Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿಎಂ

November 28, 2024
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಕರೆ ನೀಡಿದರು.‌

ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ ಧರ್ಮ ಸಂಸ್ಥೆ ನೀಡಿದ ಉಚಿತ ಮನೆಗಳನ್ನು ಹಸ್ತಾಂತರಿಸಿ ಮಾತನಾಡಿ, ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು.
ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.

Also read: ಕುವೆಂಪು ವಿವಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು.

ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು.
ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು.

ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.
ಕ್ರೈಸ್ತ ಧರ್ಮ ಗುರುಗಳು, ಕ್ರೈಸ್ತ ಸಂಸ್ಥೆಗಳು ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೂ ಶಿಕ್ಷಣ ಕೊಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ದೊಡ್ಡ ಕೊಡುಗೆ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಸಿಕ್ಕಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ ಎಂದರು.

ದೇವ ಒಂದೇ ನಾಮ ಹಲವು ಎನ್ನುವುದು ಎಲ್ಲರ ನಂಬಿಕೆ. ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶ ಎಂದು ಬಸವಾದಿ ಶರಣರು ಹೇಳಿದ್ದು ಈ ಕಾರಣಕ್ಕಾಗಿಯೇ ಎನ್ನುತ್ತಾ, ದೇವರಿಲ್ಲದ ಜಾಗವೇ ಇಲ್ಲ ಎನ್ನುವ ಸಂದೇಶವನ್ನು ಸಾರಿದ ಕನಕದಾಸರ ಬಾಳೆಹಣ್ಣಿನ ಕತೆಯನ್ನು ವಿವರಿಸಿದರು.

ಅಂಬೇಡ್ಕರ್ ಅವರು ಸಂವಿಧಾನ ಅಂಗೀಕಾರ ಸಭೆಯಲ್ಲಿ ಮಾಡಿದ ಭಾಷಣವನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು.

ಕ್ರೈಸ್ತ ಧರ್ಮದ ಮಹಾನ್ ಧರ್ಮಗುರು ಪೀಟರ್ ಮಚಾಡೋ, ಸಚಿವರಾದ ಕೆ.ಜೆ.ಜಾರ್ಜ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಸಕರಾದ ಭರತ್ ರೆಡ್ಡಿ, ನಾಗೇಂದ್ರ, ಅನ್ನಪೂರ್ಣ ತುಕಾರಾಮ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BallaryCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಳ್ಳಾರಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಕುವೆಂಪು ವಿವಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Next Post

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!