂರು ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಯಲಿದೆ. ಮಾದರಿ ನೀತಿ ಸಂಹಿತೆಯು ಫೆ.8 ರಿಂದ 28ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ. ಚುನಾವಣೆಯನ್ನು ಶಾಂತಿಯುತ ಹಾಗೂ ಮುಕ್ತವಾಗಿ ನಡೆಸುವ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ.
ಎಂಸಿಸಿ ತಂಡದ ಮುಖ್ಯಸ್ಥರು ಚುನಾವಣಾ ಆಯೋಗವು ನೀಡಿರುವ ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅದೇಶದಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post