ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಕಾಂಗ್ರೆಸ್ ತನ್ನ 30 ಸಚಿವರನ್ನು ಬಳ್ಳಾರಿಗೆ ಕರೆತಂದು ಎಷ್ಟೇ ಪ್ರಚಾರ ನಡೆಸಿದರೂ, ಶ್ರೀರಾಮುಲು #Shriramulu ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹೇಳಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಅವರ ನಾಮಪತ್ರ ಸಲ್ಲಿಕೆಗಾಗಿ ನಗರದಲ್ಲಿ ಆಗಮಿದ ವೇಳೆ ಅವರು ಮಾತನಾಡಿದರು.
ಕಾಂಗ್ರೆಸ್ ತನ್ನ 30 ಸಚಿವರನ್ನೂ ಕರೆತಂದು ಪ್ರಯತ್ನಪಟ್ಟರೂ ಬಳ್ಳಾರಿಯಲ್ಲಿ ಶ್ರೀರಾಮುಲು ಗೆಲುವು ನಿಶ್ಚಿತ. ಕಾಂಗ್ರೆಸ್ ಎಷ್ಟೇ ಪ್ರಯತ್ನಪಟ್ಟರೂ ಶ್ರೀರಾಮುಲು ದಾಖಲೆ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Also read: ಭದ್ರಾವತಿ | ಹೀಗೆ ಬಂದು ಕೊಂಚ ಅಬ್ಬರಿಸಿ ಹಾಗೆಯೇ ಹೋದ ಮಳೆರಾಯ
ಎಲ್ಲ 28 ಕ್ಷೇತ್ರಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಗೆಲ್ಲಬೇಕು ಎಂಬುದೇ ನಮ್ಮ ಗುರಿಯಾಗಿದೆ. ಆ ಒಂದು ಆತ್ಮವಿಶ್ವಾಸದೊಂದಿಗೆ ನಾವೀಗ ಮುನ್ನುಗ್ಗುತ್ತಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post