ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ನಟ ದರ್ಶನ್ #Darshan ಅವರನ್ನು ಶಿಫ್ಟ್ ಮಾಡಲಾಗಿದ್ದು, ಬೆಳಗ್ಗೆ 9:45ರ ಸುಮಾರಿಗೆ ಬಳ್ಳಾರಿ ಜೈಲು ತಲುಪಿದರು.
ನಿಯಮದ ಪ್ರಕಾರ ರಾತ್ರಿ ವೇಳೆ ವಿಚಾರಣಾದೀನ ಕೈದಿಗಳನ್ನು ಸ್ಥಳಾಂತರ ಮಾಡುವಂತಿಲ್ಲ. ಆದರೆ ಭದ್ರತಾ ದೃಷ್ಟಿಯಿಂದ ದರ್ಶನ್ರನ್ನು ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಹೊರಟಿದ್ದರು. ಕಪ್ಪು ಬಣ್ಣದ ಪೂಮಾ ಟೀಶರ್ಟ್ ಧರಿಸಿದ್ದ ದರ್ಶನ್, ಕಾಲರ್ಗೆ ಕೂಲಿಂಗ್ ಗ್ಲಾಸ್, ಕೈಯಲ್ಲಿ ಜರ್ಕಿನ್ (ಜಾಕೇಸ್) ವಾಟರ್ ಬಾಟಲ್ ಹಿಡಿದುಕೊಂಡಿದ್ದರು. ಸುತ್ತಲೂ 20ಕ್ಕೂ ಅಧಿಕ ಪೊಲೀಸರು ಭದ್ರತೆಯೊಂದಿಗೆ ಜೈಲಿನ ವೈದ್ಯಕೀಯ ಕೊಠಡಿಗೆ ಕರೆದುಕೊಂಡು ಹೋದರು.

Also read: ನಟ ಚಿಕ್ಕಣ್ಣಗೆ ಮತ್ತೊಮ್ಮೆ ಸಂಕಷ್ಟ | ಎಸಿಪಿ ನೋಟೀಸ್ ಜಾರಿ ಹಿನ್ನೆಲೆ: ಠಾಣೆಗೆ ಹಾಜರು
ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ #Renukaswamy Murder Case ಬಂಧನಕ್ಕೀಡಾಗಿದ್ದು, ಆ ಕೇಸ್ನ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆ ಅವರನ್ನು ನ್ಯಾಯಾಂಗ ತನಿಖೆಗೆ ನೀಡಲಾಗಿದೆಯಷ್ಟೇ. ಅವರು ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಜೈಲಿನ ನಿಯಮಗಳಂತೆ ಕೈದಿಗಳಿಗೆ ಮಾತ್ರವೇ ಸಮವಸ್ತ್ರ ನೀಡಲಾಗುತ್ತದೆ. ವಿಚಾರಣಾಧೀನ ಕೈದಿಗಳು ತಮ್ಮ ಇಚ್ಛೆಯ ಸಾಮಾನ್ಯ ಉಡುಪು ಧರಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post