Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ

ಮಾ.3 ವಿಶ್ವ ಶ್ರವಣ ದಿನ | ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ. ಈ ಧ್ಯೇಯವನ್ನು ವಾಸ್ತವವಾಗಿಸೋಣ: ಸಚಿವ ಸುಧಾಕರ್‌ ಕರೆ

March 3, 2023
in ಬೆಂಗಳೂರು ನಗರ
0 0
0
File image

File image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯ ಸರ್ಕಾರದ ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ, ಇದೇ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Minister Sudhakar‌ ತಿಳಿಸಿದ್ದಾರೆ.

ಪ್ರತಿ ವರ್ಷ ಮಾರ್ಚ್‌ 3 ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಎಲ್ಲಾ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ ತರಲಾಗಿದೆ. ಇದರಲ್ಲಿ, ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಉಳಿದ 577 ಫಲಾನುಭವಿಗಳಿಗೆ ವಿವಿಧ ಹಂತದಲ್ಲಿ ಕಾಕ್ಲಿಯಾರ್‌ ಶಸ್ತ್ರಚಿಕಿತ್ಸೆಗಾಗಿ ತಯಾರಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
2,00,305 ಮಂದಿಗೆ ಶ್ರವಣ ದೋಷ

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಿಶ್ವದಾದ್ಯಂತ 430 ದಶಲಕ್ಷ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ. 2050 ರ ವೇಳೆಗೆ ಈ ಸಂಖ್ಯೆ 700 ದಶಲಕ್ಷ ದಾಟುವ ಆತಂಕವಿದೆ. ರಾಜ್ಯದಲ್ಲಿ 2008-09 ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮ ವಿಭಾಗದಿಂದ, 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲಾ ಇ.ಎನ್.ಟಿ ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಶ್ವ ಶ್ರವಣ ದಿನದಂದು, ಎಲ್ಲಾ ಜಿಲ್ಲೆಗಳಲ್ಲಿ ಶ್ರವಣ ತಪಾಸಣಾ ಶಿಬಿರ ನಡೆಸಿ ಚಿಕಿತ್ಸೆ ಒದಗಿಸಲಾಗುವುದು. 6 ವರ್ಷದೊಳಗಿನ ಮಕ್ಕಳಲ್ಲಿ ಎರಡು ಕಿವಿಗಳಲ್ಲಿ ಗಂಭೀರ ಸ್ವರೂಪದ ಶ್ರವಣ ದೋಷಗಳನ್ನು ಗುರುತಿಸಿ ಕಾಕ್ಲಿಯಾರ್‌ ಇಂಪ್ಲಾಂಟ್‌ ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ಮತ್ತು ಸಂಘ ಸಂಸ್ಥೆಗಳಿಂದ ಶ್ರವಣ ಸಾಧನಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.
ಶ್ರವಣ ದೋಷದ ಬಗ್ಗೆ

20 ಡಿಎಲ್ ಗಳಿಗಿಂತ ಕಡಿಮೆ ಶಬ್ದವನ್ನು ಯಾರಿಗೆ ಕೇಳಲಾಗುವುದಿಲ್ಲವೋ ಅವರಿಗೆ ಶ್ರವಣ ದೋಷದ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಶ್ರವಣ ದೋಷವು ವಿವಿಧ ಕಾರಣಗಳಿಂದ ಸಂಭವಿಸಬಹುದು.

ಶ್ರವಣ ದೋಷಕ್ಕೆ ಕಾರಣ

ಜೆನೆಟಿಕ್ಸ್, ಜೋರಾದ ಶಬ್ದ, ಸೋಂಕು, ದೀರ್ಘಕಾಲದ ಕಾಯಿಲೆಗಳು ( ಟಿ.ಬಿ, ಕ್ಯಾನ್ಸರ್‌), ಗರ್ಭಿಣಿಯರಲ್ಲಿ ಉಂಟಾಗುವ ಸೋಂಕುಗಳು (TORCH) ದೀರ್ಘ ಕಾಲ ತೆಗೆದುಕೊಳ್ಳುವ ಔಷಧಿಗಳಿಂದ, ರಕ್ತ ಸಂಬಂಧದಲ್ಲಿ ಮದುವೆ, ಹೆರಿಗೆ ವೇಳೆ ಸಮಸ್ಯೆ, ಅವಧಿಪೂರ್ವ ಜನನ, ವಯಸ್ಸಿಗೆ ತಕ್ಕಂತೆ ಆಗದ ಬೆಳವಣಿಗೆ, ಜೋರಾದ ಪೆಟ್ಟು ಬೀಳುವುದರಿಂದ, ಕಿವಿಯೊಳಗೆ ಅನವಶ್ಯಕವಾಗಿ ಕಡ್ಡಿ, ಪೆನ್ಸಿಲ್‌ ಅಥವಾ ಇನ್ಯಾವುದೇ ವಸ್ತುಗಳನ್ನು ಹಾಕುವುದರಿಂದ.
ಶ್ರವಣ ದೋಷ ತಡೆಗಟ್ಟುವ ಕ್ರಮ

ನಿಯಮಿತ ಶ್ರವಣ ಪರೀಕ್ಷೆ, ನವಜಾತ ಶಿಶುಗಳಿಗೆ ಶ್ರವಣ ಪರೀಕ್ಷೆ, ಗರ್ಭಿಣಿಯರಿಗೆ ಶ್ರವಣ ಪರೀಕ್ಷೆ, ವಯಸ್ಕರು ಹೆಚ್ಚು ಶಬ್ದವನ್ನು ನಿರಂತರವಾಗಿ ಕೇಳುವುದನ್ನು ಕಡಿಮೆ ಮಾಡುವುದರಿಂದ, ಹೆಚ್ಚು ಶಬ್ದ ಇರುವಲ್ಲಿ (ಕಾರ್ಖಾನೆ] ಕಿವಿಗಳಿಗೆ ಹಿಯರ್‌ ಪ್ಯಾಡ್ಸ್ ಅಳವಡಿಕೆ, ರಕ್ತ ಸಂಬಂಧದಲ್ಲಿ ಮದುವೆಯಾಗಬಾರದು, ಪ್ರಾಥಮಿಕ ಹಂತದಲ್ಲಿ ಕಿವಿಯ ತೊಂದರೆಗಳನ್ನು ಗುರುತಿಸಿ ಚಿಕಿತ್ಸೆ, ಯಾವುದೇ ಔಷಧಿಗಳನ್ನು ವೈದ್ಯರ ಸಲಹೆಯಿಂದಲೇ ಪಡೆಯುವುದು, ಧೀರ್ಘ ಕಾಲದ ಚಿಕಿತ್ಸಾವಧಿಯಲ್ಲಿ ನಿಯಮಿತವಾಗಿ ಶ್ರವಣ ಪರೀಕ್ಷೆ ಮಾಡಿಸಿಕೊಳ್ಳುವುದು,

ಶ್ರವಣ ದೋಷಕ್ಕೆ ಸರಿಯಾದ ಚಿಕಿತ್ಸೆ

ಪ್ರಾರಂಭಿಕ ಹಂತದಲ್ಲೇ ಶ್ರವಣ ದೋಷ ಪರೀಕ್ಷೆ, ಗುಗ್ಗೆ ಮತ್ತು ಇತರೆ ಸೋರಿಕೆಯಿದ್ದಲ್ಲಿ ಕಿವಿಯನ್ನು ಸ್ವಚ್ಛಗೊಳಿಸುವುದು ಮತ್ತು ಚಿಕಿತ್ಸೆ ನೀಡುವುದು, ಗಂಟಿನ ತೊಂದರೆ, ಕಿವಿಯ ತಮಟೆಗೆ ಪೆಟ್ಟಾಗಿದ್ದಲ್ಲಿ ಚಿಕಿತ್ಸೆ ನೀಡುವುದು, ಸೋಂಕು ಅಥವಾ ಉರಿಯೂತ ಇದ್ದಲ್ಲಿ ಚಿಕಿತ್ಸೆ ನೀಡುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಸಚಿವ ಡಾ. ಕೆ ಸುಧಾಕರ್
Previous Post

ಗಾಂಜಾ ಮಾರಾಟ ಹಿನ್ನೆಲೆ: ಇಬ್ಬರಿಗೆ ಆರು ತಿಂಗಳು ಕಠಿಣ ಸಜೆ

Next Post

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!