No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.27ರಂದು 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ

ಬೆಂಗಳೂರಿನ‌ ನಾಲ್ಕು ದಿಕ್ಕುಗಳಿಂದ ವಿಧಾನಸೌಧದತ್ತ ಮೆರವಣಿಗೆ | ಪತ್ರಿಕಾಗೋಷ್ಠಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಮಾಹಿತಿ

kalpa News by kalpa News
January 25, 2025
in ಬೆಂಗಳೂರು ನಗರ
0
ಜ.27ರಂದು 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಸುವರ್ಣ ಮಹೋತ್ಸವದ #Karnataka Suvarna Mahothsava ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ #Kannada Bhuvaneshwari ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ.

ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ #Minister Shivaraj Thangadagi ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಮೇಲಿನ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಮಾಧ್ಯಮದ ಮೂಲಕ ಮನವಿ ಮಾಡಿದರು.

ಪ್ರತಿಮೆಯ ವೈಶಿಷ್ಟ್ಯತೆ

  • ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು
  • ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್
  • ಭುವನೇಶ್ವರಿ ಪ್ರತಿಮೆ – 20 ಟನ್
  • ಕರ್ನಾಟಕ ನಕ್ಷೆ – 11.50 ಟನ್
  • ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) – 4500 ಚ.ಮೀ
  • ಕಲ್ಲು ಕಟ್ಟಡದ ಪೀಠದ ವಿವರ – ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಿಸಲಾಗಿದೆ.
  • ಕಾಮಗಾರಿಯ ಅಂದಾಜು ವೆಚ್ಚ : 21‌.24 ಕೋಟಿ
  • ಕಾಮಗಾರಿ ನಿರ್ವಹಣೆ: ಲೋಕೋಪಯೋಗಿ ಇಲಾಖೆ     

ಸಾರಿಗೆ ಬಸ್ ನಲ್ಲಿ ಹಾರಾಡಲಿದೆ ಕನ್ನಡದ ಧ್ವಜ

ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಅಂದು ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳನ್ನು ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದರು.‌
ಹೊಯ್ಸಳ ಶೈಲೀಯ ಪೀಠ ನಿರ್ಮಾಣ

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅದುಕೊಂಡಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿ ಬಂದಿದೆ ಎಂದು ಸಚಿವರು ಹೇಳಿದರು.

ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.

Also read: ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಮೆ ಅನಾವರಣದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳನ್ನು ಇಡಲಾದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ. ಪೂರ್ವ ದಿಕ್ಕಿನಿಂದ (ಇಂದಿರಾ ನಗರ ): ಪಂಪ, ರನ್ನ, ಪೊನ್ನ, ಜನ್ನ, ಸರ್‌.ಎಂ. ವಿಶ್ವೇಶ್ವರಯ್ಯ, ಸರ್‌ ಸಿ.ವಿ. ರಾಮನ್, ಸಿ.ಎನ್‌.ಆರ್‌. ರಾವ್, ಭೀಮ್‌ಸೇನ್‌ ಜೋಷಿ, ಡಾ. ರಾಜ್‌ಕುಮಾರ್‌, ಎಸ್.‌ ನಿಜಲಿಂಗಪ್ಪ, ಶ್ರೀ ಶಿವಕುಮಾರ ಸ್ವಾಮೀಜಿ‌, ದೇ. ಜವರೇಗೌಡ, ಡಾ. ವಿರೇಂದ್ರ ಹೆಗಡೆ, ಡಾ. ಪುನೀತ್‌ ರಾಜ್‌ಕುಮಾರ್ ಅವರ ಫೋಟೋವಿರುವ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ.

ಪಶ್ಚಿಮ ದಿಕ್ಕು: (ಕೆಂಗೇರಿ ಉಪನಗರ ): ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ, ಮಾಸ್ತಿ ವೆಂಕಟೇಶ ಅಯ್ಯಾಂಗಾರ್‌, ವಿ‌.ಕೃ. ಗೋಕಾಕ್‌, ಡಾ. ಯು. ಆರ್.‌ ಅನಂತ ಮೂರ್ತಿ, ಡಾ. ಗಿರೀಶ್‌ ಕಾರ್ನಾಡ್‌, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್.‌ ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿದೆ.

ಉತ್ತರ ದಿಕ್ಕು : (ಹೆಬ್ಬಾಳ) ಈ ದಿಕ್ಕಿನಿಂದ
ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ ಹಲ್ಮಿಡಿ ಶಾಸನದ ಪ್ರತಿರೂಪ ಇರಲಿದೆ.

ದಕ್ಷಿಣ ದಿಕ್ಕು : (ಬಸವನಗುಡಿ ಬುಲ್ ಟೆಂಪಲ್ ) ಇನ್ನು ದಕ್ಷಿಣ ದಿಕ್ಕಿನಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್ ಎಫ್ ಕಿಟ್ಟೆಲ್, ಬಿ.ಎಲ್.‌ ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ ಭುವನೇಶ್ವರಿ ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ. ಅಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಾಡದೇವಿ ಭುವನೇಶ್ವರಿ ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ ಎಂದು ಸಚಿವರು ವಿವರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada BhuvaneshwariKannada News WebsiteKannada_NewsKannada_News_LiveKannada_News_OnlineKannada_WebsiteKarnataka Suvarna MahothsavaLatest News KannadaMinister Shivaraj ThangadagiNews_in_KannadaNews_Kannadaಕರ್ನಾಟಕ ಸುವರ್ಣ ಮಹೋತ್ಸವಬೆಂಗಳೂರುಭುವನೇಶ್ವರಿಸಚಿವ ಶಿವರಾಜ್ ಎಸ್. ತಂಗಡಗಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಬೆಂಗಳೂರು | ಪ್ರೇಕ್ಷಕರ ಮನಸೆಳೆದ ಅಹಿಕಾ ವೀಣಾ ವಾದನ

kalpa News

kalpa News

Next Post
ಬೆಂಗಳೂರು | ಪ್ರೇಕ್ಷಕರ ಮನಸೆಳೆದ ಅಹಿಕಾ ವೀಣಾ ವಾದನ

ಬೆಂಗಳೂರು | ಪ್ರೇಕ್ಷಕರ ಮನಸೆಳೆದ ಅಹಿಕಾ ವೀಣಾ ವಾದನ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL